AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮ್ಯಾ ಜನ್ಮದಿನ; ‘ಸ್ಯಾಂಡಲ್​ವುಡ್​ ಕ್ವೀನ್​’ 39ನೇ ವರ್ಷದ ಹುಟ್ಟುಹಬ್ಬಕ್ಕೆ ಶುಭಾಶಯಗಳ ಸುರಿಮಳೆ

Ramya Birthday: ನಟಿ ರಮ್ಯಾ ಅವರಿಗೆ ಇಂದು (ನ.29) ಹುಟ್ಟುಹಬ್ಬದ ಸಂಭ್ರಮ. ಅವರ 39ನೇ ವರ್ಷದ ಜನ್ಮದಿನಕ್ಕೆ ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ಶುಭಾಶಯ ಕೋರುತ್ತಿದ್ದಾರೆ.

ರಮ್ಯಾ ಜನ್ಮದಿನ; ‘ಸ್ಯಾಂಡಲ್​ವುಡ್​ ಕ್ವೀನ್​’ 39ನೇ ವರ್ಷದ ಹುಟ್ಟುಹಬ್ಬಕ್ಕೆ ಶುಭಾಶಯಗಳ ಸುರಿಮಳೆ
ರಮ್ಯಾ ದಿವ್ಯಾ ಸ್ಪಂದನಾ
TV9 Web
| Edited By: |

Updated on: Nov 29, 2021 | 11:53 AM

Share

ಕನ್ನಡದ ಖ್ಯಾತ ನಟಿ ರಮ್ಯಾ (Ramya Divya Spandana) ಅವರು ಸದ್ಯಕ್ಕೆ ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ಆದರೂ ಕೂಡ ಅವರು ಅಭಿಮಾನಿಗಳ ಜತೆ ಸಂಪರ್ಕದಲ್ಲಿ ಇದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ತಮ್ಮ ದಿನಚರಿ ಬಗ್ಗೆ ಅಪ್​ಡೇಟ್​ ನೀಡುತ್ತಲೇ ಇರುತ್ತಾರೆ. ಇಂದು (ನ.29) ಅವರ ಜನ್ಮದಿನ. ‘ಸ್ಯಾಂಡಲ್​ವುಡ್​ ಕ್ವೀನ್​’  (Sandalwood Queen Ramya) ಹುಟ್ಟುಹಬ್ಬಕ್ಕೆ ಅವರ ಅಭಿಮಾನಿಗಳು ಶುಭ ಕೋರುತ್ತಿದ್ದಾರೆ. ಸೆಲೆಬ್ರಿಟಿಗಳು ಸಹ ರಮ್ಯಾಗೆ ವಿಶ್​ ಮಾಡಿದ್ದಾರೆ. ಎಲ್ಲರಿಂದಲೂ ಶುಭಾಶಯಗಳ ಮಳೆ ಸುರಿಸಲಾಗುತ್ತಿದೆ. ರಮ್ಯಾ ಅವರು ಸಿನಿಮಾಗಳಲ್ಲಿ ಕಾಣಿಸಿಕೊಳ್ಳದೇ ಹಲವು ವರ್ಷಗಳೇ ಕಳೆದಿದ್ದರೂ ಕೂಡ ಅವರ ಬಗ್ಗೆ ಅಭಿಮಾನಿಗಳಿಗೆ ಕ್ರೇಜ್​ ಕಮ್ಮಿ ಆಗಿಲ್ಲ. ಆದಷ್ಟು ಬೇಗ ರಮ್ಯಾ ಕಮ್​ಬ್ಯಾಕ್​ ಮಾಡಲಿ ಎಂದು ಎಲ್ಲರೂ ಬಯಸುತ್ತಿದ್ದಾರೆ.

ರಮ್ಯಾ ನಟಿಸಿದ ಮೊದಲ ಸಿನಿಮಾ ‘ಅಭಿ’. 2003ರಲ್ಲಿ ಆ ಚಿತ್ರ ಬಿಡುಗಡೆ ಆಗಿತ್ತು. ಆಗ ರಮ್ಯಾ ಅವರಿಗೆ 21 ವರ್ಷ ವಯಸ್ಸು. ಆ ಚಿತ್ರದಿಂದ ಸಿಕ್ಕ ಭಾರಿ ಯಶಸ್ಸಿನ ಬಳಿಕ ಅವರಿಗೆ ಸ್ಯಾಂಡಲ್​ವುಡ್​ನಲ್ಲಿ ಹೇರಳ ಅವಕಾಶಗಳು ಒಲಿದು ಬಂದವು. ‘ಅಭಿ’ ನಂತರ ಪುನೀತ್​ ರಾಜ್​ಕುಮಾರ್​ ಜತೆ ‘ಆಕಾಶ್​’ ಮತ್ತು ‘ಅರಸು’ ಸಿನಿಮಾಗಳನ್ನು ಅವರು ಮಾಡಿದರು. ಸ್ಯಾಂಡಲ್​ವುಡ್​ನ ಸ್ಟಾರ್​ ನಟರ ಸಿನಿಮಾಗಳಿಗೆ ಅವರು ಬಹುಬೇಡಿಕೆಯ ಕಲಾವಿದೆಯಾಗಿ ಗುರುತಿಸಿಕೊಡರು.

ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ಅವಕಾಶಗಳು ಇರುವಾಗಲೇ ರಮ್ಯಾಗೆ ರಾಜಕೀಯದಿಂದ ಬುಲಾವ್​ ಬಂತು. ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಸದೆ ಆಗಿಯೂ ಗೆದ್ದು ಬೀಗಿದರು. ರಾಜಕೀಯದಲ್ಲಿ ಕಾಂಗ್ರೆಸ್​ ಪಕ್ಷದ ಜೊತೆ ಗುರುತಿಸಿಕೊಂಡ ಬಳಿಕ ಅವರು ಚಿತ್ರರಂಗದಿಂದ ಸಂಪೂರ್ಣ ದೂರ ಉಳಿದುಕೊಂಡು. ಅಲ್ಲಿಂದೀಚೆಗೆ ಅವರು ಯಾವುದೇ ಹೊಸ ಸಿನಿಮಾವನ್ನೂ ಒಪ್ಪಿಕೊಂಡಿಲ್ಲ.

ರಮ್ಯಾ ಆದಷ್ಟು ಬೇಗ ಕಮ್​ಬ್ಯಾಕ್​ ಮಾಡಲಿ ಎಂಬ ಆಸೆಯನ್ನು ಅಭಿಮಾನಗಳು ವ್ಯಕ್ತಪಡಿಸುತ್ತಲೇ ಇದ್ದಾರೆ. ಆದರೆ ಅದಕ್ಕೆ ಕಾಲ ಕೂಡಿಬಂದಿಲ್ಲ. ಪುನೀತ್​ ರಾಜ್​ಕುಮಾರ್​ ಜತೆಗಿನ ಸಿನಿಮಾ ಮೂಲಕವೇ ರಮ್ಯಾ ಕಮ್​ಬ್ಯಾಕ್​ ಮಾಡಲು ಬಯಸಿದ್ದರು. ಆ ಕುರಿತು ಪುನೀತ್​ ಜತೆ ಮಾತುಕತೆ ಕೂಡ ನಡೆಯುತ್ತಿತ್ತು. ಅಷ್ಟರಲ್ಲಾಗಲೇ ಅಪ್ಪು ಇಹಲೋಕ ತ್ಯಜಿಸಿದ್ದು ನೋವಿನ ಸಂಗತಿ. ಅಪ್ಪು ಅವರ ಅಂತಿಮ ದರ್ಶನಕ್ಕೆ ಬಂದಾಗ ಆ ಬಗ್ಗೆ ರಮ್ಯಾ ಭಾವುಕವಾಗಿ ಮಾತನಾಡಿದ್ದರು.

ಇದನ್ನೂ ಓದಿ:

ಹಿಂದುತ್ವ ಮತ್ತು ಹಿಂದೂಯಿಸಂ ನಡುವಿನ ವ್ಯತ್ಯಾಸ ತಿಳಿಸಿದ ರಮ್ಯಾ; ವಾಸ್ತವ ವಿವರಿಸಿ ಬೇಸರ ವ್ಯಕ್ತಪಡಿಸಿದ ನಟಿ

ವಯಸ್ಸಿನ ಬಗ್ಗೆ ರಮ್ಯಾ ಆಡಿದ ಮಾತಿಗೆ ಕಿಚ್ಚನ ಪ್ರತಿಕ್ರಿಯೆ; ‘ಕೋಟಿಗೊಬ್ಬ 3’ ಸುದ್ದಿಗೋಷ್ಠಿಯಲ್ಲಿ ಸುದೀಪ್​ ಹೇಳಿದ್ದೇನು?

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!