AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ವೇದಿಕೆ ಮೇಲೆ ಸುದೀಪ್​ನ ಇಮಿಟೇಟ್ ಮಾಡಿದ್ದ ಪ್ರಿಯಾಮಣಿ

ಸುದೀಪ್ ಹಾಗೂ ಪ್ರಿಯಾಮಣಿ ‘ವಿಷ್ಣುವರ್ಧನ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಸೆಟ್​ನಲ್ಲಿ ಸುದೀಪ್ ಅವರನ್ನು ಹತ್ತಿರದಿಂದ ಕಂಡಿದ್ದಾರೆ ಪ್ರಿಯಾಮಣಿ. ಇಬ್ಬರೂ ಒಟ್ಟಾಗಿ ಸಮಯ ಕಳೆದಿದ್ದಾರೆ. ಹೀಗಾಗಿ, ಸೆಟ್​ನಲ್ಲಿ ಸುದೀಪ್ ಹೇಗೆ ನಡೆದುಕೊಳ್ಳುತ್ತಾರೆ ಎನ್ನುವ ವಿಚಾರ ಗೊತ್ತಾಗಿದೆ.

ಬಿಗ್ ಬಾಸ್ ವೇದಿಕೆ ಮೇಲೆ ಸುದೀಪ್​ನ ಇಮಿಟೇಟ್ ಮಾಡಿದ್ದ ಪ್ರಿಯಾಮಣಿ
ಪ್ರಿಯಾಮಣಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 07, 2024 | 7:57 AM

Share

ಕನ್ನಡ ಬಿಗ್ ಬಾಸ್ ವೇದಿಕೆ ಮೇಲೆ ಅನೇಕ ಸೆಲೆಬ್ರಿಟಿಗಳು ಬಂದು ಹೋಗಿದ್ದಾರೆ. ಮೊದಲಿಗೆ ಹೋಲಿಕೆ ಮಾಡಿದರೆ ಈಗ ವೇದಿಕೆ ಮೇಲೆ ಬೇರೆ ಸೆಲೆಬ್ರಿಟಿಗಳು ಬಂದು ಸಿನಿಮಾ ಪ್ರಚಾರಕ್ಕೆ ಮಾಡೋದು ಕಡಿಮೆ ಆಗಿದೆ. ಮೊದಲು ಪ್ರತಿ ವಾರ ಓರ್ವ ಸೆಲೆಬ್ರಿಟಿ ಬಂದು ಸಿನಿಮಾ ಪ್ರಚಾರ ಮಾಡುತ್ತಿದ್ದರು. ಅದೇ ರೀತಿಯಲ್ಲಿ ಬಿಗ್ ಬಾಸ್ ವೇದಿಕೆಗೆ ಪ್ರಿಯಾಮಣಿ ಅವರು ಆಗಮಿಸಿದ್ದರು. ಅವರು ಸುದೀಪ್ ಅವರ ಇಮಿಟೇಷನ್ ಮಾಡಿ ತೋರಿಸಿದ್ದರು.

ಸುದೀಪ್ ಹಾಗೂ ಪ್ರಿಯಾಮಣಿ ‘ವಿಷ್ಣುವರ್ಧನ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಸೆಟ್​ನಲ್ಲಿ ಸುದೀಪ್ ಅವರನ್ನು ಹತ್ತಿರದಿಂದ ಕಂಡಿದ್ದಾರೆ ಪ್ರಿಯಾಮಣಿ. ಇಬ್ಬರೂ ಒಟ್ಟಾಗಿ ಸಮಯ ಕಳೆದಿದ್ದಾರೆ. ಹೀಗಾಗಿ, ಸೆಟ್​ನಲ್ಲಿ ಸುದೀಪ್ ಹೇಗೆ ನಡೆದುಕೊಳ್ಳುತ್ತಾರೆ ಎನ್ನುವ ವಿಚಾರ ಗೊತ್ತಾಗಿದೆ. ಅದನ್ನು ಪ್ರಿಯಾಮಣಿ ಅವರು ತೋರಿಸಿದ್ದಾರೆ.

ಸುದೀಪ್ ಅವರು ಸೆಟ್​ಗೆ ಬಂದ ತಕ್ಷಣ ಎಲ್ಲರೂ ಇಳಿದ ಬಳಿಕ ಎಲ್ಲರೂ ಹಾಯ್ ಹೇಳುತ್ತಾರಂತೆ. ‘ನಿರ್ದೇಶಕರು ಎಲ್ಲಿ’ ಎಂದು ಸುದೀಪ್ ಕೇಳುತ್ತಾರಂತೆ. ಆ ಬಳಿಕ ಸುದೀಪ್ ಅವರು ದೃಶ್ಯ ಏನು ಎಂದು ಕೇಳುತ್ತಾರೆ. ಒಂದೊಮ್ಮೆ ಸೀನ್ ಇಷ್ಟ ಆಗಿಲ್ಲ ಎಂದರೆ, ಇದು ಬೇಕಾ ಎಂದು ನೇರವಾಗಿ ಕೇಳುತ್ತಾರಂತೆ.

ಈ ಮಧ್ಯೆ ಸುದೀಪ್ ಅವರು ತಮ್ಮನ್ನು ನೋಡಿದಾಗ ಯಾವ ರೀತಿ ನಡೆದುಕೊಳ್ಳುತ್ತಾರೆ ಎಂಬುದನ್ನು ಪ್ರಿಯಾಮಣಿ ಹೇಳಿದ್ದಾರೆ. ಒಂದು ಕೈಯಲ್ಲಿ ಕಾಫಿ ಕಪ್ ಹಿಡಿದು ಮತ್ತೊಂದು ಕೈಯಲ್ಲಿ ಪ್ರಿಯಾಮಣಿಗೆ ಹಗ್ ಕೊಡುತ್ತಾರಂತೆ ಸುದೀಪ್. ಆ ಬಳಿಕ ಸುದೀಪ್ ಅವರು ಮೀಸೆ ಬಳಿ ಕೈ ಬೆರಳು ತೆಗೆದುಕೊಂಡು ಹೋಗುತ್ತಾರೆ. ಅದನ್ನು ಕೂಡ ಮಾಡಿ ತೋರಿಸಿದ್ದಾರೆ ಸುದೀಪ್.

View this post on Instagram

A post shared by @kicha_boss__0

ಇದನ್ನೂ ಓದಿ: ‘ಮ್ಯಾಕ್ಸ್’ ಸಿನಿಮಾದಲ್ಲಿ ಹೇಗಿದೆ ಮಂಜು-ಸುದೀಪ್ ಮುಖಾಮುಖಿ? ಹೊಸ ಝಲಕ್ ರಿಲೀಸ್

ಸದ್ಯ ಈ ವಿಡಿಯೋ ಮತ್ತೆ ವೈರಲ್ ಆಗಿದೆ. ಅನೇಕರು ಇದಕ್ಕೆ ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಸುದೀಪ್ ಅವರು ಬಿಗ್ ಬಾಸ್ ಬಿಟ್ಟು ಹೋಗಬಾರದು ಎಂದು ಅನೇಕರು ಕೋರಿಕೊಂಡಿದ್ದಾರೆ. ಸದ್ಯ ಸುದೀಪ್ ಅವರು ‘ಮ್ಯಾಕ್ಸ್’ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಡಿಸೆಂಬರ್ 25ರಂದು ಚಿತ್ರ ತೆರೆಗೆ ಬರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?