Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ಸತೀಶ್​ ನೀನಾಸಂ ತಮಿಳು ಸಿನಿಮಾ ಲುಕ್​?; ರಮ್ಯಾ ರಿಲೀಸ್​ ಮಾಡಿದ್ರು ಪೋಸ್ಟರ್​

ನೀನಾಸಂ ಸತೀಶ್​ ಅವರ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಕೊವಿಡ್​ ಕಾರಣದಿಂದ ಕೆಲಸ ಸಿನಿಮಾಗಳ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ.

ಹೇಗಿದೆ ಸತೀಶ್​ ನೀನಾಸಂ ತಮಿಳು ಸಿನಿಮಾ ಲುಕ್​?; ರಮ್ಯಾ ರಿಲೀಸ್​ ಮಾಡಿದ್ರು ಪೋಸ್ಟರ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Sep 08, 2021 | 5:35 PM

ನಟ ಸತೀಶ್​ ನೀನಾಸಂ ಅವರು ತಮಿಳಿನ ‘ಪಗೈವನುಕು ಅರುಳ್ಳಾಯ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಸತೀಶ್​ ಲುಕ್​ ಹೇಗಿದೆ ಎನ್ನುವ ಕುತೂಹಲ ಪ್ರೇಕ್ಷಕರಲ್ಲಿ ಮೂಡಿತ್ತು. ಇದಕ್ಕೆ, ನಟಿ ರಮ್ಯಾ ಉತ್ತರ ನೀಡಿದ್ದಾರೆ. ಅವರು ‘ಪಗೈವನುಕು ಅರುಳ್ಳಾಯ್’ ಪೋಸ್ಟರ್​ ರಿಲೀಸ್​ ಮಾಡಿದ್ದಾರೆ. ಹೊಸ ಪೋಸ್ಟರ್​ನಲ್ಲಿ ಸತೀಶ್​ ಲುಕ್​ ಸಾಕಷ್ಟು ಗಮನ ಸೆಳೆಯುತ್ತಿದೆ. ಅವರು ಕೈಯಲ್ಲಿ ಸಿಗಾರ್​ ಇಟ್ಟುಕೊಂಡು ಸೇದುತ್ತಿದ್ದಾರೆ. ಈ ಪೋಸ್ಟರ್​ ರಮ್ಯಾ ರಿಲೀಸ್​ ಮಾಡಿರುವುದರಿಂದ ಚಿತ್ರಕ್ಕೆ ಒಳ್ಳೆಯ ಮೈಲೇಜ್​ ಸಿಗುವ ಎಲ್ಲಾ ಲಕ್ಷಣ ಗೋಚರವಾಗಿದೆ.

ಮಧ್ಯಾಹ್ನ ಈ ಬಗ್ಗೆ ರಮ್ಯಾ ಬರೆದುಕೊಂಡಿದ್ದರು. ‘ಕನ್ನಡದ ನಮ್ಮ ಹೆಮ್ಮೆಯ ನಟ ಸತೀಶ್ ನೀನಾಸಂ ಅವರ ‘ಪಗೈವನುಕು ಅರುಳ್ಳಾಯ್’ ಚಿತ್ರದ ಪಾತ್ರದ ಪೋಸ್ಟರ್ ಇಂದು ಸಂಜೆ 5ಕ್ಕೆ ತುಂಬಾ ಉತ್ಸಾಹದಿಂದ ಲಾಂಚ್ ಮಾಡುತ್ತಿದ್ದೇನೆ. ಮೊದಲ ಬಾರಿಗೆ ಸತೀಶ್ ನೀನಾಸಂ ಅವರು ತಮಿಳಿನಲ್ಲಿ ನಟಿಸುತ್ತಿದ್ದಾರೆ. ನಮ್ಮ ನಟರು ಬೇರೆ ಭಾಷೆಯಲ್ಲಿ ಬೆಳೆಯುತ್ತಿರುವುದು ನಮ್ಮ ಹೆಮ್ಮೆ. ಮೊದಲ ನೋಟಕ್ಕೆ ಸಂಜೆವರೆಗೆ ಕಾಯುತ್ತಿರಿ’ ಎಂದಿದ್ದರು. ಅಂತೆಯೇ ರಮ್ಯಾ ಐದು ಗಂಟೆಗೆ ಫಸ್ಟ್​ ಲುಕ್​ ರಿಲೀಸ್​ ಮಾಡಿದ್ದಾರೆ.

ರಮ್ಯಾ ಇತ್ತೀಚೆಗೆ ಸಿನಿಮಾ ಕೆಲಸಗಳತ್ತ ಮುಖ ಮಾಡಿಲ್ಲ. ಅವರು ಈ ರೀತಿ ಪೋಸ್ಟರ್​ ರಿಲೀಸ್​ ಮಾಡಿದ ಉದಾಹರಣೆ ಇಲ್ಲ. ಆದರೆ, ಈಗ ಅವರು ಮತ್ತೆ ಸಿನಿಮಾ ಕೆಲಸಗಳಲ್ಲಿತಮ್ಮನ್ನು ತೊಡಗಿಸಿಕೊಂಡಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. ಅಲ್ಲದೆ, ಅವರು ಮತ್ತೇನಾದರೂ ಚಿತ್ರರಂಗಕ್ಕೆ ಮರಳುತ್ತಾರಾ ಎನ್ನುವ ಕೌತುಕ ಕೂಡ ಮೂಡಿದೆ.

ನೀನಾಸಂ ಸತೀಶ್​ ಅವರ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಕೊವಿಡ್​ ಕಾರಣದಿಂದ ಕೆಲಸ ಸಿನಿಮಾಗಳ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ. ಇನ್ನೂ ಕೆಲವು ಶೂಟಿಂಗ್​ ಹಂತದಲ್ಲಿವೆ.

ಇದನ್ನೂ ಓದಿ: ‘ನೀಚವಾಗಿ ಬೈಯ್ದು, ರಾಜಕೀಯ ಮಾಡುವವರ ಲೆವೆಲ್​ಗೆ ರಮ್ಯಾ ಇಳಿಯಲ್ಲ’: ಕವಿತಾ ಲಂಕೇಶ್​

‘ಮಾನಸಿಕವಾಗಿ ಆ ಬಾಲಕಿಗೆ ಎಷ್ಟು ಘಾಸಿ ಆಗಿರಬಹುದು’; ಚಿಕ್ಕಮಗಳೂರು ಘಟನೆ ಬಗ್ಗೆ ಬರೆದುಕೊಂಡ ರಮ್ಯಾ

ಸಿಹಿ ಸುದ್ದಿ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ರೈತರಿಗೆ ಯುಗಾದಿ ಬೋನಸ್​
ಸಿಹಿ ಸುದ್ದಿ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ರೈತರಿಗೆ ಯುಗಾದಿ ಬೋನಸ್​
ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ