AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಸಿನಿಮಾ ಮಾಡಲ್ಲ ಅಂದ್ರೆ ಅನೇಕರಿಗೆ ಬೇಸರ ಆಗತ್ತೆ’; ಚಿತ್ರರಂಗಕ್ಕೆ ಬರುವ ಸೂಚನೆ ನೀಡಿದ ರಮ್ಯಾ?

2016ರಲ್ಲಿ ಬಂದ ‘ನಾಗರಹಾವು’ ಸಿನಿಮಾ ಬಳಿಕ ರಮ್ಯಾ ಬೇರೆ ಯಾವುದೇ ಚಿತ್ರವನ್ನೂ ಒಪ್ಪಿಕೊಂಡಿಲ್ಲ. ರಾಜಕೀಯದಲ್ಲಿಯೂ ಅವರಿಗೆ ಕೊಂಚ ಹಿನ್ನಡೆ ಆಯಿತು. ಆದರೆ ಸೋಶಿಯಲ್​ ಮೀಡಿಯಾದಲ್ಲಿ ಅವರು ಸಕ್ರಿಯರಾಗಿದ್ದರು.

‘ನಾನು ಸಿನಿಮಾ ಮಾಡಲ್ಲ ಅಂದ್ರೆ ಅನೇಕರಿಗೆ ಬೇಸರ ಆಗತ್ತೆ’; ಚಿತ್ರರಂಗಕ್ಕೆ ಬರುವ ಸೂಚನೆ ನೀಡಿದ ರಮ್ಯಾ?
ರಮ್ಯಾ ದಿವ್ಯಾ ಸ್ಪಂದನಾ
TV9 Web
| Edited By: |

Updated on:Sep 22, 2021 | 7:51 PM

Share

ನಟಿ ರಮ್ಯಾ ಚಿತ್ರರಂಗದಿಂದ ದೂರವೇ ಉಳಿದುಕೊಂಡಿದ್ದು ಅನೇಕರಿಗೆ ಬೇಸರ ತರಿಸಿದೆ. ಅವರನ್ನು ಮತ್ತೆ ತೆರೆಮೇಲೆ ನೋಡಬೇಕು ಎಂದು ಸಾಕಷ್ಟು ಮಂದಿ ಕಾದುಕೂತಿದ್ದಾರೆ. ರಮ್ಯಾ ಚಿತ್ರರಂಗದಿಂದ ದೂರವೇ ಇದ್ದರೂ ಅವರಿಗೆ ಬೇಡಿಕೆ ಕಡಿಮೆ ಆಗಿಲ್ಲ ಎನ್ನುವುದಕ್ಕೆ ಇದು ಉತ್ತಮ ಉದಾಹರಣೆ. ಈ ಮಧ್ಯೆ, ರಮ್ಯಾ ಮತ್ತೆ ರಾಜಕೀಯ ಅಥವಾ ಚಿತ್ರರಂಗಕ್ಕೆ ಬರುತ್ತಾರಾ? ಈ ಪ್ರಶ್ನೆಗೆ ಅವರು ಉತ್ತರ ನೀಡಿದ್ದಾರೆ.

ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ರಮ್ಯಾ ಈ ಬಗ್ಗೆ ಮಾತನಾಡಿದ್ದಾರೆ. ರಮ್ಯಾ ರಾಜಕೀಯ ತೊರೆದು ಹಲವು ವರ್ಷಗಳು ಕಳೆದಿವೆ. ಅವರು ಮತ್ತೆ ರಾಜಕೀಯಕ್ಕೆ ಬರುತ್ತಾರಾ? ಈ ಪ್ರಶ್ನೆಗೆ ಅವರ ಕಡೆಯಿಂದ ಇಲ್ಲ ಎನ್ನುವ ಉತ್ತರ ಬಂದಿದೆ. ಈ ಮೂಲಕ ಅವರು ಮತ್ತೆ ರಾಜಕೀಯದಲ್ಲಿ ಸಕ್ರಿಯವಾಗಬಾರದು ಎಂಬುದನ್ನು ದೃಢವಾಗಿ ನಿಶ್ಚಯಿಸಿದ್ದಾರೆ. ಆದರೆ, ಚಿತ್ರರಂಗ? ಈ ಬಗ್ಗೆ ಅವರಲ್ಲಿ ಇನ್ನೂ ಒಂದು ಗೊಂದಲ ಉಳಿದುಕೊಂಡಿದೆ. ಅಭಿಮಾನಿಗಳಿಗೆ ಬೇಸರ ಮಾಡಬಾರದು ಎನ್ನುವುದು ರಮ್ಯಾಗೆ ಇನ್ನೂ ಇದೆ.

‘ಸಿನಿಮಾ ಆಫರ್​ಗೆ ಒಕೆ ಎಂದು ಹೇಳುವ ಅವಕಾಶ ಇದ್ದಿದ್ದರೆ ಚೆನ್ನಾಗಿತ್ತು. ಏಕೆಂದರೆ ಇದರಿಂದ ಸಾಕಷ್ಟು ಮಂದಿಗೆ ಖುಷಿ ಆಗುತ್ತದೆ. ಸಿನಿಮಾ ತಂಡದವರು ನನ್ನನ್ನು ಅಪ್ರೋಚ್​ ಮಾಡಿದ್ದರು. ಆದರೆ, ಅವರಿಗೆ ನಾನು ಏನನ್ನೂ ಹೇಳಿಲ್ಲ. ಅವರಿಗೆ ನೋಡೋಣ ಎಂದು ಹೇಳಬೇಕು. ನಾನು ನೋ ಎಂದರೆ ಸಾಕಷ್ಟು ಜನರಿಗೆ ಬೇಸರವಾಗುತ್ತದೆ’ ಎಂದಿದ್ದಾರೆ ರಮ್ಯಾ.

ಮತ್ತೆ ಸಿನಿಮಾಗಳಲ್ಲಿ ರಮ್ಯಾ ತೊಡಗಿಕೊಳ್ಳಬೇಕು ಎಂಬುದು ಹಲವು ಅಭಿಮಾನಿಗಳ ಬಯಕೆ. ಆದರೆ ಅವರೆಲ್ಲರ ಆಸೆಗಳಿಗೆ ರಮ್ಯಾ ಇತ್ತೀಚೆಗೆ ತಣ್ಣೀರು ಎರಚಿದ್ದರು. ಖಡಾಖಂಡಿತವಾಗಿ ತಾವು ಮತ್ತೆ ಚಿತ್ರರಂಗಕ್ಕೆ ಮರಳುವುದಿಲ್ಲ ಎಂದು ಅವರು ಹೇಳಿದ್ದರು. ‘ನಿಮ್ಮನ್ನು ನಿರಾಸೆಗೊಳಿಸುತ್ತಿರುವುದಕ್ಕೆ ಕ್ಷಮೆ ಇರಲಿ. ನಾನು ಆಸಕ್ತಿ ಕಳೆದುಕೊಂಡಿದ್ದೇನೆ. ಆ ಕಾಲ ಯಾವಾಗಲೋ ಮುಗಿಯಿತು’ ಎಂದು ರಮ್ಯಾ ಇನ್​ಸ್ಟಾಗ್ರಾಮ್​ನಲ್ಲಿ ಹೇಳಿದ್ದರು.

2016ರಲ್ಲಿ ಬಂದ ‘ನಾಗರಹಾವು’ ಸಿನಿಮಾ ಬಳಿಕ ರಮ್ಯಾ ಬೇರೆ ಯಾವುದೇ ಚಿತ್ರವನ್ನೂ ಒಪ್ಪಿಕೊಂಡಿಲ್ಲ. ರಾಜಕೀಯದಲ್ಲಿಯೂ ಅವರಿಗೆ ಕೊಂಚ ಹಿನ್ನಡೆ ಆಯಿತು. ಆದರೆ ಸೋಶಿಯಲ್​ ಮೀಡಿಯಾದಲ್ಲಿ ಅವರು ಸಕ್ರಿಯರಾಗಿದ್ದರು.

ಇದನ್ನೂ ಓದಿ: ಹೇಗಿದೆ ಸತೀಶ್​ ನೀನಾಸಂ ತಮಿಳು ಸಿನಿಮಾ ಲುಕ್​?; ರಮ್ಯಾ ರಿಲೀಸ್​ ಮಾಡಿದ್ರು ಪೋಸ್ಟರ್​

‘ಎಲ್ಲವೂ ಕೂಡಿ ಬಂದ್ರೆ ಕನ್ನಡದಲ್ಲೇ ರಮ್ಯಾ ಜತೆ ಸಿನಿಮಾ ಮಾಡ್ತೀನಿ’: ಸತೀಶ್ ನೀನಾಸಂ

Published On - 6:57 pm, Wed, 22 September 21

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ