AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pranitha Subhash: ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿದ ಪ್ರಣಿತಾ; ‘ಹಿಂದೂಗಳ ಜೀವ ಮುಖ್ಯ’ ಎಂದು ಫಲಕ ಹಿಡಿದ ನಟಿ

Udaipur Killing: ‘ಉದಯಪುರ ವಿಡಿಯೋವನ್ನು ನಾನು ನೋಡಲೇಬಾರದಿತ್ತು. ನಿಜಕ್ಕೂ ಭಯಾನಕ’ ಎಂದು ಪ್ರಣಿತಾ ಸುಭಾಷ್​ ಪೋಸ್ಟ್​ ಮಾಡಿದ್ದಾರೆ.

Pranitha Subhash: ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿದ ಪ್ರಣಿತಾ; ‘ಹಿಂದೂಗಳ ಜೀವ ಮುಖ್ಯ’ ಎಂದು ಫಲಕ ಹಿಡಿದ ನಟಿ
ಪ್ರಣಿತಾ ಸುಭಾಷ್
TV9 Web
| Edited By: |

Updated on:Jun 30, 2022 | 10:17 AM

Share

ಉದಯಪುರದ ಟೈಲರ್ ಕನ್ಹಯ್ಯ ಲಾಲ್ (Kanhaiya Lal) ಹತ್ಯೆ ಖಂಡಿಸಿ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಹಾಡಹಗಲೇ ಇಂಥ ಹೇಯ ಕೃತ್ಯ ನಡೆದಿರುವುದಕ್ಕೆ ಹಲವು ಸೆಲೆಬ್ರಿಟಿಗಳು ಕೂಡ ಅಸಮಾಧಾನ ಹೊರಹಾಕಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಬಗ್ಗೆ ನಟ-ನಟಿಯರು ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಬಾಲಿವುಡ್ ನಟ ಅನುಪಮ್​ ಖೇರ್​ (Anupam Kher), ಸ್ಯಾಂಡಲ್​ವುಡ್​ ನಟಿ ಪ್ರಣಿತಾ ಸುಭಾಷ್​ ಅವರು ಕೂಡ ಈ ಕುರಿತು ಪೋಸ್ಟ್​ ಮಾಡಿದ್ದಾರೆ. ‘ಹಿಂದೂಗಳ ಜೀವ ಮುಖ್ಯ’ ಎಂದು ಪ್ರಣಿತಾ ಅವರು ಫಲಕ ಹಿಡಿದು ನಿಂತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ನೆಟ್ಟಿಗರು ನಾನಾ ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಕನ್ಹಯ್ಯ ಲಾಲ್ ಹತ್ಯೆಯಿಂದಾಗಿ ಮನಸು ವಿಚಲಿತವಾಗಿದೆ ಎಂದು ಪ್ರಣಿತಾ ಸುಭಾಷ್​ (Pranitha Subhash) ಹೇಳಿದ್ದಾರೆ. ಸದ್ಯ ಅವರ ಸೋಶಿಯಲ್​ ಮೀಡಿಯಾ ಪೋಸ್ಟ್​ ವೈರಲ್​ ಆಗುತ್ತಿದೆ.

‘ಉದಯಪುರ ವಿಡಿಯೋವನ್ನು ನಾನು ನೋಡಲೇಬಾರದಿತ್ತು. ನಿಜಕ್ಕೂ ಭಯಾನಕ. ಹಿನ್ನೆಲೆಯಲ್ಲಿ ಕೇಳಿಸಿದ ಆ ಚೀರಾಟ ನಮ್ಮ ಮನದಲ್ಲಿ ಪ್ರತಿಧ್ವನಿಸುತ್ತಲೇ ಇರುತ್ತದೆ ಮತ್ತು ದೀರ್ಘ ಕಾಲದವರೆಗೆ ಕಾಡುತ್ತಲೇ ಇರುತ್ತದೆ. #JusticeForKanhaiyaLal’ ಎಂದು ಪ್ರಣಿತಾ ಸುಭಾಸ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
Swara Bhaskar: ಸಲ್ಮಾನ್​ ಖಾನ್​ ಬಳಿಕ ನಟಿ ಸ್ವರಾ ಭಾಸ್ಕರ್​ಗೆ ಕೊಲೆ ಬೆದರಿಕೆ; ಸಾವರ್ಕರ್​ ಬಗ್ಗೆ ಮಾತಾಡಿದ್ದಕ್ಕೆ ಆಕ್ರೋಶ
Image
Udaipur murder ಒಬ್ಬ ಆರೋಪಿ 2014 ರಲ್ಲಿ ಕರಾಚಿಗೆ ಹೋಗಿದ್ದ, ಪಾಕಿಸ್ತಾನದ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡುತ್ತಿದ್ದ: ಪೊಲೀಸ್
Image
Udaipur murder ಉದಯಪುರ ಹತ್ಯೆಯ ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ಬಡ್ತಿ: ಅಶೋಕ್ ಗೆಹ್ಲೋಟ್
Image
Udaipur Murder ಸಾಮಾಜಿಕ ಮಾಧ್ಯಮಗಳಲ್ಲಿ ಬೆದರಿಕೆ ಕಾರಣ ಕನ್ಹಯ್ಯಾ ಕೆಲಸಕ್ಕೆ ಹೋಗಿರಲಿಲ್ಲ, ರಜೆ ನಂತರ ಹೋದಾಗ ಹೀಗಾಯ್ತು: ಕನ್ಹಯ್ಯಾ ಲಾಲ್ ಪತ್ನಿ

ಮತ್ತೊಂದು ಪೋಸ್ಟ್​ನಲ್ಲಿ ‘ಹಿಂದೂಗಳ ಜೀವ ಮುಖ್ಯ’ ಎಂದು ಪ್ರಣಿತಾ ಸುಭಾಷ್​​ ಅವರು ಫಲಕ ಹಿಡಿದು ನಿಂತಿರುವ ಫೋಟೋ ಹಂಚಿಕೊಂಡಿದ್ದಾರೆ. ‘ಯಾರಿಗಾದರೂ ಕೇಳುತ್ತಿದೆಯೇ’ ಎಂದು ಅವರ ಅದಕ್ಕೆ ಕ್ಯಾಪ್ಷನ್​ ನೀಡಿದ್ದಾರೆ. ಪೋಸ್ಟ್​ ಮಾಡಿದ ಕೆಲವೇ ಗಂಟೆಗಳಲ್ಲಿ 3 ಸಾವಿರಕ್ಕೂ ಅಧಿಕ ಜನರು ಇದಕ್ಕೆ ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ: Pranitha Subhash: ನಟಿ ಪ್ರಣಿತಾ ಸುಭಾಷ್​ಗೆ ಹೆಣ್ಣುಮಗು; ಇಲ್ಲಿದೆ ಫೋಟೋ

ಭಾರತದಲ್ಲಿ ಹಿಂದೂ ಟೆರರ್​ ಇದೆ ಎಂದವರಿಗೆ ನಟಿ ಪ್ರಣಿತಾ ಸುಭಾಷ್​ ತಿರುಗೇಟು; ನಿಮ್ಮ ಬಗ್ಗೆ ಹೆಮ್ಮೆ ಆಗ್ತಿದೆ ಎಂದ ಫ್ಯಾನ್ಸ್​

Published On - 10:17 am, Thu, 30 June 22

ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!