AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Actress Ramya: ಮತ್ತೆ ಸಿನಿಮಾ ಕೆಲಸಗಳತ್ತ ಮುಖ ಮಾಡಿದ ನಟಿ ರಮ್ಯಾ; ಆದರೆ..

ಈಗ ರಮ್ಯಾ ಮತ್ತೆ ಚಿತ್ರರಂಗದ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಹಾಗಂತ ಅವರ ಯಾವುದೇ ಸಿನಿಮಾ ಘೋಷಣೆ ಆಗಿಲ್ಲ. ಬದಲಿಗೆ, ನೀನಾಸಂ ಸತೀಶ್​ ನಟನೆಯ ಹೊಸ ಸಿನಿಮಾದ ಪೋಸ್ಟರ್​ಅನ್ನು ಅವರು ರಿಲೀಸ್​ ಮಾಡುತ್ತಿದ್ದಾರೆ.

Actress Ramya: ಮತ್ತೆ ಸಿನಿಮಾ ಕೆಲಸಗಳತ್ತ ಮುಖ ಮಾಡಿದ ನಟಿ ರಮ್ಯಾ; ಆದರೆ..
ಮತ್ತೆ ಸಿನಿಮಾ ಕೆಲಸಗಳತ್ತ ಮುಖ ಮಾಡಿದ ನಟಿ ರಮ್ಯಾ; ಆದರೆ..
TV9 Web
| Edited By: |

Updated on:Sep 08, 2021 | 4:54 PM

Share

ನಟಿ ರಮ್ಯಾ ಅವರು ರಾಜಕೀಯಕ್ಕೆ ಎಂಟ್ರಿ ಕೊಟ್ಟ ನಂತರ ಸಿನಿಮಾ ರಂಗದಿಂದ ದೂರವೇ ಉಳಿದರು. ರಾಜಕೀಯ ತೊರೆದ ನಂತರ ಮತ್ತೆ ಚಿತ್ರರಂಗಕ್ಕೆ ಬರುತ್ತಾರೆ ಎನ್ನಲಾಗಿತ್ತು. ಆದರೆ, ‘ಸಿನಿಮಾ ಹಡಗು ಮುಳುಗಿದೆ, ಮತ್ತೆ ಚಿತ್ರರಂಗಕ್ಕೆ ಬರೋದಿಲ್ಲ’ ಎಂದು ಅವರು ಸ್ಪಷ್ಟನೆ ನೀಡಿದ್ದರು. ಆದರೆ, ಈಗ ಅವರು ಮತ್ತೆ ಚಿತ್ರರಂಗದ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಹಾಗಂತ ಅವರ ಯಾವುದೇ ಸಿನಿಮಾ ಘೋಷಣೆ ಆಗಿಲ್ಲ. ಬದಲಿಗೆ, ನೀನಾಸಂ ಸತೀಶ್​ ನಟನೆಯ ಹೊಸ ಸಿನಿಮಾದ ಪೋಸ್ಟರ್​ಅನ್ನು ಅವರು ರಿಲೀಸ್​ ಮಾಡುತ್ತಿದ್ದಾರೆ.

‘ಕನ್ನಡದ ನಮ್ಮ ಹೆಮ್ಮೆಯ ನಟ ಸತೀಶ್ ನೀನಾಸಂ ಅವರ ‘ಪಗೈವನುಕು ಅರುಳ್ಳಾಯ್’ ಚಿತ್ರದ ಪಾತ್ರದ ಪೋಸ್ಟರ್ ಇಂದು ಸಂಜೆ 5ಕ್ಕೆ ತುಂಬಾ ಉತ್ಸಾಹದಿಂದ ಲಾಂಚ್ ಮಾಡುತ್ತಿದ್ದೇನೆ. ಮೊದಲ ಬಾರಿಗೆ ಸತೀಶ್ ನೀನಾಸಂ ಅವರು ತಮಿಳಿನಲ್ಲಿ ನಟಿಸುತ್ತಿದ್ದಾರೆ. ನಮ್ಮ ನಟರು ಬೇರೆ ಭಾಷೆಯಲ್ಲಿ ಬೆಳೆಯುತ್ತಿರುವುದು ನಮ್ಮ ಹೆಮ್ಮೆ. ಮೊದಲ ನೋಟಕ್ಕೆ ಸಂಜೆವರೆಗೆ ಕಾಯುತ್ತಿರಿ’ ಎಂದು ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ.

ರಮ್ಯಾ ಇತ್ತೀಚೆಗೆ ಸಿನಿಮಾ ಕೆಲಸಗಳತ್ತ ಮುಖ ಮಾಡಿಲ್ಲ. ಅವರು ಈ ರೀತಿ ಪೋಸ್ಟರ್​ ರಿಲೀಸ್​ ಮಾಡಿದ ಉದಾಹರಣೆ ಇಲ್ಲ. ಆದರೆ, ಈಗ ಅವರು ಮತ್ತೆ ಸಿನಿಮಾ ಕೆಲಸಗಳಲ್ಲಿತಮ್ಮನ್ನು ತೊಡಗಿಸಿಕೊಂಡಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. ಅಲ್ಲದೆ, ಅವರು ಮತ್ತೇನಾದರೂ ಚಿತ್ರರಂಗಕ್ಕೆ ಮರಳುತ್ತಾರಾ ಎನ್ನುವ ಕೌತುಕ ಕೂಡ ಮೂಡಿದೆ.

ನೀನಾಸಂ ಸತೀಶ್​ ಅವರ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಕೊವಿಡ್​ ಕಾರಣದಿಂದ ಕೆಲಸ ಸಿನಿಮಾಗಳ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ. ಇನ್ನೂ ಕೆಲವು ಶೂಟಿಂಗ್​ ಹಂತದಲ್ಲಿವೆ.

ಇದನ್ನೂ ಓದಿ: ‘ರಮ್ಯಾ-ರಕ್ಷಿತಾ ನಡುವೆ ಆ ವಿಚಾರಕ್ಕೆ ಕಿರಿಕ್​ ಆಗಿತ್ತು’; ಶೂಟಿಂಗ್​ ಸಮಯದ ವಿವರ ತೆರೆದಿಟ್ಟ ಕವಿತಾ ಲಂಕೇಶ್​

‘ಮಾನಸಿಕವಾಗಿ ಆ ಬಾಲಕಿಗೆ ಎಷ್ಟು ಘಾಸಿ ಆಗಿರಬಹುದು’; ಚಿಕ್ಕಮಗಳೂರು ಘಟನೆ ಬಗ್ಗೆ ಬರೆದುಕೊಂಡ ರಮ್ಯಾ

Published On - 4:25 pm, Wed, 8 September 21

Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ