AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Actress Ramya: ನನ್ನ ಸಂಗಾತಿ ಸತ್ತಿರಬಹುದು…ಹಳೆ ಪ್ರೇಮ ಪುರಾಣದ ಗುಂಗಿನಲ್ಲಿ ನಟಿ ರಮ್ಯಾ?

Sandalwood Actress Ramya: ಸ್ಯಾಂಡಲ್​ವುಡ್​ನಲ್ಲಿ ನಾಯಕಯಾಗಿ ಮಿಂಚಿದ್ದ ರಮ್ಯಾ ಮತ್ತೆ ಕಂಬ್ಯಾಕ್ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಇದನ್ನು ಪುಷ್ಠೀಕರಿಸುವಂತೆ ಇತ್ತೀಚಿನ ದಿನಗಳಲ್ಲಿ ಅವರು ಚಿತ್ರರಂಗದ ಪ್ರಮುಖರೊಂದಿಗೆ ಕಾಣಿಸಿಕೊಂಡಿದ್ದರು.

Actress Ramya: ನನ್ನ ಸಂಗಾತಿ ಸತ್ತಿರಬಹುದು...ಹಳೆ ಪ್ರೇಮ ಪುರಾಣದ ಗುಂಗಿನಲ್ಲಿ ನಟಿ ರಮ್ಯಾ?
Actress Ramya
TV9 Web
| Updated By: Digi Tech Desk|

Updated on:Aug 06, 2022 | 12:30 PM

Share

ಸ್ಯಾಂಡಲ್​ವುಡ್ ಕ್ವೀನ್ ನಟಿ ರಮ್ಯಾ (Actress Ramya) ಚಿತ್ರರಂಗದಿಂದ ದೂರ ಉಳಿದು ವರ್ಷಗಳೇ ಕಳೆದಿವೆ. ಆದರೂ ಅವರ ಫ್ಯಾನ್ ಫಾಲೋಯಿಂಗ್ ಇನ್ನೂ ಕೂಡ ಹಾಗೇ ಇದೆ. ಇದಕ್ಕೆ ಸಾಕ್ಷಿಯೇ ಅವರು ಕುಂತರೂ ನಿಂತರೂ ಸುದ್ದಿಯಾಗುತ್ತಿರುವುದು. ಇದೀಗ ಅವರು ಹಾಕಿದ ಒಂದೇ ಒಂದು ಇನ್​ಸ್ಟಾಗ್ರಾಮ್ ರೀಲ್ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ಅದರಲ್ಲೂ ಮುಖ್ಯವಾಗಿ ಅವರ ಮದುವೆ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಅಷ್ಟಕ್ಕೂ ಚಂದನವನ ಚೆಂದುಳ್ಳಿ ಚೆಲುವೆ ಹಾಕಿದ ಆ ಇನ್​ಸ್ಟಾಗ್ರಾಮ್ ರೀಲ್ಸ್​ನಲ್ಲಿ ಏನಿತ್ತು? ಅವರು ಸಂಗಾತಿಯನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರಾ? ಎಂಬುದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.

2016 ರಲ್ಲಿ ಕೊನೆಯ ಬಾರಿ ಕನ್ನಡ ಚಿತ್ರದಲ್ಲಿ ಕಾಣಿಸಿಕೊಂಡ ರಮ್ಯಾ ಆ ಬಳಿಕ ಬಣ್ಣದಲೋಕದಿಂದ ದೂರವೇ ಉಳಿದಿದ್ದರು. ಇದರ ನಡುವೆ ಒಂದಷ್ಟು ರಾಜಕೀಯ ಮತ್ತು ಮತ್ತೊಂದಷ್ಟು ವೈಯುಕ್ತಿಕ ವಿಚಾರಗಳಿಂದ ಸುದ್ದಿಯಾಗಿದ್ದರು. ಈ ವೇಳೆ ಕೇಳಿ ಬಂದ ಪ್ರಮುಖ ಹೆಸರೆಂದರೆ ರಾಫೆಲ್. ಪೋರ್ಚುಗಲ್ ಉದ್ಯಮಿ ರಾಫೆಲ್ ಜೊತೆ ಸ್ಯಾಂಡಲ್​ವುಡ್ ಮೋಹಕ ತಾರೆ ಹಸೆಮಣೆ ಏರಲಿದ್ದಾರೆ ಎಂಬಿತ್ಯಾದಿ ಸುದ್ದಿಗಳು ಕೂಡ ಹರಿದಾಡಿತ್ತು. ಆದರೆ ಆಮೇಲೆ ಏನಾಯ್ತೊ..ಇದಕ್ಕಿದ್ದಂತೆ ರಮ್ಯಾ ಒಂಟಿಯಾಗಿ ಕಾಣಿಸಿಕೊಂಡರು.

ಇದೀಗ ಹಳೆಯ ಸಂಗಾತಿಯನ್ನು ನೆನಪಿಸಿಕೊಳ್ಳುವಂತಹ ರೀಲ್ಸ್​ವೊಂದನ್ನು ರಮ್ಯಾ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ನನ್ನ ಸಂಗಾತಿ ಸತ್ತಿರಬಹುದು ಇಲ್ಲ ನನಗೆ ಸಂಗಾತಿನೇ ಹುಟ್ಟಿಲ್ಲ ಎಂಬ ಸಾಹಿತ್ಯದ ಇಂಗ್ಲಿಷ್ ಹಾಡೊಂದರ ವಿಡಿಯೋವನ್ನು  ಶೇರ್ ಮಾಡಿದ್ದಾರೆ.

ಇದನ್ನೂ ಓದಿ
Image
KGF: ಕಬಾಲಿ ನಿರ್ದೇಶಕನ ಮಾಸ್ಟರ್​ ಪ್ಲ್ಯಾನ್​: ಬರಲಿದೆ ಮತ್ತೊಂದು ಕೆಜಿಎಫ್..!
Image
Yash Next Movie: ಯಶ್ ಮುಂದಿನ ಚಿತ್ರಕ್ಕೆ ಸೌತ್ ಸುಂದರಿ ನಾಯಕಿ..?
Image
Kabza: ಒಂದಲ್ಲ, ಎರಡಲ್ಲ, ಮೂರಲ್ಲ…ವಿದೇಶಿ ಭಾಷೆಗಳಲ್ಲೂ ಬಿಡುಗಡೆಯಾಗಲಿದೆ ಕಬ್ಜ
Image
Rashmika Mandanna: ಮಿಂಚಿಂಗೊ ಮಿಂಚಿಂಗ್…ಸದ್ಯಕ್ಕಂತು ಕನ್ನಡಕ್ಕಿಲ್ಲ ರಶ್ಮಿಕಾ ಮಂದಣ್ಣ..!

Watch this story by Ramya/Divya Spandana on Instagram before it disappears.

null

ಐನಾಟ್​ಶೇನ್ ಹಾಡಿರುವ ಈ ಹಾಡು ಭಗ್ನ ಪ್ರೇಮಿಗಳಿಗೆ ಮಾಡಿಸಿದಂತಹ ಸಾಹಿತ್ಯವನ್ನು ಹೊಂದಿದೆ. ಇದೇ ಹಾಡನ್ನು ರಮ್ಯಾ ಹಂಚಿಕೊಂಡಿದ್ದರಿಂದ ಇದೀಗ ನಟಿಯು ಸಂಗಾತಿಯ ನೆನಪಿನ ಗುಂಗಿನಲ್ಲೇ ಕಾಲ ಕಳೆಯುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಮತ್ತೊಂದೆಡೆ ಮೋಹಕತಾರೆ ಸೋಷಿಯಲ್ ಮೀಡಿಯಾದಲ್ಲಿ ಹೀಗ್ಯಾಕೆ ಹಾಕಿದ್ದಾರೆ ಎಂಬ ಅಭಿಮಾನಿಗಳು ತಲೆ ಕೆಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಸ್ಯಾಂಡಲ್​ವುಡ್ ಕ್ವೀನ್​​ಗೆ ಒಂಟಿತನ ಕಾಡುತ್ತಿದೆಯಾ ಎಂಬ ಪ್ರಶ್ನೆಯೊಂದು ಅಭಿಮಾನಿಗಳನ್ನು ಕಾಡತೊಡಗಿದೆ.

ಸಿಕ್ಕಾಪಟ್ಟೆ ಹಿಟ್ ಆಗಿರುವ ಒಂದಾದ್ರೆ ನನ್ನ ಸಂಗಾತಿ ಸತ್ತಿರಬಹುದು  (Maybe My Soulmate Died) ಹಾಡಿಗೆ ಬ್ರೇಕ್ ಅಪ್ ಆದವರು ಹಾಗೂ ಮದುವೆಯಲ್ಲಿ ಆಸಕ್ತಿ ಇಲ್ಲದವರು ರೀಲ್ಸ್ ಮಾಡುತ್ತಿದ್ದಾರೆ. ಇದೀಗ ಅದೇ ಟ್ರೆಂಡ್ ಅನ್ನು ನಟಿ ರಮ್ಯಾ ಕೂಡ ಫಾಲೋ ಮಾಡಿರುವುದರಿಂದ ಅಭಿಮಾನಿಗಳಲ್ಲಿ ನಾನಾ ಯೋಚನೆಗಳು ಶುರುವಾಗಿದೆ.

ರಮ್ಯಾ ರಿಎಂಟ್ರಿ..? ಸ್ಯಾಂಡಲ್​ವುಡ್​ನಲ್ಲಿ ನಾಯಕಯಾಗಿ ಮಿಂಚಿದ್ದ ರಮ್ಯಾ ಮತ್ತೆ ಕಂಬ್ಯಾಕ್ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಇದನ್ನು ಪುಷ್ಠೀಕರಿಸುವಂತೆ ಇತ್ತೀಚಿನ ದಿನಗಳಲ್ಲಿ ಅವರು ಚಿತ್ರರಂಗದ ಪ್ರಮುಖರೊಂದಿಗೆ ಕಾಣಿಸಿಕೊಂಡಿದ್ದರು. ಅದರಲ್ಲೂ ತಿಂಗಳ ಹಿಂದೆಯಷ್ಟೇ ಅವರು ಡಾಲಿ ಧನಂಜಯ್ ನಟನೆಯ ಹೊಯ್ಸಲ ಚಿತ್ರ ಸೆಟ್​ಗೆ ಭೇಟಿ ನೀಡಿದ್ದರು. ಹೀಗಾಗಿಯೇ ಹೊಯ್ಸಳ ಚಿತ್ರದ ವಿಶೇಷ ಪಾತ್ರವೊಂದರ ಮೂಲಕ ಸ್ಯಾಂಡಲ್​ವುಡ್ ಕ್ವೀನ್ ಮತ್ತೆ ಬಣ್ಣ ಹಚ್ಚಿದ್ದಾರೆ ಎಂಬ ಸುದ್ದಿಯೊಂದು ಹರಿದಾಡಿತ್ತು. ಇದಾಗ್ಯೂ ಹೊಯ್ಸಳ ಚಿತ್ರತಂಡವಾಗಲಿ, ರಮ್ಯಾ ಆಗಲಿ ಈ ಬಗ್ಗೆ ಯಾವುದೇ ಗುಟ್ಟು ಬಿಟ್ಟು ಕೊಟ್ಟಿಲ್ಲ. ಅದಾಗ್ಯೂ ರಮ್ಯಾ ಅವರ ರಿಎಂಟ್ರಿಯನ್ನು ಸ್ವಾಗತಿಸಲು ಅಭಿಮಾನಿಗಳಂತು ತುದಿಗಾಲಲ್ಲಿ ನಿಂತಿದ್ದಾರೆ ಎಂಬುದೇ ಸತ್ಯ.

Published On - 11:51 am, Sat, 6 August 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ