AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ಸತೀಶ್​ ನೀನಾಸಂ ತಮಿಳು ಸಿನಿಮಾ ಲುಕ್​?; ರಮ್ಯಾ ರಿಲೀಸ್​ ಮಾಡಿದ್ರು ಪೋಸ್ಟರ್​

ನೀನಾಸಂ ಸತೀಶ್​ ಅವರ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಕೊವಿಡ್​ ಕಾರಣದಿಂದ ಕೆಲಸ ಸಿನಿಮಾಗಳ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ.

ಹೇಗಿದೆ ಸತೀಶ್​ ನೀನಾಸಂ ತಮಿಳು ಸಿನಿಮಾ ಲುಕ್​?; ರಮ್ಯಾ ರಿಲೀಸ್​ ಮಾಡಿದ್ರು ಪೋಸ್ಟರ್​
TV9 Web
| Edited By: |

Updated on: Sep 08, 2021 | 5:35 PM

Share

ನಟ ಸತೀಶ್​ ನೀನಾಸಂ ಅವರು ತಮಿಳಿನ ‘ಪಗೈವನುಕು ಅರುಳ್ಳಾಯ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಸತೀಶ್​ ಲುಕ್​ ಹೇಗಿದೆ ಎನ್ನುವ ಕುತೂಹಲ ಪ್ರೇಕ್ಷಕರಲ್ಲಿ ಮೂಡಿತ್ತು. ಇದಕ್ಕೆ, ನಟಿ ರಮ್ಯಾ ಉತ್ತರ ನೀಡಿದ್ದಾರೆ. ಅವರು ‘ಪಗೈವನುಕು ಅರುಳ್ಳಾಯ್’ ಪೋಸ್ಟರ್​ ರಿಲೀಸ್​ ಮಾಡಿದ್ದಾರೆ. ಹೊಸ ಪೋಸ್ಟರ್​ನಲ್ಲಿ ಸತೀಶ್​ ಲುಕ್​ ಸಾಕಷ್ಟು ಗಮನ ಸೆಳೆಯುತ್ತಿದೆ. ಅವರು ಕೈಯಲ್ಲಿ ಸಿಗಾರ್​ ಇಟ್ಟುಕೊಂಡು ಸೇದುತ್ತಿದ್ದಾರೆ. ಈ ಪೋಸ್ಟರ್​ ರಮ್ಯಾ ರಿಲೀಸ್​ ಮಾಡಿರುವುದರಿಂದ ಚಿತ್ರಕ್ಕೆ ಒಳ್ಳೆಯ ಮೈಲೇಜ್​ ಸಿಗುವ ಎಲ್ಲಾ ಲಕ್ಷಣ ಗೋಚರವಾಗಿದೆ.

ಮಧ್ಯಾಹ್ನ ಈ ಬಗ್ಗೆ ರಮ್ಯಾ ಬರೆದುಕೊಂಡಿದ್ದರು. ‘ಕನ್ನಡದ ನಮ್ಮ ಹೆಮ್ಮೆಯ ನಟ ಸತೀಶ್ ನೀನಾಸಂ ಅವರ ‘ಪಗೈವನುಕು ಅರುಳ್ಳಾಯ್’ ಚಿತ್ರದ ಪಾತ್ರದ ಪೋಸ್ಟರ್ ಇಂದು ಸಂಜೆ 5ಕ್ಕೆ ತುಂಬಾ ಉತ್ಸಾಹದಿಂದ ಲಾಂಚ್ ಮಾಡುತ್ತಿದ್ದೇನೆ. ಮೊದಲ ಬಾರಿಗೆ ಸತೀಶ್ ನೀನಾಸಂ ಅವರು ತಮಿಳಿನಲ್ಲಿ ನಟಿಸುತ್ತಿದ್ದಾರೆ. ನಮ್ಮ ನಟರು ಬೇರೆ ಭಾಷೆಯಲ್ಲಿ ಬೆಳೆಯುತ್ತಿರುವುದು ನಮ್ಮ ಹೆಮ್ಮೆ. ಮೊದಲ ನೋಟಕ್ಕೆ ಸಂಜೆವರೆಗೆ ಕಾಯುತ್ತಿರಿ’ ಎಂದಿದ್ದರು. ಅಂತೆಯೇ ರಮ್ಯಾ ಐದು ಗಂಟೆಗೆ ಫಸ್ಟ್​ ಲುಕ್​ ರಿಲೀಸ್​ ಮಾಡಿದ್ದಾರೆ.

ರಮ್ಯಾ ಇತ್ತೀಚೆಗೆ ಸಿನಿಮಾ ಕೆಲಸಗಳತ್ತ ಮುಖ ಮಾಡಿಲ್ಲ. ಅವರು ಈ ರೀತಿ ಪೋಸ್ಟರ್​ ರಿಲೀಸ್​ ಮಾಡಿದ ಉದಾಹರಣೆ ಇಲ್ಲ. ಆದರೆ, ಈಗ ಅವರು ಮತ್ತೆ ಸಿನಿಮಾ ಕೆಲಸಗಳಲ್ಲಿತಮ್ಮನ್ನು ತೊಡಗಿಸಿಕೊಂಡಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. ಅಲ್ಲದೆ, ಅವರು ಮತ್ತೇನಾದರೂ ಚಿತ್ರರಂಗಕ್ಕೆ ಮರಳುತ್ತಾರಾ ಎನ್ನುವ ಕೌತುಕ ಕೂಡ ಮೂಡಿದೆ.

ನೀನಾಸಂ ಸತೀಶ್​ ಅವರ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಕೊವಿಡ್​ ಕಾರಣದಿಂದ ಕೆಲಸ ಸಿನಿಮಾಗಳ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ. ಇನ್ನೂ ಕೆಲವು ಶೂಟಿಂಗ್​ ಹಂತದಲ್ಲಿವೆ.

ಇದನ್ನೂ ಓದಿ: ‘ನೀಚವಾಗಿ ಬೈಯ್ದು, ರಾಜಕೀಯ ಮಾಡುವವರ ಲೆವೆಲ್​ಗೆ ರಮ್ಯಾ ಇಳಿಯಲ್ಲ’: ಕವಿತಾ ಲಂಕೇಶ್​

‘ಮಾನಸಿಕವಾಗಿ ಆ ಬಾಲಕಿಗೆ ಎಷ್ಟು ಘಾಸಿ ಆಗಿರಬಹುದು’; ಚಿಕ್ಕಮಗಳೂರು ಘಟನೆ ಬಗ್ಗೆ ಬರೆದುಕೊಂಡ ರಮ್ಯಾ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ