AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರೆಸ್ಟ್ ಆಗ್ತಿದ್ದಂತೇ ‘ಮುದುಡಿದ ತಾವರೆ‘ಗಳಾದ ತಾರೆಯರು! ಗೋಳಾಟ ಒಂದಾ, ಎರಡಾ?

ಬೆಂಗಳೂರು:ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿರುವ ಪ್ರಕರಣ ಸಂಬಂಧ ನಟಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಯನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಆದರೆ ಇವರಿಬ್ಬರಿಗೂ ಪೊಲೀಸ್ ಕಸ್ಟಡಿಗೆ ಹೋದ ಬಳಿಕ ಕಾಯಿಲೆಗಳು ಒಂದೊಂದಾಗಿ ಶುರುವಾಗಿವೆ. ಸಿಸಿಬಿ ಬಂಧನಕ್ಕೂ ಮುನ್ನ ಆರಾಮಾಗಿದ್ದ ನಟಿಯರು ಈಗ ಸಿಸಿಬಿ ಕಸ್ಟಡಿಗೆ ಹೋಗುತ್ತಿದ್ದಂತೆ ದಿನಕ್ಕೊಂದು ನೆಪ, ದಿನಕ್ಕೊಂದು ಆರೋಗ್ಯ ಸಮಸ್ಯೆ ಹೇಳುತ್ತಿದ್ದಾರೆ. ಜಿಮ್ಮು, ವರ್ಕೌಟ್, ಶಾಪಿಂಗ್ ಅಂತ ಆರಾಮವಾಗಿದ್ದ ನಟಿಯರು ಅರೆಸ್ಟ್ ಆಗ್ತಿದ್ದಂತೆಯೇ ಮುದುಡಿದ ತಾವರೆಗಳಂತಾಗಿದ್ದಾರೆ. ರಾಗಿಣಿಗೆ ಒಂದು ರೀತಿ ಸಮಸ್ಯೆ ಆದ್ರೆ, ಸಂಜನಾಗೆ […]

ಅರೆಸ್ಟ್ ಆಗ್ತಿದ್ದಂತೇ ‘ಮುದುಡಿದ ತಾವರೆ‘ಗಳಾದ ತಾರೆಯರು! ಗೋಳಾಟ ಒಂದಾ, ಎರಡಾ?
Follow us
ಆಯೇಷಾ ಬಾನು
|

Updated on:Sep 10, 2020 | 1:20 PM

ಬೆಂಗಳೂರು:ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿರುವ ಪ್ರಕರಣ ಸಂಬಂಧ ನಟಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಯನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಆದರೆ ಇವರಿಬ್ಬರಿಗೂ ಪೊಲೀಸ್ ಕಸ್ಟಡಿಗೆ ಹೋದ ಬಳಿಕ ಕಾಯಿಲೆಗಳು ಒಂದೊಂದಾಗಿ ಶುರುವಾಗಿವೆ.

ಸಿಸಿಬಿ ಬಂಧನಕ್ಕೂ ಮುನ್ನ ಆರಾಮಾಗಿದ್ದ ನಟಿಯರು ಈಗ ಸಿಸಿಬಿ ಕಸ್ಟಡಿಗೆ ಹೋಗುತ್ತಿದ್ದಂತೆ ದಿನಕ್ಕೊಂದು ನೆಪ, ದಿನಕ್ಕೊಂದು ಆರೋಗ್ಯ ಸಮಸ್ಯೆ ಹೇಳುತ್ತಿದ್ದಾರೆ. ಜಿಮ್ಮು, ವರ್ಕೌಟ್, ಶಾಪಿಂಗ್ ಅಂತ ಆರಾಮವಾಗಿದ್ದ ನಟಿಯರು ಅರೆಸ್ಟ್ ಆಗ್ತಿದ್ದಂತೆಯೇ ಮುದುಡಿದ ತಾವರೆಗಳಂತಾಗಿದ್ದಾರೆ. ರಾಗಿಣಿಗೆ ಒಂದು ರೀತಿ ಸಮಸ್ಯೆ ಆದ್ರೆ, ಸಂಜನಾಗೆ ಮತ್ತೊಂದು ರೀತಿ ಸಮಸ್ಯೆ. ಇಬ್ಬರೂ ದಿನೇ ದಿನೇ ಆರೋಗ್ಯ ಸಮಸ್ಯೆಗಳನ್ನೇ ಹೇಳಿಕೊಳ್ಳುತ್ತಿದ್ದಾರೆ. ಇದು ಸಿಸಿಬಿ ಅಧಿಕಾರಿಗಳಿಗೆ ತಲೆನೋವು ತಂದಿದ್ದು, ತನಿಖೆ ನಡೆಸುವುದು ಕಷ್ಟವಾಗುತ್ತಿದೆ.

ಕೆ.ಸಿ.ಜನರಲ್ ಆಸ್ಪತ್ರೆಗೆ ರಾಗಿಣಿ ತಂದೆ ಆಗಮನ: ಇನ್ನು ಮೆಡಿಕಲ್ ಟೆಸ್ಟ್‌ಗಾಗಿ ಸಿಸಿಬಿ ಅಧಿಕಾರಿಗಳು ನಟಿ ರಾಗಿಣಿ ದ್ವಿವೇದಿಯನ್ನು ಕೆ.ಸಿ.ಜನರಲ್ ಆಸ್ಪತ್ರೆಗೆ ಕರೆತಂದಿದ್ದಾರೆ. ಸದ್ಯ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿರುವ ರಾಗಿಣಿಯನ್ನು ನೋಡಲು ತಂದೆ ರಾಕೇಶ್ ಆಗಮಿಸಿದ್ದಾರೆ. ಸದ್ಯ ನಟಿಯರಿಬ್ಬರಿಗೂ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಲಾಗುತ್ತಿದೆ. ಜೊತೆಗೆ ಡೋಪಿಂಗ್ ಟೆಸ್ಟ್‌ಗೆ ನಿರ್ಧರಿಸಲಾಗಿದೆ.

ಮೆಡಿಕಲ್ ಟೆಸ್ಟ್ ಬಳಿಕ ಎಫ್ಎಸ್‌ಎಲ್ ಕಚೇರಿಗೆ ಶಿಫ್ಟ್ ಮಾಡಲಾಗುತ್ತೆ. ನಂತರ ಸಿಸಿಬಿ ಇನ್ಸ್‌ಪೆಕ್ಟರ್ ಅಂಜುಮಾಲಾ & ಟೀಂನಿಂದ ವಿಚಾರಣೆ ನಡೆಯುತ್ತೆ. ಆದರೆ ಸಂಜನಾ ಆಸ್ಪತ್ರೆಯಲ್ಲಿ ಟೆಸ್ಟ್ ಮಾಡಿಸಿಕೊಳ್ಳಲು ನಿರಾಕರಿಸಿದ್ದಾರೆ. ನಾನು ಡೋಪ್ ಟೆಸ್ಟ್ ಮಾಡಿಸಿಕೊಳ್ಳಲ್ಲವೆಂದು ಗಲಾಟೆ ಮಾಡುತ್ತಿದ್ದಾರೆ. ಮೆಡಿಕಲ್ ಟೆಸ್ಟ್ ಮಾಡುವುದಾದರೆ ನೀವು ಮಾಡಿಕೊಳ್ಳಿ ಆದರೆ ಡೋಪ್ ಟೆಸ್ಟ್ ಮಾಡಿಸಿಕೊಳ್ಳಲ್ಲ ಎಂದು ಹಠ ಮಾಡುತ್ತಿದ್ದಾರೆ.

Published On - 1:09 pm, Thu, 10 September 20

ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​