AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮುದ್ದು ಅಜ್ಜಿಯರಿಗಾಗಿ ಮುಂದಿನ ಶೋನಲ್ಲಿ ಕನ್ನಡ ಮಾತಾಡ್ತೀನಿ’ ಎಂದ ರಮ್ಯಾ ವಿರುದ್ಧ ಅಸಮಾಧಾನ

ಹಲವು ವರ್ಷಗಳ ಬಳಿಕ ‘ವೀಕೆಂಡ್ ವಿತ್ ರಮೇಶ್​’ ಹೊಸ ಸೀಸನ್ ಆರಂಭ ಆಗಿದ್ದಕ್ಕೆ ವೀಕ್ಷಕರಿಗೆ ಖುಷಿ ಇತ್ತು. ಆದರೆ, ರಮ್ಯಾ ಅವರು ಕನ್ನಡದಲ್ಲಿ ಮಾತನಾಡದೆ ಇಂಗ್ಲಿಷ್​ನಲ್ಲಿ ಮಾತನಾಡಿದ್ದು ಅನೇಕರಿಗೆ ಬೇಸರ ಮೂಡಿಸಿತ್ತು.

‘ಮುದ್ದು ಅಜ್ಜಿಯರಿಗಾಗಿ ಮುಂದಿನ ಶೋನಲ್ಲಿ ಕನ್ನಡ ಮಾತಾಡ್ತೀನಿ’ ಎಂದ ರಮ್ಯಾ ವಿರುದ್ಧ ಅಸಮಾಧಾನ
ರಮ್ಯಾ
TV9 Web
| Edited By: |

Updated on: Mar 30, 2023 | 2:19 PM

Share

ನಟಿ ರಮ್ಯಾ ಅವರು ದೊಡ್ಡ ಬ್ರೇಕ್​ನ ಬಳಿಕ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಿದ್ದಾರೆ. ಧನಂಜಯ್ ನಟನೆಯ ‘ಉತ್ತರಕಾಂಡ’ ಸಿನಿಮಾದಲ್ಲಿ (Uttarakaanda Movie) ಅವರು ನಟಿಸುತ್ತಿದ್ದಾರೆ. ಇತ್ತೀಚೆಗೆ ಅವರು ಕಿರುತೆರೆ ಶೋ ‘ವೀಕೆಂಡ್ ವಿತ್​ ರಮೇಶ್​’ಗೆ ಅಥಿತಿಯಾಗಿ ಬಂದಿದ್ದರು. ಈ ಶೋನಲ್ಲಿ ಅವರು ಮಾತನಾಡಿದ್ದು ಬಹುತೇಕ ಇಂಗ್ಲಿಷ್​ನಲ್ಲೇ ಆಗಿತ್ತು. ಇದರಿಂದ ಅವರು ಟೀಕೆಗೆ ಒಳಗಾದರು. ಅನೇಕರು ರಮ್ಯಾ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಈ ವಿಚಾರದಲ್ಲಿ ರಮ್ಯಾ (Ramya) ಇಷ್ಟು ದಿನ ಮೌನವಹಿಸಿದ್ದರು. ಈಗ ಅವರು ತಿರುಗೇಟು ನೀಡಿದ್ದಾರೆ. ತಾವು ಇಂಗ್ಲಿಷ್ ಮಾತನಾಡಿದ್ದು ಏಕೆ? ಎಂಬ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಹಲವು ವರ್ಷಗಳ ಬಳಿಕ ‘ವೀಕೆಂಡ್ ವಿತ್ ರಮೇಶ್​’ ಹೊಸ ಸೀಸನ್ ಆರಂಭ ಆಗಿದ್ದಕ್ಕೆ ವೀಕ್ಷಕರಿಗೆ ಖುಷಿ ಇತ್ತು. ಆದರೆ, ರಮ್ಯಾ ಅವರು ಕನ್ನಡದಲ್ಲಿ ಮಾತನಾಡದೆ ಇಂಗ್ಲಿಷ್​ನಲ್ಲಿ ಮಾತನಾಡಿದ್ದು ಅನೇಕರಿಗೆ ಬೇಸರ ಮೂಡಿಸಿತ್ತು. ಈ ವಿಚಾರದಲ್ಲಿ ರಮ್ಯಾ ಅವರನ್ನು ಟ್ರೋಲ್ ಮಾಡಲಾಗಿತ್ತು. ಈಗ ಆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಮೀಮ್ ಒಂದಕ್ಕೆ ರಮ್ಯಾ ಅವರು ಕಮೆಂಟ್ ಮಾಡಿದ್ದಾರೆ. ಈ ಮೂಲಕ ಟ್ರೋಲ್ ಮಾಡುವ ಎಲ್ಲರಿಗೂ ತಿರುಗೇಟು ನೀಡಿದ್ದಾರೆ. ‘ಶೋನ ಹೆಸರು ವೀಕೆಂಡ್ ವಿತ್ ರಮೇಶ್. ಶೋಗೆ ಬಂದ ಅತಿಥಿಗಳು ಕನ್ನಡದವರು ಆಗಿರಲಿಲ್ಲ. ಮುದ್ದು ಅಜ್ಜಿಯರಿಗಾಗಿ ಮುಂದಿನ ಶೋನಲ್ಲಿ ಕನ್ನಡ ಮಾತಾಡ್ತೀನಿ’ ಎಂದು ರಮ್ಯಾ ಹೇಳಿದ್ದಾರೆ.

ಇದನ್ನೂ ಓದಿ: ನನ್ನದು ಸಾರ್ಥಕ ಜೀವನ, ಆದರೂ…: ರಾಜಕೀಯ, ಸಿನಿಮಾ ಹಾಗೂ ಭವಿಷ್ಯದ ಬಗ್ಗೆ ರಮ್ಯಾ ಮಾತು

ಸದ್ಯ ರಮ್ಯಾ ಕಮೆಂಟ್​ಗೆ ಅನೇಕರು ಬೆಂಬಲ ಸೂಚಿಸಿದ್ದಾರೆ. ‘ಇದು ಕೇವಲ ಶೋ. ಇದನ್ನು ಶೋ ರೀತಿಯಲ್ಲೇ ನೋಡಿ. ಇಂಗ್ಲಿಷ್​​ನಲ್ಲಿ ಮಾತಾನಾಡಿದರು ಎಂದ ಮಾತ್ರಕ್ಕೆ ಅವರ ವಿರುದ್ಧ ದ್ವೇಷ ಕಾರೋದು ಸರಿ ಅಲ್ಲ’ ಎಂದು ಹೇಳಿದ್ದಾರೆ. ಇನ್ನೂ ಕೆಲವರು ರಮ್ಯಾ ವಿರುದ್ಧ ಕಿಡಿಕಾರಿದ್ದಾರೆ. ‘ತಪ್ಪಿದ್ದಾಗ ಒಪ್ಪಿಕೊಳ್ಳಿ. ಅದರ ಬದಲು ಈ ರೀತಿ ಹೇಳೋದು ಸರಿ ಅಲ್ಲ’ ಎಂದಿದ್ದಾರೆ. ಇನ್ನೂ ಕೆಲವರು ‘ನೀವು ಕನ್ನಡ ಮಾತನಾಡುವವರೆಗೆ ಆ ಅಜ್ಜಿಯಂದಿರು ಇರಬೇಕಲ್ಲ’ ಎಂದು ಟೀಕೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?