AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 6,000 ಮರಗಳ ಮಾರಣ ಹೋಮಕ್ಕೆ ಸಿದ್ಧತೆ; ಯೋಜನೆ ವಿರೋಧಿಸಿ ಸಹಿ ಸಂಗ್ರಹಕ್ಕೆ ರಮ್ಯಾ ಮನವಿ

Divya Spandana: ಮರ ಕಡಿಯುವ ಕ್ರಮದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಂದೋಲನ ನಡೆಯುತ್ತಿದೆ. ಪರಿಸರ ಪರ ಕಾಳಜಿ ಹೊಂದಿರುವ ಕೆಲ ಪೇಜ್​ಗಳು ಪೆಟೀಷನ್​ಗೆ ಸಹಿ ಮಾಡುವಂತೆ ಕೋರಿವೆ.

ಬೆಂಗಳೂರಿನಲ್ಲಿ 6,000 ಮರಗಳ ಮಾರಣ ಹೋಮಕ್ಕೆ ಸಿದ್ಧತೆ; ಯೋಜನೆ ವಿರೋಧಿಸಿ ಸಹಿ ಸಂಗ್ರಹಕ್ಕೆ ರಮ್ಯಾ ಮನವಿ
ರಮ್ಯಾ
ರಾಜೇಶ್ ದುಗ್ಗುಮನೆ
|

Updated on: Jun 21, 2021 | 2:16 PM

Share

ನಟಿ ಹಾಗೂ ರಾಜಕಾರಣಿ ರಮ್ಯಾ ಸದ್ಯ ಯಾವುದೇ ಕ್ಷೇತ್ರದಲ್ಲೂ ಆ್ಯಕ್ಟಿವ್​ ಆಗಿಲ್ಲ. ನಟನೆ ತೊರೆದ ನಂತರದಲ್ಲಿ ಅವರು ರಾಜಕೀಯಕ್ಕೆ ಕಾಲಿಟ್ಟರು. ಈಗ ರಮ್ಯಾ ರಾಜಕೀಯವನ್ನೂ ತೊರೆದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟಿವ್​ ಆಗಿರುವ ಅವರು, ಅಭಿಮಾನಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ. ಈ ಮಧ್ಯೆ ಬೆಂಗಳೂರಿನ ಮರಗಳನ್ನು ಉಳಿಸುವ ಆಂದೋಲನವನ್ನು ರಮ್ಯಾ ಬೆಂಬಲಿಸಿದ್ದಾರೆ.

ಹೆಬ್ಬಾಳ-ನಾಗವಾರ ಕಣಿವೆ ವ್ಯಾಪ್ತಿಯ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಸರ್ಕಾರ ಕೈಗೆತ್ತಿಕೊಂಡಿದೆ. ಈ ಯೋಜನೆ ಅಡಿಯಲ್ಲಿ ಯಲಹಂಕದ ಸಿಂಗನಾಯಕನಹಳ್ಳಿ ಕೆರೆ ಅಭಿವೃದ್ಧಿಗೆ ಸಣ್ಣ ನೀರಾವರಿ ಇಲಾಖೆ ಮುಂದಾಗಿದೆ. ಈ ಯೋಜನೆಗೆ 6 ಸಾವಿರಕ್ಕೂ ಅಧಿಕ ಮರಗಳನ್ನು ಕತ್ತರಿಸಲಾಗುತ್ತಿದೆ. ಇದು ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮರ ಕಡಿಯುವುದು ಏಕೆ? ಇದರಿಂದ ಪರಿಸರ ಮತ್ತಷ್ಟು ಹಾಳಾಗಲಿದೆ ಎನ್ನುವ ಮಾತುಗಳನ್ನು ಪರಿಸರವಾದಿಗಳು ಹೇಳಿದ್ದಾರೆ.

ಇನ್ನು, ಈ ಕ್ರಮದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಂದೋಲನ ನಡೆಯುತ್ತಿದೆ. ಪರಿಸರ ಪರ ಕಾಳಜಿ ಹೊಂದಿರುವ ಅನೇಕರು ಮರವನ್ನು ಕತ್ತರಿಸುವುದಕ್ಕೆ ವಿರೋಧಿಸಿ ಸಹಿ ಸಂಗ್ರಹಿಸುತ್ತಿದ್ದಾರೆ. ಇದನ್ನು ರಮ್ಯಾ ಬೆಂಬಲಿಸಿದ್ದಾರೆ. ಅಲ್ಲದೆ, ಅಭಿಮಾನಿಗಳ ಬಳಿ ಸಹಿ ಹಾಕುವಂತೆ ಕೋರಿದ್ದಾರೆ.

ರಮ್ಯಾ ಕನ್ನಡ ಚಿತ್ರರಂಗದ ಬೇಡಿಕೆಯ ನಟಿ ಆಗಿದ್ದರು. ನಂತರ ಅವರು ಚಿತ್ರರಂಗ ತೊರೆದು ಕಾಂಗ್ರೆಸ್​ ಸೇರಿದರು. ರಮ್ಯಾ ಕಾಂಗ್ರೆಸ್​ನಿಂದ ಸಂಸದೆ ಕೂಡ ಆದರು. ಈಗ ಅವರು ರಾಜಕೀಯದಿಂದ ದೂರ ಉಳಿದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟಿವ್​ ಆಗಿದ್ದಾರೆ. ಇತ್ತೀಚೆಗೆ ಆಸ್ಕ್​ ಮಿ ಎನಿಥಿಂಗ್​ ಸೆಶನ್​ ನಡೆಸಿದ್ದರು. ಆಗ ಕೆಲವರು ಅವರಿಗೆ ನಟನೆಗೆ ಮತ್ತೆ ಬರುವಂತೆ ಬೇಡಿಕೆ ಇಟ್ಟಿದ್ದರು. ಆದರೆ, ರಮ್ಯಾ ಮತ್ತೆ ನಟನೆಗೆ ಬರುವುದಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದ್ದರು. ಇದು ಅಭಿಮಾನಿಗಳಿಗೆ ಬೇಸರ ಉಂಟು ಮಾಡಿತ್ತು.

ಇದನ್ನೂ ಓದಿ: Ramya: ಮೋದಿ ಪ್ರಧಾನಿ ಹುದ್ದೆಗೆ ರಿಸೈನ್ ಮಾಡಲಿ ಎಂದ ನಟಿ ರಮ್ಯಾ; ಅಭಿಮಾನಿಗಳು ಕೊಟ್ಟ ಉತ್ತರ ಏನು?

ರಾಹುಲ್​ ಗಾಂಧಿ ಜನ್ಮದಿನಕ್ಕೆ ಒಂದೇ ವಾಕ್ಯದಲ್ಲಿ ರಮ್ಯಾ ವಿಶ್​; ಆ ಮಾತು ನೀವು ಒಪ್ಪುತ್ತೀರಾ?

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ