AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಇಬ್ಬರ ಬಂಧನ; ಉಳಿದವರಿಗೆ ಶುರುವಾಗಿದೆ ಭಯ

Ramya Divya Spandan: ನಟಿ ರಮ್ಯಾ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶಗಳು ಬಂದಿದ್ದವು. ಇದಕ್ಕೆ ಅವರು ದೂರು ಕೂಡ ದಾಖಲು ಮಾಡಿದ್ದರು. ಈಗ ಈ ದೂರಿನ ಮೇಲೆ ಸಿಸಿಬಿ ಸೈಬರ್ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.ಇದರಿಂದ ಅನೇಕರಿಗೆ ನಡುಕ ಶುರುವಾಗಿದೆ .

ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಇಬ್ಬರ ಬಂಧನ; ಉಳಿದವರಿಗೆ ಶುರುವಾಗಿದೆ ಭಯ
ರಮ್ಯಾ
ರಾಜೇಶ್ ದುಗ್ಗುಮನೆ
|

Updated on:Aug 02, 2025 | 9:56 AM

Share

ನಟಿ ರಮ್ಯಾ (Ramya) ಅವರಿಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶಗಳು ಬಂದಿದ್ದವು. ಇವರೆಲ್ಲ ದರ್ಶನ್ ಅಭಿಮಾನಿಗಳು ಎಂದು ಹೇಳಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಮ್ಯಾ ಸೈಬರ್ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲು ಮಾಡಿದ್ದರು. ಈ ಪ್ರಕರಣದಲ್ಲಿ ತ್ವರಿತ ಕ್ರಮ ಕೈಗೊಂಡಿರೋ ಪೊಲೀಸ್ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದು, ಒಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಇದರಿಂದ ಉಳಿದವರಿಗೆ ಭಯ ಶುರುವಾಗಿದೆ.

ರಮ್ಯಾ ಅವರು ಇತ್ತೀಚೆಗೆ ರೇಣುಕಾಸ್ವಾಮಿ ಪರ ಮಾತನಾಡಿದ್ದರು. ಸುಪ್ರೀಂ ಕೋರ್ಟ್​​ನಲ್ಲಿ ದರ್ಶನ್ ಜಾಮೀನು  ಅರ್ಜಿ ವಿಚಾರಣೆ ನಡೆಯುವಾಗ ‘ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗೋ ಭರವಸೆ ಇದೆ’ ಎಂದಿದ್ದರು. ಇದು ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣ ಆಗಿತ್ತು. ದರ್ಶನ್ ಫ್ಯಾನ್ಸ್ ರಮ್ಯಾ ಅವರ ಸೋಶಿಯಲ್ ಮೀಡಿಯಾ ಪೋಸ್ಟ್​ಗಳ ಕಮೆಂಟ್ ಬಾಕ್ಸ್​​ನಲ್ಲಿ ಅಶ್ಲೀಲ ಕಮೆಂಟ್​ಗಳನ್ನು ಮಾಡಿದ್ದರು.

ಇಷ್ಟಕ್ಕೆ ನಿಲ್ಲಿಸದೆ ರಮ್ಯಾಗೆ ಕೆಟ್ಟ ಕೆಟ್ಟ ಮೆಸೇಜ್​ಗಳನ್ನು ಕಳುಹಿಸಿದ್ದರು. ಇದನ್ನು ಸಹಿಸಿಕೊಳ್ಳದ ರಮ್ಯಾ ಅವರು ಹೋಗಿ ಸೈಬರ್ ಠಾಣೆಗೆ ದೂರು ದಾಖಲು ಮಾಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ ಸಿಸಿಬಿ ಸೈಬರ್ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಓರ್ವ, ಚಿತ್ರದುರ್ಗ ಮೂಲದ ಓರ್ವನ ಬಂಧನ ಆಗಿದೆ.

ಇದನ್ನೂ ಓದಿ
Image
ಸಮಂತಾ ಕೈಯಲ್ಲಿ ಹೊಸ ಉಂಗುರ; ಹುಟ್ಟಿತು ನಿಶ್ಚಿತಾರ್ಥದ ಚರ್ಚೆ
Image
‘ಕೊತ್ತಲವಾಡಿ’ ಸಿನಿಮಾದ ಮೊದಲ ದಿನದ ಗಳಿಕೆ ಎಷ್ಟು?
Image
ಗಂಟೆಗೆ 11 ಸಾವಿರ ಟಿಕೆಟ್ ಮಾರಿದ ಸು ಫ್ರಮ್ ಸೋ; ಶುಕ್ರವಾರ ದಾಖಲೆ ಕಲೆಕ್ಷನ್
Image
‘ಸು ಫ್ರಮ್ ಸೋ’ ಗೆದ್ದ ಖುಷಿಯಲ್ಲಿ ಬಾವ ಹೇಳೋದೇನು? ಯಾರಿವರು?

ಇದನ್ನೂ ಓದಿ: ರಮ್ಯಾಗೆ ಅಶ್ಲೀಲ ಕಮೆಂಟ್, ನಟಿ ಅದಿತಿ ಪ್ರಭುದೇವ ಹೇಳಿದ್ದು ಹೀಗೆ

ಈ ಪ್ರಕರಣಕ್ಕೆ ಇಲ್ಲಿಗೆ ನಿಲ್ಲುವುದಿಲ್ಲ. ಈ ಪ್ರಕರಣದಲ್ಲಿ ಇನ್ನೂ ಹೆಸರು ದಾಖಲಾಗಿದೆ. ಅವರ ಹುಡುಕಾಟ ನಡೆಯುತ್ತಿದೆ. ಹೀಗಾಗಿ, ಅನೇಕರಿಗೆ ನಡುಕ ಶುರುವಾಗಿದೆ. ಈ ಪ್ರಕರಣದಲ್ಲಿ ಕೇಸ್ ಆದರೆ ಅಭಿಮಾನಿ ತೋರಿಸಲು ಹೋದವರು ಕೋರ್ಟ್​ಗೆ ಅಲೆಯುವ ಪರಿಸ್ಥಿತಿ ನಿರ್ಮಾಣ ಆಗಲಿದೆ.

ನಟಿ ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ತಮಗೆ ಬಂದ ಅಶ್ಲೀಲ ಸಂದೇಶಗಳ ಬಗ್ಗೆ ಮಾಹಿತಿ ನೀಡಿದ್ದರು. ಅದರ ಸ್ಕ್ರಿನ್​ಶಾಟ್​ಗಳನ್ನು ಹಂಚಿಕೊಂಡಿದ್ದರು. ಇದಾದ ಬಳಿಕ ಶಿವರಾಜ್​ಕುಮಾರ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ರಮ್ಯಾ ಪರ ಬ್ಯಾಟ್ ಬೀಸಿದ್ದರು. ಈಗ ಸೈಬರ್ ಪೊಲೀಸರು ಪ್ರಕರಣದಲ್ಲಿ ಸೂಕ್ತ ಕ್ರಮ ಕೈಗೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:25 am, Sat, 2 August 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು