AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramya: ಮೋದಿ ಪ್ರಧಾನಿ ಹುದ್ದೆಗೆ ರಿಸೈನ್ ಮಾಡಲಿ ಎಂದ ನಟಿ ರಮ್ಯಾ; ಅಭಿಮಾನಿಗಳು ಕೊಟ್ಟ ಉತ್ತರ ಏನು?

Divyaspandana: ಕೊರೊನಾ ಹರಡುತ್ತಿದ್ದ ಹೊರತಾಗಿಯೂ ಅನೇಕ ಕಡೆಗಳಲ್ಲಿ ಚುನಾವಣಾ ಸಮಾವೇಶಗಳು ನಡೆದವು. ದೇಶದ ಆರೋಗ್ಯ ವ್ಯವಸ್ಥೆ ಸಂಪೂರ್ಣವಾಗಿ ನೆಲಕಚ್ಚಿದ್ದು, ಇದಕ್ಕೆ ನೇರವಾಗಿ ಮೋದಿಯೇ ಕಾರಣ ಎನ್ನುವ ಆರೋಪ ಕೇಳಿ ಬರುತ್ತಿದೆ.

Ramya: ಮೋದಿ ಪ್ರಧಾನಿ ಹುದ್ದೆಗೆ ರಿಸೈನ್ ಮಾಡಲಿ ಎಂದ ನಟಿ ರಮ್ಯಾ; ಅಭಿಮಾನಿಗಳು ಕೊಟ್ಟ ಉತ್ತರ ಏನು?
ರಾಜೇಶ್ ದುಗ್ಗುಮನೆ
|

Updated on: May 02, 2021 | 9:11 PM

Share

ಇಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಬಂದಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಮತ್ತೆ ಅಧಿಕಾರಕ್ಕೇರಿದೆ. ತಮಿಳುನಾಡಿನಲ್ಲಿ ಡಿಎಂಕೆ, ಕೇರಳದಲ್ಲಿ ಎಲ್​ಡಿಎಫ್​ ಗೆಲುವು. ಅಸ್ಸಾಂನಲ್ಲಿ ಬಿಜೆಪಿ ಹಾಗೂ ಪದುಚೇರಿಯಲ್ಲಿ ಎನ್.ಆರ್​.ಕಾಂಗ್ರೆಸ್​ ಜತೆ ಚುನಾವಣಾ ಪೂರ್ವ ಮೈತ್ರಿ ಮೂಲಕ ಬಿಜೆಪಿ ಅಧಿಕಾರಕ್ಕೇರಿದೆ. ಹೀಗಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ನಟಿ ಹಾಗೂ ರಾಜಕಾರಣಿ ರಮ್ಯಾ ಪೋಲ್​ ಒಂದನ್ನು ನಡೆಸಿದ್ದಾರೆ. ಮೋದಿ ರಿಸೈನ್​ ಮಾಡಬೇಕು ಎಂದು ಶೇ.64 ಮಂದಿ ಬೆಂಬಲ ಸೂಚಿಸಿದ್ದಾರೆ.

ಕೊರೊನಾ ಎರಡನೇ ಅಲೆ ಮಿತಿಮೀರಿ ಹರಡುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರ ನೇರ ಕಾರಣ ಎಂಬುದು ಅನೇಕರ ಆರೋಪ. ಕೊರೊನಾ ಹರಡುತ್ತಿದ್ದ ಹೊರತಾಗಿಯೂ ಅನೇಕ ಕಡೆಗಳಲ್ಲಿ ಚುನಾವಣಾ ಸಮಾವೇಶಗಳು ನಡೆದವು. ದೇಶದ ಆರೋಗ್ಯ ವ್ಯವಸ್ಥೆ ಸಂಪೂರ್ಣವಾಗಿ ನೆಲಕಚ್ಚಿದ್ದು, ಇದಕ್ಕೆ ನೇರವಾಗಿ ಮೋದಿಯೇ ಕಾರಣ ಎನ್ನುವ ಆರೋಪ ಕೇಳಿ ಬರುತ್ತಿದೆ.

ದೇಶದಲ್ಲಿ ನಿತ್ಯ ನಾಲ್ಕು ಲಕ್ಷಕ್ಕೂ ಹೆಚ್ಚು ಕೊರೊನಾ ಕೇಸ್​ಗಳು ಬರುತ್ತಿವೆ. ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ. ದೇಶದ ಆರ್ಥಿಕ ವ್ಯವಸ್ಥೆ ಕುಸಿಯುತ್ತಿದೆ ಎಂದು ವಿಪಕ್ಷಗಳು ಆರೋಪಿಸುತ್ತಲೇ ಇವೆ. ಇದಕ್ಕೆ ನಟಿ ರಮ್ಯಾ ಕೂಡ ಹೊರತಾಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ಗಳನ್ನು ಹಾಕುತ್ತಿರುವ ಅವರು, ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.

ಈಗ ಇನ್​ಸ್ಟಾಗ್ರಾಂನಲ್ಲಿ ಪೋಲ್​ ಒಂದನ್ನು ನಡೆಸಿದ್ದರು. ಈ ಪೋಲ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡಬೇಕೋ ಅಥವಾ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್​ ರಿಸೈನ್​ ಮಾಡಬೇಕೋ ಎಂದು ಕೇಳಿದ್ದರು. ಈ ಪೋಲ್​ನಲ್ಲಿ 89,615 ಮಂದಿ ಭಾಗಿಯಾಗಿದ್ದಾರೆ. ಶೇ.64 ಮಂದಿ ಮೋದಿ ರಿಸೈನ್​ ಮಾಡಬೇಕು ಎಂದು ಹೇಳಿದರೆ, ಉಳಿದ ಶೇ.36 ಜನರು ಹರ್ಷವರ್ಧನ್​ ರಿಸೈನ್​ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ರಮ್ಯಾ ಕನ್ನಡ ಚಿತ್ರರಂಗದ ಬೇಡಿಕೆಯ ನಟಿ ಆಗಿದ್ದರು. ನಂತರ ಅವರು ಚಿತ್ರರಂಗ ತೊರೆದು ಕಾಂಗ್ರೆಸ್​ ಸೇರಿದರು. ರಮ್ಯಾ ಕಾಂಗ್ರೆಸ್​ನಿಂದ ಸಂಸದೆ ಕೂಡ ಆದರು. ಈಗ ಅವರು ರಾಜಕೀಯದಿಂದ ದೂರ ಉಳಿದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟಿವ್​ ಅಗಿರುವ ಅವರು, ಮತ್ತೆ ನಟನೆಗೆ ಬರುವುದಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದ್ದರು.

ಇದನ್ನೂ ಓದಿ: Ramya Divya Spandana: ರಕ್ಷಿತ್​ ಶೆಟ್ಟಿ ಜೊತೆ ರಮ್ಯಾ ಮದುವೆ ಆಗ್ಬೇಕು; ಫ್ಯಾನ್ಸ್​ ಬಯಕೆಗೆ ಉತ್ತರ ಕೊಟ್ಟ ಸ್ಯಾಂಡಲ್​ವುಡ್​ ಕ್ವೀನ್​

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?