Sign In

By signing in or creating an account, you agree with Associated Broadcasting Company's Terms & Conditions and Privacy Policy.

Pranitha Subhash: ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿದ ಪ್ರಣಿತಾ; ‘ಹಿಂದೂಗಳ ಜೀವ ಮುಖ್ಯ’ ಎಂದು ಫಲಕ ಹಿಡಿದ ನಟಿ

Udaipur Killing: ‘ಉದಯಪುರ ವಿಡಿಯೋವನ್ನು ನಾನು ನೋಡಲೇಬಾರದಿತ್ತು. ನಿಜಕ್ಕೂ ಭಯಾನಕ’ ಎಂದು ಪ್ರಣಿತಾ ಸುಭಾಷ್​ ಪೋಸ್ಟ್​ ಮಾಡಿದ್ದಾರೆ.

Pranitha Subhash: ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿದ ಪ್ರಣಿತಾ; ‘ಹಿಂದೂಗಳ ಜೀವ ಮುಖ್ಯ’ ಎಂದು ಫಲಕ ಹಿಡಿದ ನಟಿ
ಪ್ರಣಿತಾ ಸುಭಾಷ್
Follow us
TV9 Web
| Updated By: ಮದನ್​ ಕುಮಾರ್​

Updated on:Jun 30, 2022 | 10:17 AM

ಉದಯಪುರದ ಟೈಲರ್ ಕನ್ಹಯ್ಯ ಲಾಲ್ (Kanhaiya Lal) ಹತ್ಯೆ ಖಂಡಿಸಿ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಹಾಡಹಗಲೇ ಇಂಥ ಹೇಯ ಕೃತ್ಯ ನಡೆದಿರುವುದಕ್ಕೆ ಹಲವು ಸೆಲೆಬ್ರಿಟಿಗಳು ಕೂಡ ಅಸಮಾಧಾನ ಹೊರಹಾಕಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಬಗ್ಗೆ ನಟ-ನಟಿಯರು ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಬಾಲಿವುಡ್ ನಟ ಅನುಪಮ್​ ಖೇರ್​ (Anupam Kher), ಸ್ಯಾಂಡಲ್​ವುಡ್​ ನಟಿ ಪ್ರಣಿತಾ ಸುಭಾಷ್​ ಅವರು ಕೂಡ ಈ ಕುರಿತು ಪೋಸ್ಟ್​ ಮಾಡಿದ್ದಾರೆ. ‘ಹಿಂದೂಗಳ ಜೀವ ಮುಖ್ಯ’ ಎಂದು ಪ್ರಣಿತಾ ಅವರು ಫಲಕ ಹಿಡಿದು ನಿಂತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ನೆಟ್ಟಿಗರು ನಾನಾ ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಕನ್ಹಯ್ಯ ಲಾಲ್ ಹತ್ಯೆಯಿಂದಾಗಿ ಮನಸು ವಿಚಲಿತವಾಗಿದೆ ಎಂದು ಪ್ರಣಿತಾ ಸುಭಾಷ್​ (Pranitha Subhash) ಹೇಳಿದ್ದಾರೆ. ಸದ್ಯ ಅವರ ಸೋಶಿಯಲ್​ ಮೀಡಿಯಾ ಪೋಸ್ಟ್​ ವೈರಲ್​ ಆಗುತ್ತಿದೆ.

‘ಉದಯಪುರ ವಿಡಿಯೋವನ್ನು ನಾನು ನೋಡಲೇಬಾರದಿತ್ತು. ನಿಜಕ್ಕೂ ಭಯಾನಕ. ಹಿನ್ನೆಲೆಯಲ್ಲಿ ಕೇಳಿಸಿದ ಆ ಚೀರಾಟ ನಮ್ಮ ಮನದಲ್ಲಿ ಪ್ರತಿಧ್ವನಿಸುತ್ತಲೇ ಇರುತ್ತದೆ ಮತ್ತು ದೀರ್ಘ ಕಾಲದವರೆಗೆ ಕಾಡುತ್ತಲೇ ಇರುತ್ತದೆ. #JusticeForKanhaiyaLal’ ಎಂದು ಪ್ರಣಿತಾ ಸುಭಾಸ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
Swara Bhaskar: ಸಲ್ಮಾನ್​ ಖಾನ್​ ಬಳಿಕ ನಟಿ ಸ್ವರಾ ಭಾಸ್ಕರ್​ಗೆ ಕೊಲೆ ಬೆದರಿಕೆ; ಸಾವರ್ಕರ್​ ಬಗ್ಗೆ ಮಾತಾಡಿದ್ದಕ್ಕೆ ಆಕ್ರೋಶ
Image
Udaipur murder ಒಬ್ಬ ಆರೋಪಿ 2014 ರಲ್ಲಿ ಕರಾಚಿಗೆ ಹೋಗಿದ್ದ, ಪಾಕಿಸ್ತಾನದ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡುತ್ತಿದ್ದ: ಪೊಲೀಸ್
Image
Udaipur murder ಉದಯಪುರ ಹತ್ಯೆಯ ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ಬಡ್ತಿ: ಅಶೋಕ್ ಗೆಹ್ಲೋಟ್
Image
Udaipur Murder ಸಾಮಾಜಿಕ ಮಾಧ್ಯಮಗಳಲ್ಲಿ ಬೆದರಿಕೆ ಕಾರಣ ಕನ್ಹಯ್ಯಾ ಕೆಲಸಕ್ಕೆ ಹೋಗಿರಲಿಲ್ಲ, ರಜೆ ನಂತರ ಹೋದಾಗ ಹೀಗಾಯ್ತು: ಕನ್ಹಯ್ಯಾ ಲಾಲ್ ಪತ್ನಿ

ಮತ್ತೊಂದು ಪೋಸ್ಟ್​ನಲ್ಲಿ ‘ಹಿಂದೂಗಳ ಜೀವ ಮುಖ್ಯ’ ಎಂದು ಪ್ರಣಿತಾ ಸುಭಾಷ್​​ ಅವರು ಫಲಕ ಹಿಡಿದು ನಿಂತಿರುವ ಫೋಟೋ ಹಂಚಿಕೊಂಡಿದ್ದಾರೆ. ‘ಯಾರಿಗಾದರೂ ಕೇಳುತ್ತಿದೆಯೇ’ ಎಂದು ಅವರ ಅದಕ್ಕೆ ಕ್ಯಾಪ್ಷನ್​ ನೀಡಿದ್ದಾರೆ. ಪೋಸ್ಟ್​ ಮಾಡಿದ ಕೆಲವೇ ಗಂಟೆಗಳಲ್ಲಿ 3 ಸಾವಿರಕ್ಕೂ ಅಧಿಕ ಜನರು ಇದಕ್ಕೆ ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ: Pranitha Subhash: ನಟಿ ಪ್ರಣಿತಾ ಸುಭಾಷ್​ಗೆ ಹೆಣ್ಣುಮಗು; ಇಲ್ಲಿದೆ ಫೋಟೋ

ಭಾರತದಲ್ಲಿ ಹಿಂದೂ ಟೆರರ್​ ಇದೆ ಎಂದವರಿಗೆ ನಟಿ ಪ್ರಣಿತಾ ಸುಭಾಷ್​ ತಿರುಗೇಟು; ನಿಮ್ಮ ಬಗ್ಗೆ ಹೆಮ್ಮೆ ಆಗ್ತಿದೆ ಎಂದ ಫ್ಯಾನ್ಸ್​

Published On - 10:17 am, Thu, 30 June 22

ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ