AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕಾರಣಿಗಳ ಬಗ್ಗೆ ಅಸಮಾಧಾನ ಹೊರ ಹಾಕಿದ ರಾಗಿಣಿ ತಾಯಿ, ಯಾಕೆ ಗೊತ್ತಾ?

ಬೆಂಗಳೂರು: ಜೈಲುಪಾಲಾದ ಮಗಳನ್ನು ಕಂಡು ಮೊನ್ನೆಯಷ್ಟೇ ತನ್ನ ಮಗಳು ಸಿಂಹಿಣಿ ಎಂದಿದ್ದ ಡ್ರಗ್ಸ್ ಕೇಸ್ ಆರೋಪಿ ರಾಗಿಣಿ ದ್ವಿವೇದಿ ಅವರ ತಾಯಿ ಇಂದು ರಾಗ ಬದಲಿಸಿದ್ದಾರೆ. ರಾಜಕಾರಣಿಗಳ ವಿರುದ್ಧ ತಮ್ಮ ರಾಗದ್ವೇಷ ಹೊರಹಾಕಿದ್ದಾರೆ. ಚುನಾವಣೆ ವೇಳೆ ನನ್ನ ಮಗಳನ್ನು ಚೆನ್ನಾಗಿ ದುಡಿಸಿಕೊಂಡರು, ಈಗ ಕಷ್ಟಕಾಲದಲ್ಲಿ ಯಾರೊಬ್ಬರೂ ಸಹಾಯಕ್ಕೆ ಬರುತ್ತಿಲ್ಲ. ಇದೀಗ ನಮ್ಮ ಮುಖ ನೋಡಿದರೆ ದೂರ ಹೋಗುತ್ತಿದ್ದಾರೆ ಎಂದು ರಾಜಕಾರಣಿಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನ್ನ ಮಗಳು ಚುನಾವಣಾ ಸಂದರ್ಭದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾಳೆ.‌ ಬೆಳಗ್ಗಿನಿಂದ ಸಂಜೆಯ […]

ರಾಜಕಾರಣಿಗಳ ಬಗ್ಗೆ ಅಸಮಾಧಾನ ಹೊರ ಹಾಕಿದ ರಾಗಿಣಿ ತಾಯಿ, ಯಾಕೆ ಗೊತ್ತಾ?
ಆಯೇಷಾ ಬಾನು
| Edited By: |

Updated on:Sep 18, 2020 | 10:02 AM

Share

ಬೆಂಗಳೂರು: ಜೈಲುಪಾಲಾದ ಮಗಳನ್ನು ಕಂಡು ಮೊನ್ನೆಯಷ್ಟೇ ತನ್ನ ಮಗಳು ಸಿಂಹಿಣಿ ಎಂದಿದ್ದ ಡ್ರಗ್ಸ್ ಕೇಸ್ ಆರೋಪಿ ರಾಗಿಣಿ ದ್ವಿವೇದಿ ಅವರ ತಾಯಿ ಇಂದು ರಾಗ ಬದಲಿಸಿದ್ದಾರೆ. ರಾಜಕಾರಣಿಗಳ ವಿರುದ್ಧ ತಮ್ಮ ರಾಗದ್ವೇಷ ಹೊರಹಾಕಿದ್ದಾರೆ. ಚುನಾವಣೆ ವೇಳೆ ನನ್ನ ಮಗಳನ್ನು ಚೆನ್ನಾಗಿ ದುಡಿಸಿಕೊಂಡರು, ಈಗ ಕಷ್ಟಕಾಲದಲ್ಲಿ ಯಾರೊಬ್ಬರೂ ಸಹಾಯಕ್ಕೆ ಬರುತ್ತಿಲ್ಲ. ಇದೀಗ ನಮ್ಮ ಮುಖ ನೋಡಿದರೆ ದೂರ ಹೋಗುತ್ತಿದ್ದಾರೆ ಎಂದು ರಾಜಕಾರಣಿಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನನ್ನ ಮಗಳು ಚುನಾವಣಾ ಸಂದರ್ಭದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾಳೆ.‌ ಬೆಳಗ್ಗಿನಿಂದ ಸಂಜೆಯ ವರೆಗೂ ಕ್ಯಾಂಪೇನ್ ಮಾಡಿದ್ದಾಳೆ. ಕೆಲಸಕ್ಕಾಗಿ ಮಾತ್ರ ಮಗಳನ್ನು ಬಳಸಿಕೊಂಡಿದ್ದಾರೆ. ಇದೀಗ ಅವರೇ ಬೇರೆ ರೀತಿಯಲ್ಲಿ ನೋಡುತ್ತ ಮಾತನಾಡುತ್ತಿದ್ದಾರೆ‌. ಆಕೆಯ ಬರ್ತಡೆ ಪಾರ್ಟಿಗಳಲ್ಲಿ ಭಾಗಿಯಾಗಿದ್ದರು. ಇದೀಗ ನಮ್ಮ ಮುಖ ನೋಡಿದರೆ ದೂರ ಹೋಗುತ್ತಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾರೆ.

ಟೊಮೆಟೊ ಬಾತ್ ಸೇವಿಸಿದ ನಟಿಯರು: ಇಂದು ಪರಪ್ಪನ ಅಗ್ರಹಾರ ಜೈಲಿನ ಅಧಿಕಾರಿಗಳಿಂದ ನಟಿಯರಿಗೆ ಟೊಮೆಟೊ ಬಾತ್ ತಿಂಡಿ ನೀಡಲಾಗಿತ್ತು. ಒಟ್ಟಿಗೆ ಕೂತು ನಟಿಯರು ತಿಂಡಿ ಸೇವಿಸಿದ್ದಾರೆ. ನಿನ್ನೆ ಸಂಜನಾ ತನ್ನ ವಕೀಲರ ಜೊತೆಗೆ ಜೈಲಿನ ಬೂತ್ ಫೋನ್​ನಿಂದ ಮಾತನಾಡಿದ್ದಳು. ಇಂದು ಬೇಲ್ ಅರ್ಜಿ ವಿಚಾರಣೆ ಹಿನ್ನೆಲೆಯಲ್ಲಿ ಬೂತ್ ಫೋನ್​ನಿಂದ ಮಾತನಾಡಲು ಅವಕಾಶವಿದೆ. ಆದರೆ ಭೇಟಿಗೆ ಅವಕಾಶ ಇಲ್ಲ.

Published On - 9:07 am, Fri, 18 September 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ