AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ಸತೀಶ್​ ನೀನಾಸಂ ತಮಿಳು ಸಿನಿಮಾ ಲುಕ್​?; ರಮ್ಯಾ ರಿಲೀಸ್​ ಮಾಡಿದ್ರು ಪೋಸ್ಟರ್​

ನೀನಾಸಂ ಸತೀಶ್​ ಅವರ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಕೊವಿಡ್​ ಕಾರಣದಿಂದ ಕೆಲಸ ಸಿನಿಮಾಗಳ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ.

ಹೇಗಿದೆ ಸತೀಶ್​ ನೀನಾಸಂ ತಮಿಳು ಸಿನಿಮಾ ಲುಕ್​?; ರಮ್ಯಾ ರಿಲೀಸ್​ ಮಾಡಿದ್ರು ಪೋಸ್ಟರ್​
TV9 Web
| Edited By: |

Updated on: Sep 08, 2021 | 5:35 PM

Share

ನಟ ಸತೀಶ್​ ನೀನಾಸಂ ಅವರು ತಮಿಳಿನ ‘ಪಗೈವನುಕು ಅರುಳ್ಳಾಯ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಸತೀಶ್​ ಲುಕ್​ ಹೇಗಿದೆ ಎನ್ನುವ ಕುತೂಹಲ ಪ್ರೇಕ್ಷಕರಲ್ಲಿ ಮೂಡಿತ್ತು. ಇದಕ್ಕೆ, ನಟಿ ರಮ್ಯಾ ಉತ್ತರ ನೀಡಿದ್ದಾರೆ. ಅವರು ‘ಪಗೈವನುಕು ಅರುಳ್ಳಾಯ್’ ಪೋಸ್ಟರ್​ ರಿಲೀಸ್​ ಮಾಡಿದ್ದಾರೆ. ಹೊಸ ಪೋಸ್ಟರ್​ನಲ್ಲಿ ಸತೀಶ್​ ಲುಕ್​ ಸಾಕಷ್ಟು ಗಮನ ಸೆಳೆಯುತ್ತಿದೆ. ಅವರು ಕೈಯಲ್ಲಿ ಸಿಗಾರ್​ ಇಟ್ಟುಕೊಂಡು ಸೇದುತ್ತಿದ್ದಾರೆ. ಈ ಪೋಸ್ಟರ್​ ರಮ್ಯಾ ರಿಲೀಸ್​ ಮಾಡಿರುವುದರಿಂದ ಚಿತ್ರಕ್ಕೆ ಒಳ್ಳೆಯ ಮೈಲೇಜ್​ ಸಿಗುವ ಎಲ್ಲಾ ಲಕ್ಷಣ ಗೋಚರವಾಗಿದೆ.

ಮಧ್ಯಾಹ್ನ ಈ ಬಗ್ಗೆ ರಮ್ಯಾ ಬರೆದುಕೊಂಡಿದ್ದರು. ‘ಕನ್ನಡದ ನಮ್ಮ ಹೆಮ್ಮೆಯ ನಟ ಸತೀಶ್ ನೀನಾಸಂ ಅವರ ‘ಪಗೈವನುಕು ಅರುಳ್ಳಾಯ್’ ಚಿತ್ರದ ಪಾತ್ರದ ಪೋಸ್ಟರ್ ಇಂದು ಸಂಜೆ 5ಕ್ಕೆ ತುಂಬಾ ಉತ್ಸಾಹದಿಂದ ಲಾಂಚ್ ಮಾಡುತ್ತಿದ್ದೇನೆ. ಮೊದಲ ಬಾರಿಗೆ ಸತೀಶ್ ನೀನಾಸಂ ಅವರು ತಮಿಳಿನಲ್ಲಿ ನಟಿಸುತ್ತಿದ್ದಾರೆ. ನಮ್ಮ ನಟರು ಬೇರೆ ಭಾಷೆಯಲ್ಲಿ ಬೆಳೆಯುತ್ತಿರುವುದು ನಮ್ಮ ಹೆಮ್ಮೆ. ಮೊದಲ ನೋಟಕ್ಕೆ ಸಂಜೆವರೆಗೆ ಕಾಯುತ್ತಿರಿ’ ಎಂದಿದ್ದರು. ಅಂತೆಯೇ ರಮ್ಯಾ ಐದು ಗಂಟೆಗೆ ಫಸ್ಟ್​ ಲುಕ್​ ರಿಲೀಸ್​ ಮಾಡಿದ್ದಾರೆ.

ರಮ್ಯಾ ಇತ್ತೀಚೆಗೆ ಸಿನಿಮಾ ಕೆಲಸಗಳತ್ತ ಮುಖ ಮಾಡಿಲ್ಲ. ಅವರು ಈ ರೀತಿ ಪೋಸ್ಟರ್​ ರಿಲೀಸ್​ ಮಾಡಿದ ಉದಾಹರಣೆ ಇಲ್ಲ. ಆದರೆ, ಈಗ ಅವರು ಮತ್ತೆ ಸಿನಿಮಾ ಕೆಲಸಗಳಲ್ಲಿತಮ್ಮನ್ನು ತೊಡಗಿಸಿಕೊಂಡಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. ಅಲ್ಲದೆ, ಅವರು ಮತ್ತೇನಾದರೂ ಚಿತ್ರರಂಗಕ್ಕೆ ಮರಳುತ್ತಾರಾ ಎನ್ನುವ ಕೌತುಕ ಕೂಡ ಮೂಡಿದೆ.

ನೀನಾಸಂ ಸತೀಶ್​ ಅವರ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಕೊವಿಡ್​ ಕಾರಣದಿಂದ ಕೆಲಸ ಸಿನಿಮಾಗಳ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ. ಇನ್ನೂ ಕೆಲವು ಶೂಟಿಂಗ್​ ಹಂತದಲ್ಲಿವೆ.

ಇದನ್ನೂ ಓದಿ: ‘ನೀಚವಾಗಿ ಬೈಯ್ದು, ರಾಜಕೀಯ ಮಾಡುವವರ ಲೆವೆಲ್​ಗೆ ರಮ್ಯಾ ಇಳಿಯಲ್ಲ’: ಕವಿತಾ ಲಂಕೇಶ್​

‘ಮಾನಸಿಕವಾಗಿ ಆ ಬಾಲಕಿಗೆ ಎಷ್ಟು ಘಾಸಿ ಆಗಿರಬಹುದು’; ಚಿಕ್ಕಮಗಳೂರು ಘಟನೆ ಬಗ್ಗೆ ಬರೆದುಕೊಂಡ ರಮ್ಯಾ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ