AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾವಾಲಾ..’ ಹಾಡಿಗೆ ಮಸ್ತ್ ಆಗಿ ಸ್ಟೆಪ್ ಹಾಕಿದ ನಟಿ ರಮ್ಯಾ ಕೃಷ್ಣನ್

ನಟಿ ರಮ್ಯಾ ಕೃಷ್ಣ ಅವರು ‘ಕಾವಾಲಾ..’ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಹಾಗಂತ ಅವರು ತಮನ್ನಾ ಅವರನ್ನು ಕಾಪಿ ಮಾಡಿಲ್ಲ. ತಮ್ಮದೇ ಆದ ರೀತಿಯಲ್ಲಿ ಅವರು ಹೆಜ್ಜೆ ಹಾಕಿದ್ದಾರೆ.

‘ಕಾವಾಲಾ..’ ಹಾಡಿಗೆ ಮಸ್ತ್ ಆಗಿ ಸ್ಟೆಪ್ ಹಾಕಿದ ನಟಿ ರಮ್ಯಾ ಕೃಷ್ಣನ್
ರಮ್ಯಾ ಕೃಷ್ಣನ್
ರಾಜೇಶ್ ದುಗ್ಗುಮನೆ
|

Updated on: Aug 01, 2023 | 10:59 AM

Share

ನಟಿ ರಮ್ಯಾ ಕೃಷ್ಣನ್ (Ramya Krishna) ಎಲ್ಲರಿಗೂ ಚಿರಪರಿಚಿತರು. ಅವರು ಕನ್ನಡ, ತಮಿಳು, ತೆಲುಗು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ವಿವಿಧ ರೀತಿಯ ಫೋಟೋ ಹಂಚಿಕೊಳ್ಳುತ್ತಾರೆ. ಈಗ ಅವರು ‘ಜೈಲರ್’ (Jailer Movie) ಸಿನಿಮಾದ ‘ಕಾವಾಲಾ..’ ಹಾಡಿಗೆ ಮಸ್ತ್ ಸ್ಟೆಪ್ ಹಾಕಿದ್ದಾರೆ. ಈ ವಿಡಿಯೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ರಜನಿಕಾಂತ್, ಶಿವರಾಜ್​ಕುಮಾರ್ ನಟನೆಯ ‘ಜೈಲರ್’ ಸಿನಿಮಾ ಆಗಸ್ಟ್​ 10ರಂದು ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಈ ಸಿನಿಮಾದ ‘ಕಾವಾಲಾ..’ ಹಾಡು ಯೂಟ್ಯೂಬ್​ನಲ್ಲಿ ರಿಲೀಸ್ ಆಗಿ ಸದ್ದು ಮಾಡಿದೆ. ಕೇವಲ ಯೂಟ್ಯೂಬ್ ಮಾತ್ರವಲ್ಲದೆ ಇನ್​ಸ್ಟಾಗ್ರಾಮ್ ರೀಲ್ಸ್​ನಲ್ಲೂ ಈ ಹಾಡು ಜನಪ್ರಿಯತೆ ಪಡೆದಿದೆ. ಅನೇಕ ಸೆಲೆಬ್ರಿಟಿಗಳು ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ತಮನ್ನಾ ಹಾಕಿದ ಸ್ಟೆಪ್ಸ್​​ನ ಸಾಕಷ್ಟು ಮಂದಿ ಕಾಪಿ ಮಾಡಿದ್ದಾರೆ.

ನಟಿ ರಮ್ಯಾ ಕೃಷ್ಣನ್ ಅವರು ‘ಕಾವಾಲಾ..’ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಹಾಗಂತ ಅವರು ತಮನ್ನಾ ಅವರನ್ನು ಕಾಪಿ ಮಾಡಿಲ್ಲ. ತಮ್ಮದೇ ಆದ ರೀತಿಯಲ್ಲಿ ಅವರು ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋಗೆ ಫ್ಯಾನ್ಸ್ ಕಮೆಂಟ್ ಮಾಡಿದ್ದಾರೆ. 52ನೇ ವಯಸ್ಸಿನಲ್ಲೂ ರಮ್ಯಾ ಕೃಷ್ಣನ್ ಡ್ಯಾನ್ಸ್ ಮಾಡಿದ ರೀತಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಇದನ್ನೂ ಓದಿ: ‘ನಮ್ಮ ಇಂಡಸ್ಟ್ರಿ ಬೆಳೆಯಬೇಕು’; ರಮ್ಯಾ ಕೇಸ್ ಬಗ್ಗೆ ಪ್ರತಿಕ್ರಿಯಿಸಿದ ಶಿವರಾಜ್​ಕುಮಾರ್

ರಮ್ಯಾ ಕೃಷ್ಣನ್ ಇತ್ತೀಚೆಗೆ ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ಕನ್ನಡದಲ್ಲಿ ಅವರು ಕೊನೆಯದಾಗಿ ಕಾಣಿಸಿಕೊಂಡಿದ್ದು ‘ಅಂಜನೀಪುತ್ರ’ ಸಿನಿಮಾದಲ್ಲಿ. ಈ ಚಿತ್ರ 2017ರಲ್ಲಿ ರಿಲೀಸ್ ಆಯಿತು. ‘ಜೈಲರ್’ ಸಿನಿಮಾದಲ್ಲೂ ರಮ್ಯಾ ಕೃಷ್ಣನ್ ನಟಿಸಿದ್ದಾರೆ. ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾದಲ್ಲಿ ಅವರು ಮಹೇಶ್ ಬಾಬು ತಾಯಿ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ. ‘ಜೈಲರ್’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ರಜನಿ-ಶಿವಣ್ಣ ಕಾಂಬಿನೇಷನ್​ ನೋಡಲು ಫ್ಯಾನ್ಸ್ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್