AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ರಾಗಿಣಿ ದ್ವಿವೇದಿಗೆ ಜಾಮೀನು ಮಂಜೂರು.. 140 ದಿನಗಳ ಜೈಲುವಾಸ ಅಂತ್ಯ

ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂಕೋರ್ಟ್​ನಿಂದ ಜಾಮೀನು ಮಂಜೂರಾಗಿದೆ.

ನಟಿ ರಾಗಿಣಿ ದ್ವಿವೇದಿಗೆ ಜಾಮೀನು ಮಂಜೂರು.. 140 ದಿನಗಳ ಜೈಲುವಾಸ ಅಂತ್ಯ
ನಟಿ ರಾಗಿಣಿ ದ್ವಿವೇದಿ
ಆಯೇಷಾ ಬಾನು
|

Updated on:Jan 21, 2021 | 12:12 PM

Share

ಬೆಂಗಳೂರು: ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂಕೋರ್ಟ್​ನಿಂದ ಜಾಮೀನು ಮಂಜೂರಾಗಿದೆ. 140 ದಿನಗಳ ಜೈಲು ವಾಸದಿಂದ ಮಿಂದೆದ್ದು ಬರಲಿದ್ದಾರೆ.

ಡ್ರಗ್ಸ್ ಪ್ರಕರಣದಲ್ಲಿ ಎ2 ಆರೋಪಿಯಾಗಿ ಕಳೆದ 140 ದಿನಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು ಕೊನೆಗೂ ಇಂದು ಸುಪ್ರೀಂ ಕೋರ್ಟ್​ನಿಂದ ಸ್ಯಾಂಡಲ್​ವುಡ್ ತುಪ್ಪದ ಹುಡುಗಿ ರಿಲೀಫ್ ಸಿಕ್ಕಿದೆ. ಈ ಹಿಂದೆ ರಾಗಿಣಿ ಸಲ್ಲಿಸಿದ ಬೇಲ್​ ಅರ್ಜಿ 2 ಬಾರಿ ರಿಜೆಕ್ಟ್​ ಆಗಿತ್ತು.

ನಟಿ ರಾಗಿಣಿ ದ್ವಿವೇದಿಗೆ ಜಾಮೀನು ಸಿಕ್ಕಿದ್ದು ಸಂತಸ ತಂದಿದೆ. ಜಾಮೀನು ಸಿಕ್ಕಿರೋ ಬಗ್ಗೆ ಈಗಷ್ಟೇ ಮಾಹಿತಿ ಬಂತು. ಮುಂದಿನ ಕಾನೂನು ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ತೇವೆ ಎಂದು ಟಿವಿ9ಗೆ ನಟಿ ರಾಗಿಣಿ ತಾಯಿ ರೋಹಿಣಿ ದ್ವಿವೇದಿ ಸಂತಸ ಹಂಚಿಕೊಂಡ್ರು.

ಜಾಮೀನು ಸಿಕ್ಕರೂ ಇಂದು ಬಿಡುಗಡೆ ಡೌಟ್.. ಏಕೆ? ನಟಿ ರಾಗಿಣಿಗೆ ಇಂದು ಜಾಮೀನು ಸಿಕ್ಕರೂ ಇಂದೇ ಜೈಲಿನಿಂದ ಬಿಡುಗಡೆ ಆಗೋದು ಡೌಟ್. ಏಕೆಂದರೆ ದೆಹಲಿಯಲ್ಲಿರುವ ಸುಪ್ರೀಂಕೋರ್ಟ್ ನಿಂದ NDPS ಕೋರ್ಟ್ ಗೆ ಆರ್ಡರ್ ಕಾಪಿ ಬರಬೇಕು. ಬಳಿಕ ಇಲ್ಲಿ ಜಾಮೀನು ಷರತ್ತು ಪೂರೈಕೆ ಮಾಡಬೇಕಾಗುತ್ತೆ. ಇದೆಲ್ಲವೂ ಇಂದೇ ಪೂರೈಕೆ ಮಾಡಿದರೆ ಇಂದು ಬಿಡುಗಡೆ ಆಗುತ್ತೆ. ಇಲ್ಲದಿದ್ದರೆ ನಾಳೆ ನಟಿ ರಾಗಿಣಿ ಜೈಲಿನಿಂದ ಬಿಡುಗಡೆಯಾಗ್ತಾರೆ.

Published On - 11:43 am, Thu, 21 January 21

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?