Pranitha Subhash: ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿದ ಪ್ರಣಿತಾ; ‘ಹಿಂದೂಗಳ ಜೀವ ಮುಖ್ಯ’ ಎಂದು ಫಲಕ ಹಿಡಿದ ನಟಿ

Udaipur Killing: ‘ಉದಯಪುರ ವಿಡಿಯೋವನ್ನು ನಾನು ನೋಡಲೇಬಾರದಿತ್ತು. ನಿಜಕ್ಕೂ ಭಯಾನಕ’ ಎಂದು ಪ್ರಣಿತಾ ಸುಭಾಷ್​ ಪೋಸ್ಟ್​ ಮಾಡಿದ್ದಾರೆ.

Pranitha Subhash: ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿದ ಪ್ರಣಿತಾ; ‘ಹಿಂದೂಗಳ ಜೀವ ಮುಖ್ಯ’ ಎಂದು ಫಲಕ ಹಿಡಿದ ನಟಿ
ಪ್ರಣಿತಾ ಸುಭಾಷ್
Follow us
| Updated By: ಮದನ್​ ಕುಮಾರ್​

Updated on:Jun 30, 2022 | 10:17 AM

ಉದಯಪುರದ ಟೈಲರ್ ಕನ್ಹಯ್ಯ ಲಾಲ್ (Kanhaiya Lal) ಹತ್ಯೆ ಖಂಡಿಸಿ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಹಾಡಹಗಲೇ ಇಂಥ ಹೇಯ ಕೃತ್ಯ ನಡೆದಿರುವುದಕ್ಕೆ ಹಲವು ಸೆಲೆಬ್ರಿಟಿಗಳು ಕೂಡ ಅಸಮಾಧಾನ ಹೊರಹಾಕಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಬಗ್ಗೆ ನಟ-ನಟಿಯರು ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಬಾಲಿವುಡ್ ನಟ ಅನುಪಮ್​ ಖೇರ್​ (Anupam Kher), ಸ್ಯಾಂಡಲ್​ವುಡ್​ ನಟಿ ಪ್ರಣಿತಾ ಸುಭಾಷ್​ ಅವರು ಕೂಡ ಈ ಕುರಿತು ಪೋಸ್ಟ್​ ಮಾಡಿದ್ದಾರೆ. ‘ಹಿಂದೂಗಳ ಜೀವ ಮುಖ್ಯ’ ಎಂದು ಪ್ರಣಿತಾ ಅವರು ಫಲಕ ಹಿಡಿದು ನಿಂತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ನೆಟ್ಟಿಗರು ನಾನಾ ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಕನ್ಹಯ್ಯ ಲಾಲ್ ಹತ್ಯೆಯಿಂದಾಗಿ ಮನಸು ವಿಚಲಿತವಾಗಿದೆ ಎಂದು ಪ್ರಣಿತಾ ಸುಭಾಷ್​ (Pranitha Subhash) ಹೇಳಿದ್ದಾರೆ. ಸದ್ಯ ಅವರ ಸೋಶಿಯಲ್​ ಮೀಡಿಯಾ ಪೋಸ್ಟ್​ ವೈರಲ್​ ಆಗುತ್ತಿದೆ.

‘ಉದಯಪುರ ವಿಡಿಯೋವನ್ನು ನಾನು ನೋಡಲೇಬಾರದಿತ್ತು. ನಿಜಕ್ಕೂ ಭಯಾನಕ. ಹಿನ್ನೆಲೆಯಲ್ಲಿ ಕೇಳಿಸಿದ ಆ ಚೀರಾಟ ನಮ್ಮ ಮನದಲ್ಲಿ ಪ್ರತಿಧ್ವನಿಸುತ್ತಲೇ ಇರುತ್ತದೆ ಮತ್ತು ದೀರ್ಘ ಕಾಲದವರೆಗೆ ಕಾಡುತ್ತಲೇ ಇರುತ್ತದೆ. #JusticeForKanhaiyaLal’ ಎಂದು ಪ್ರಣಿತಾ ಸುಭಾಸ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
Swara Bhaskar: ಸಲ್ಮಾನ್​ ಖಾನ್​ ಬಳಿಕ ನಟಿ ಸ್ವರಾ ಭಾಸ್ಕರ್​ಗೆ ಕೊಲೆ ಬೆದರಿಕೆ; ಸಾವರ್ಕರ್​ ಬಗ್ಗೆ ಮಾತಾಡಿದ್ದಕ್ಕೆ ಆಕ್ರೋಶ
Image
Udaipur murder ಒಬ್ಬ ಆರೋಪಿ 2014 ರಲ್ಲಿ ಕರಾಚಿಗೆ ಹೋಗಿದ್ದ, ಪಾಕಿಸ್ತಾನದ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡುತ್ತಿದ್ದ: ಪೊಲೀಸ್
Image
Udaipur murder ಉದಯಪುರ ಹತ್ಯೆಯ ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ಬಡ್ತಿ: ಅಶೋಕ್ ಗೆಹ್ಲೋಟ್
Image
Udaipur Murder ಸಾಮಾಜಿಕ ಮಾಧ್ಯಮಗಳಲ್ಲಿ ಬೆದರಿಕೆ ಕಾರಣ ಕನ್ಹಯ್ಯಾ ಕೆಲಸಕ್ಕೆ ಹೋಗಿರಲಿಲ್ಲ, ರಜೆ ನಂತರ ಹೋದಾಗ ಹೀಗಾಯ್ತು: ಕನ್ಹಯ್ಯಾ ಲಾಲ್ ಪತ್ನಿ

ಮತ್ತೊಂದು ಪೋಸ್ಟ್​ನಲ್ಲಿ ‘ಹಿಂದೂಗಳ ಜೀವ ಮುಖ್ಯ’ ಎಂದು ಪ್ರಣಿತಾ ಸುಭಾಷ್​​ ಅವರು ಫಲಕ ಹಿಡಿದು ನಿಂತಿರುವ ಫೋಟೋ ಹಂಚಿಕೊಂಡಿದ್ದಾರೆ. ‘ಯಾರಿಗಾದರೂ ಕೇಳುತ್ತಿದೆಯೇ’ ಎಂದು ಅವರ ಅದಕ್ಕೆ ಕ್ಯಾಪ್ಷನ್​ ನೀಡಿದ್ದಾರೆ. ಪೋಸ್ಟ್​ ಮಾಡಿದ ಕೆಲವೇ ಗಂಟೆಗಳಲ್ಲಿ 3 ಸಾವಿರಕ್ಕೂ ಅಧಿಕ ಜನರು ಇದಕ್ಕೆ ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ: Pranitha Subhash: ನಟಿ ಪ್ರಣಿತಾ ಸುಭಾಷ್​ಗೆ ಹೆಣ್ಣುಮಗು; ಇಲ್ಲಿದೆ ಫೋಟೋ

ಭಾರತದಲ್ಲಿ ಹಿಂದೂ ಟೆರರ್​ ಇದೆ ಎಂದವರಿಗೆ ನಟಿ ಪ್ರಣಿತಾ ಸುಭಾಷ್​ ತಿರುಗೇಟು; ನಿಮ್ಮ ಬಗ್ಗೆ ಹೆಮ್ಮೆ ಆಗ್ತಿದೆ ಎಂದ ಫ್ಯಾನ್ಸ್​

Published On - 10:17 am, Thu, 30 June 22

ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು