AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಚಾರಣೆ ಮುಗಿದು, ಪ್ರಕರಣಕ್ಕೆ ತಾರ್ಕಿಕ ತೀರ್ಮಾನ ಸಿಕ್ಕರೆ ನ್ಯಾಯ ಸಿಕ್ಕಂತೆ’; ರಮ್ಯಾ

ನಟಿ ರಮ್ಯಾ ಅವರು ಸದ್ಯ ನಟನೆಯಿಂದ ದೂರವೇ ಇದ್ದಾರೆ. ಅವರು ‘ಉತ್ತರಕಾಂಡ’ ಸಿನಿಮಾದಲ್ಲಿ ಅವರು ನಟಿಸಬೇಕಿತ್ತು. ಆದರೆ, ಅವರು ಚಿತ್ರದಿಂದ ಹಿಂದೆ ಸರಿದಿದ್ದಾರೆ. ಸದ್ಯ ರಮ್ಯಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ವಿಚಾರಗಳ ಬಗ್ಗೆ ಮಾತನಾಡುತ್ತಿದ್ದಾರೆ. ಈಗ ರಮ್ಯಾ ಹೊಸ ಪೋಸ್ಟ್ ಹಾಕಿದ್ದಾರೆ.

‘ವಿಚಾರಣೆ ಮುಗಿದು, ಪ್ರಕರಣಕ್ಕೆ ತಾರ್ಕಿಕ ತೀರ್ಮಾನ ಸಿಕ್ಕರೆ ನ್ಯಾಯ ಸಿಕ್ಕಂತೆ’; ರಮ್ಯಾ
‘ವಿಚಾರಣೆ ಮುಗಿದು, ಪ್ರಕರಣಕ್ಕೆ ತಾರ್ಕಿಕ ತೀರ್ಮಾನ ಸಿಕ್ಕರೆ ನ್ಯಾಯ ಸಿಕ್ಕಂತೆ ಆಗುತ್ತದೆ’; ರಮ್ಯಾ
ರಾಜೇಶ್ ದುಗ್ಗುಮನೆ
|

Updated on:Jun 22, 2024 | 12:38 PM

Share

ಕರ್ನಾಟಕದಲ್ಲಿ ಹಲವು ರೀತಿಯ ಬೆಳವಣಿಗೆ ನಡೆಯುತ್ತಿದೆ. ಹಲವು ಸೆಲೆಬ್ರಿಟಿಗಳು ಬೇರೆ ಬೇರೆ ಪ್ರಕರಣದಲ್ಲಿ ಸಿಕ್ಕಿ ಬಿದ್ದಿದ್ದಾರೆ. ದರ್ಶನ್ (Darshan)​ ಕೊಲೆ ಕೇಸ್, ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆ, ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್, ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ಇದೆ. ಈ ಎಲ್ಲಾ ಪ್ರಕರಣಗಳ ಬಗ್ಗೆ ರಮ್ಯಾ ಅವರು ಟ್ವೀಟ್ ಮಾಡಿದ್ದಾರೆ.

ನಟಿ ರಮ್ಯಾ ಅವರು ಸದ್ಯ ನಟನೆಯಿಂದ ದೂರವೇ ಇದ್ದಾರೆ. ಅವರು ‘ಉತ್ತರಕಾಂಡ’ ಸಿನಿಮಾದಲ್ಲಿ ಅವರು ನಟಿಸಬೇಕಿತ್ತು. ಆದರೆ, ಅವರು ಚಿತ್ರದಿಂದ ಹಿಂದೆ ಸರಿದಿದ್ದಾರೆ. ಸದ್ಯ ರಮ್ಯಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ವಿಚಾರಗಳ ಬಗ್ಗೆ ಮಾತನಾಡುತ್ತಿದ್ದಾರೆ. ಈಗ ರಮ್ಯಾ ಹೊಸ ಪೋಸ್ಟ್ ಹಾಕಿದ್ದಾರೆ.

ಇದನ್ನೂ ಓದಿ: ‘ನನಗೂ ಕೆಟ್ಟ ಕಮೆಂಟ್ ಬಂದಿತ್ತು’: ದರ್ಶನ್​ ಕೇಸ್​ ಬಗ್ಗೆ ರಮ್ಯಾ ಖಡಕ್​ ಮಾತುಗಳು

‘ಸುದ್ದಿಯಲ್ಲಿರುವ ಕಾನೂನನ್ನು ಮುರಿಯುವವರು, ಶ್ರೀಮಂತರು ಮತ್ತು ಶಕ್ತಿಶಾಲಿಗಳು ಮತ್ತು ಅವರ ಹಿಂಸಾತ್ಮಕ ಕ್ರಿಯೆಗಳಿಂದ ತೊಂದರೆ ಅನುಭವಿಸಿದವರು ಬಡವರು, ಮಹಿಳೆಯರು ಮತ್ತು ಮಕ್ಕಳು ಹಾಗೂ ಕರ್ನಾಟಕದ ಜನಸಾಮಾನ್ಯರು. ಈ ಅಪರಾಧಗಳನ್ನು ಹೊರಗೆ ತಂದ ಪೊಲೀಸರಿಗೆ ಮತ್ತು ಮಾಧ್ಯಮಗಳಿಗೆ ಹ್ಯಾಟ್ಸ್ ಆಫ್. ವಿಚಾರಣೆ ಪೂರ್ಣಗೊಂಡು ಪ್ರಕರಣಕ್ಕೆ ತಾರ್ಕಿಕ ತೀರ್ಮಾನ ಸಿಕ್ಕರೆ ನ್ಯಾಯ ಸಿಕ್ಕಂತೆ ಆಗುತ್ತದೆ. ನ್ಯಾಯ ಸಿಗದಿದ್ದರೆ ಸಾರ್ವಜನಿಕರಿಗೆ ನಾವೇನು ​​ಸಂದೇಶ ನೀಡುತ್ತಿದ್ದೇವೆ?’ ಎಂದು ರಮ್ಯಾ ಹೇಳಿದ್ದಾರೆ. ಇದರ ಜೊತೆಗೆ ದರ್ಶನ್, ಯಡಿಯೂರಪ್ಪ, ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣ ಹ್ಯಾಶ್ ಟ್ಯಾಗ್ ಹಾಕಿದ್ದಾರೆ.

ಈ ಮೊದಲು ದರ್ಶನ್ ಬಗ್ಗೆ ಪೋಸ್ಟ್ ಮಾಡಿದ್ದ ರಮ್ಯಾ, ‘ಕಾನೂನಿಗಿಂತ ಯಾರೂ ಕೂಡ ದೊಡ್ಡವರಲ್ಲ. ಕಾನೂನನ್ನು ಯಾರೂ ತಮ್ಮ ಕೈಗೆ ತೆಗೆದುಕೊಳ್ಳಬಾರದು. ಜನರನ್ನು ನೀವು ಹೋಗಿ ಹೊಡೆದು ಕೊಲ್ಲುವುದಲ್ಲ. ಒಂದು ಸರಳವಾದ ದೂರು ಸಾಕು. ಈಗ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್​ ಅಧಿಕಾರಿಗಳಿಗೆ ನಾನು ಮೆಚ್ಚುಗೆ ಮತ್ತು ಗೌರವ ಸಲ್ಲಿಸುತ್ತೇನೆ. ಅವರದ್ದು ಕೃತಜ್ಞತೆ ಇಲ್ಲದ ಕೆಲಸ. ಅತ್ಯುತ್ತಮವಾಗಿ ಅವರು ಕೆಲಸ ಮಾಡುತ್ತಿದ್ದಾರೆ. ರಾಜಕೀಯ ಪಕ್ಷಗಳ ಒತ್ತಡಕ್ಕೆ ಅವರು ಮಣಿಯುವುದಿಲ್ಲ ಹಾಗೂ ಕಾನೂನಿನ ಮೇಲೆ ಜನರ ಭರವಸೆಯನ್ನು ಉಳಿಸುತ್ತಾರೆ ಅಂತ ನಾನು ನಂಬಿದ್ದೇನೆ’ಎಂದಿದ್ದರು ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:36 pm, Sat, 22 June 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್