AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramya: ಮೋದಿ ಪ್ರಧಾನಿ ಹುದ್ದೆಗೆ ರಿಸೈನ್ ಮಾಡಲಿ ಎಂದ ನಟಿ ರಮ್ಯಾ; ಅಭಿಮಾನಿಗಳು ಕೊಟ್ಟ ಉತ್ತರ ಏನು?

Divyaspandana: ಕೊರೊನಾ ಹರಡುತ್ತಿದ್ದ ಹೊರತಾಗಿಯೂ ಅನೇಕ ಕಡೆಗಳಲ್ಲಿ ಚುನಾವಣಾ ಸಮಾವೇಶಗಳು ನಡೆದವು. ದೇಶದ ಆರೋಗ್ಯ ವ್ಯವಸ್ಥೆ ಸಂಪೂರ್ಣವಾಗಿ ನೆಲಕಚ್ಚಿದ್ದು, ಇದಕ್ಕೆ ನೇರವಾಗಿ ಮೋದಿಯೇ ಕಾರಣ ಎನ್ನುವ ಆರೋಪ ಕೇಳಿ ಬರುತ್ತಿದೆ.

Ramya: ಮೋದಿ ಪ್ರಧಾನಿ ಹುದ್ದೆಗೆ ರಿಸೈನ್ ಮಾಡಲಿ ಎಂದ ನಟಿ ರಮ್ಯಾ; ಅಭಿಮಾನಿಗಳು ಕೊಟ್ಟ ಉತ್ತರ ಏನು?
ರಾಜೇಶ್ ದುಗ್ಗುಮನೆ
|

Updated on: May 02, 2021 | 9:11 PM

Share

ಇಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಬಂದಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಮತ್ತೆ ಅಧಿಕಾರಕ್ಕೇರಿದೆ. ತಮಿಳುನಾಡಿನಲ್ಲಿ ಡಿಎಂಕೆ, ಕೇರಳದಲ್ಲಿ ಎಲ್​ಡಿಎಫ್​ ಗೆಲುವು. ಅಸ್ಸಾಂನಲ್ಲಿ ಬಿಜೆಪಿ ಹಾಗೂ ಪದುಚೇರಿಯಲ್ಲಿ ಎನ್.ಆರ್​.ಕಾಂಗ್ರೆಸ್​ ಜತೆ ಚುನಾವಣಾ ಪೂರ್ವ ಮೈತ್ರಿ ಮೂಲಕ ಬಿಜೆಪಿ ಅಧಿಕಾರಕ್ಕೇರಿದೆ. ಹೀಗಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ನಟಿ ಹಾಗೂ ರಾಜಕಾರಣಿ ರಮ್ಯಾ ಪೋಲ್​ ಒಂದನ್ನು ನಡೆಸಿದ್ದಾರೆ. ಮೋದಿ ರಿಸೈನ್​ ಮಾಡಬೇಕು ಎಂದು ಶೇ.64 ಮಂದಿ ಬೆಂಬಲ ಸೂಚಿಸಿದ್ದಾರೆ.

ಕೊರೊನಾ ಎರಡನೇ ಅಲೆ ಮಿತಿಮೀರಿ ಹರಡುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರ ನೇರ ಕಾರಣ ಎಂಬುದು ಅನೇಕರ ಆರೋಪ. ಕೊರೊನಾ ಹರಡುತ್ತಿದ್ದ ಹೊರತಾಗಿಯೂ ಅನೇಕ ಕಡೆಗಳಲ್ಲಿ ಚುನಾವಣಾ ಸಮಾವೇಶಗಳು ನಡೆದವು. ದೇಶದ ಆರೋಗ್ಯ ವ್ಯವಸ್ಥೆ ಸಂಪೂರ್ಣವಾಗಿ ನೆಲಕಚ್ಚಿದ್ದು, ಇದಕ್ಕೆ ನೇರವಾಗಿ ಮೋದಿಯೇ ಕಾರಣ ಎನ್ನುವ ಆರೋಪ ಕೇಳಿ ಬರುತ್ತಿದೆ.

ದೇಶದಲ್ಲಿ ನಿತ್ಯ ನಾಲ್ಕು ಲಕ್ಷಕ್ಕೂ ಹೆಚ್ಚು ಕೊರೊನಾ ಕೇಸ್​ಗಳು ಬರುತ್ತಿವೆ. ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ. ದೇಶದ ಆರ್ಥಿಕ ವ್ಯವಸ್ಥೆ ಕುಸಿಯುತ್ತಿದೆ ಎಂದು ವಿಪಕ್ಷಗಳು ಆರೋಪಿಸುತ್ತಲೇ ಇವೆ. ಇದಕ್ಕೆ ನಟಿ ರಮ್ಯಾ ಕೂಡ ಹೊರತಾಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ಗಳನ್ನು ಹಾಕುತ್ತಿರುವ ಅವರು, ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.

ಈಗ ಇನ್​ಸ್ಟಾಗ್ರಾಂನಲ್ಲಿ ಪೋಲ್​ ಒಂದನ್ನು ನಡೆಸಿದ್ದರು. ಈ ಪೋಲ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡಬೇಕೋ ಅಥವಾ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್​ ರಿಸೈನ್​ ಮಾಡಬೇಕೋ ಎಂದು ಕೇಳಿದ್ದರು. ಈ ಪೋಲ್​ನಲ್ಲಿ 89,615 ಮಂದಿ ಭಾಗಿಯಾಗಿದ್ದಾರೆ. ಶೇ.64 ಮಂದಿ ಮೋದಿ ರಿಸೈನ್​ ಮಾಡಬೇಕು ಎಂದು ಹೇಳಿದರೆ, ಉಳಿದ ಶೇ.36 ಜನರು ಹರ್ಷವರ್ಧನ್​ ರಿಸೈನ್​ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ರಮ್ಯಾ ಕನ್ನಡ ಚಿತ್ರರಂಗದ ಬೇಡಿಕೆಯ ನಟಿ ಆಗಿದ್ದರು. ನಂತರ ಅವರು ಚಿತ್ರರಂಗ ತೊರೆದು ಕಾಂಗ್ರೆಸ್​ ಸೇರಿದರು. ರಮ್ಯಾ ಕಾಂಗ್ರೆಸ್​ನಿಂದ ಸಂಸದೆ ಕೂಡ ಆದರು. ಈಗ ಅವರು ರಾಜಕೀಯದಿಂದ ದೂರ ಉಳಿದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟಿವ್​ ಅಗಿರುವ ಅವರು, ಮತ್ತೆ ನಟನೆಗೆ ಬರುವುದಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದ್ದರು.

ಇದನ್ನೂ ಓದಿ: Ramya Divya Spandana: ರಕ್ಷಿತ್​ ಶೆಟ್ಟಿ ಜೊತೆ ರಮ್ಯಾ ಮದುವೆ ಆಗ್ಬೇಕು; ಫ್ಯಾನ್ಸ್​ ಬಯಕೆಗೆ ಉತ್ತರ ಕೊಟ್ಟ ಸ್ಯಾಂಡಲ್​ವುಡ್​ ಕ್ವೀನ್​

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ