AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramya: ಕಡೆಗೂ ಶೂಟಿಂಗ್​ ಸೆಟ್​ಗೆ ಬಂದ ರಮ್ಯಾ: ಡಾಲಿ ಜತೆ ಇರುವ ವಿಡಿಯೋ ವೈರಲ್​; ಏನಿದು ಸಮಾಚಾರ?

Ramya Divya Spandana | Daali Dhananjay: ಡಾಲಿ ಧನಂಜಯ್​ ನಟನೆಯ ‘ಹೊಯ್ಸಳ’ ಚಿತ್ರದ ಬಗ್ಗೆ ಫ್ಯಾನ್ಸ್​ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾದ ಶೂಟಿಂಗ್​ ಸೆಟ್​ನಲ್ಲಿ ನಟಿ ರಮ್ಯಾ ಕಾಣಿಸಿಕೊಂಡಿರುವುದು ವಿಶೇಷ.

Ramya: ಕಡೆಗೂ ಶೂಟಿಂಗ್​ ಸೆಟ್​ಗೆ ಬಂದ ರಮ್ಯಾ: ಡಾಲಿ ಜತೆ ಇರುವ ವಿಡಿಯೋ ವೈರಲ್​; ಏನಿದು ಸಮಾಚಾರ?
ಡಾಲಿ ಧನಂಜಯ್, ರಮ್ಯಾ
Follow us
TV9 Web
| Updated By: ಮದನ್​ ಕುಮಾರ್​

Updated on:Jul 11, 2022 | 7:38 AM

ನಟಿ ರಮ್ಯಾ (Ramya Divya Spandana) ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಹಲವು ವರ್ಷಗಳಿಂದ ಅವರು ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ಹಾಗಿದ್ದರೂ ಅವರ ಮೇಲೆ ಜನರು ಇಟ್ಟಿರುವ ಅಭಿಮಾನ ಕಡಿಮೆ ಆಗಿಲ್ಲ. ಆದಷ್ಟು ಬೇಗ ರಮ್ಯಾ ಕಮ್​ಬ್ಯಾಕ್​ ಮಾಡಲಿ ಎಂದು ಅವರ ಫ್ಯಾನ್ಸ್​ ಆಸೆಪಡುತ್ತಿದ್ದಾರೆ. ಈ ವಿಷಯದಲ್ಲಿ ಯಾವಾಗ ಗುಡ್​ ನ್ಯೂಸ್​ ಸಿಗತ್ತೋ ಎಂದು ಎಲ್ಲರೂ ಕಾಯುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ರಮ್ಯಾ ಅವರು ಅನೇಕ ಸಿನಿಮಾಗಳ ಬಗ್ಗೆ ಆಸಕ್ತಿ ತೋರಿಸುತ್ತಿದ್ದಾರೆ. ಈಗ ಡಾಲಿ ಧನಂಜಯ್ ನಟನೆಯ ‘ಹೊಯ್ಸಳ’ (Hoysala Movie) ಚಿತ್ರದ ಶೂಟಿಂಗ್​ ಸೆಟ್​ಗೆ ಅವರು ಭೇಟಿ ನೀಡಿದ್ದಾರೆ. ಚಿತ್ರೀಕರಣದ ವೇಳೆ ರಮ್ಯಾ ಮತ್ತು ಡಾಲಿ ಧನಂಜಯ್ (Daali Dhananjay) ಅವರು ಜೊತೆಯಾಗಿ ಕುಳಿತು ಮಾತನಾಡಿದ ವಿಡಿಯೋ ವೈರಲ್​ ಆಗಿದೆ.

ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಡಾಲಿ ಧನಂಜಯ್​ ಬ್ಯುಸಿ ಆಗಿದ್ದಾರೆ. ಆ ಪೈಕಿ ‘ಹೊಯ್ಸಳ’ ಚಿತ್ರದ ಮೇಲೆ ಫ್ಯಾನ್ಸ್​ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರಕ್ಕೆ ಭರದಿಂದ ಶೂಟಿಂಗ್​ ನಡೆಯುತ್ತಿದೆ. ಇದರ ಚಿತ್ರೀಕರಣದ ಸೆಟ್​ನಲ್ಲಿ ರಮ್ಯಾ ಅವರು ಕಾಣಿಸಿಕೊಂಡಿರುವುದು ವಿಶೇಷ. ಅವರು ಸೆಟ್​ಗೆ ಭೇಟಿ ನೀಡಿದ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಅದು ಸಖತ್​ ವೈರಲ್​ ಆಗುತ್ತಿದೆ.

ಇದನ್ನೂ ಓದಿ
Image
Sai Pallavi: ಕಾಶ್ಮೀರಿ ಪಂಡಿತರ ಹತ್ಯೆ ಕುರಿತು ಸಾಯಿ ಪಲ್ಲವಿ ಹೇಳಿಕೆ ವಿವಾದ: ನಟಿಯ ಪರವಾಗಿ ನಿಂತ ರಮ್ಯಾ
Image
ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ನೋಡಿ ಮೆಚ್ಚಿಕೊಂಡ ನಟಿ ರಮ್ಯಾ ಹೇಳಿದ್ದೇನು?
Image
Rakshit Shetty: ‘ರಮ್ಯಾ ನನ್ನ ಕ್ರಶ್​, ಆದರೆ ಮದುವೆ ಬಗ್ಗೆ ಹಬ್ಬಿರೋದು ಗಾಸಿಪ್​’: ನೇರ ಪ್ರಶ್ನೆಗೆ ಉತ್ತರ ನೀಡಿದ ರಕ್ಷಿತ್​ ಶೆಟ್ಟಿ
Image
Ramya Divya Spandana: ರಕ್ಷಿತ್​ ಶೆಟ್ಟಿ ಜೊತೆ ರಮ್ಯಾ ಮದುವೆ ಆಗ್ಬೇಕು; ಫ್ಯಾನ್ಸ್​ ಬಯಕೆಗೆ ಉತ್ತರ ಕೊಟ್ಟ ಸ್ಯಾಂಡಲ್​ವುಡ್​ ಕ್ವೀನ್​

ಚಿತ್ರೀಕರಣದ ಸ್ಥಳಕ್ಕೆ ಭೇಟಿ ನೀಡಿದ್ದರ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ರಮ್ಯಾ ಬರೆದುಕೊಂಡಿದ್ದಾರೆ. ‘ವಾರಾಂತ್ಯದಲ್ಲಿ ವಿಜಯ್ ಅವರು ನಿರ್ದೇಶಿಸುತ್ತಿರುವ ‘ಹೊಯ್ಸಳ’ ಚಿತ್ರದ ಸೆಟ್​ಗೆ ಭೇಟಿ ನೀಡಿದೆ. ಇಂಟೆನ್ಸ್ ಆ್ಯಕ್ಷನ್ ದೃಶ್ಯವೊಂದನ್ನು ಅವರು ಚಿತ್ರೀಕರಿಸುತ್ತಿದ್ದರು. ಅವರು ಚಿತ್ರೀಕರಿಸಿರುವ ಕೆಲವು ದೃಶ್ಯದ ತುಣುಕುಗಳನ್ನು ನೋಡಿದೆ ಹಾಗೂ ಅವು ಬಹಳ ಚೆನ್ನಾಗಿ ಮೂಡಿಬಂದಿವೆ’ ಎಂದು ರಮ್ಯಾ ಹೊಗಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಅವರಿಗೆ ಆರ್ಕೆಸ್ಟ್ರಾ ಮೈಸೂರು ಚಿತ್ರದ ಟ್ರೈಲರ್ ನೋಡಿ ಎಂದ ನಟಿ ರಮ್ಯಾ..!

‘ಚಾಕ್ಲೆಟ್ ಹಾಗೂ ಆಸಕ್ತಿದಾಯಕ ಮಾತುಕತೆ- ಎರಡಕ್ಕೂ ಧನ್ಯವಾದಗಳು ಧನು. ತೆರೆಯ ಮೇಲೆ ನಿಮ್ಮನ್ನು ಪೊಲೀಸ್ ಪಾತ್ರದಲ್ಲಿ ನೋಡಲು ನನಗೆ ಬಹಳ ಕಾತುರವಿದೆ. ಅಮೃತಾ ಅಯ್ಯಂಗಾರ್​, ಇದರಲ್ಲಿನ ನಿಮ್ಮ ಅತ್ಯುನ್ನತ ಅಭಿನಯಕ್ಕೆ ಬಹಳಷ್ಟು ಪ್ರಶಸ್ತಿಗಳು ನಿಮ್ಮ ಪಾಲಾಗುವುದರಲ್ಲಿ ಅನುಮಾನವಿಲ್ಲ. ಕಾರ್ತಿಕ್​ ಗೌಡ, ಯೋಗಿ ಜಿ. ರಾಜ್​ ಅವರೇ, ‘ರತ್ನನ್ ಪ್ರಪಂಚ’ ಚಿತ್ರದ ಗೆಲುವಿನ ನಂತರ ಗೆಲುವಿನ ಸರಮಾಲೆಯೊಂದಿಗೆ ಮುನ್ನುಗ್ಗುತ್ತಿರುವಿರಿ. ನನ್ನನ್ನು ಕರೆದದ್ದಕ್ಕೆ ಹಾಗೂ ನಿಮ್ಮ ಪ್ರೀತಿಗೆ ನನ್ನ ಧನ್ಯವಾದಗಳು. 2023ರಲ್ಲಿ ಎದುರು ನೋಡಬಯಸುವ ಚಿತ್ರ- ಹೊಯ್ಸಳ’ ಎಂದು ರಮ್ಯಾ ಬರೆದುಕೊಂಡಿದ್ದಾರೆ.

Published On - 7:23 am, Mon, 11 July 22

ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ