Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕರಾವಳಿ’ ಸಿನಿಮಾಗೆ ಸಂಪದಾ ನಾಯಕಿ; ಪ್ರಜ್ವಲ್​ ನಟನೆಯ ಚಿತ್ರದಲ್ಲಿ ಕನ್ನಡತಿಗೆ ಅವಕಾಶ

‘ಕರಾವಳಿ’ ಚಿತ್ರದ ಹೀರೋಯಿನ್​ ಕುರಿತು ಮಾಹಿತಿ ಹಂಚಿಕೊಳ್ಳುವ ಸಲುವಾಗಿ ಬಿಡುಗಡೆ ಆಗಿರುವ ಹೊಸ ಪೋಸ್ಟರ್​ನಲ್ಲಿ ಸಂಪದಾ ಅವರು ಕೆಂಪು ಸೀರೆ ಧರಿಸಿ ಮಿಂಚಿದ್ದಾರೆ. ಈ ಚಿತ್ರದ ಟೈಟಲ್​ ಸೂಚಿಸುವಂತೆ ಇದು ಸಂಪೂರ್ಣ ಕರಾವಳಿ ಭಾಗದಲ್ಲಿ ನಡೆಯುವ ಕಥೆ. ಹಾಗಾಗಿ ಸಂಪದಾ ಅವರು ಕರಾವಳಿ ಬೆಡಗಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

‘ಕರಾವಳಿ’ ಸಿನಿಮಾಗೆ ಸಂಪದಾ ನಾಯಕಿ; ಪ್ರಜ್ವಲ್​ ನಟನೆಯ ಚಿತ್ರದಲ್ಲಿ ಕನ್ನಡತಿಗೆ ಅವಕಾಶ
ಸಂಪದಾ
Follow us
ಮದನ್​ ಕುಮಾರ್​
|

Updated on: Feb 14, 2024 | 2:25 PM

ಫಸ್ಟ್ ಲುಕ್ ಹಾಗೂ ಟೀಸರ್ ಮೂಲಕ ಕರಾವಳಿ’ ಸಿನಿಮಾ (Karavali Movie) ನಿರೀಕ್ಷೆ ಮೂಡಿಸಿದೆ. ‘ಅಂಬಿ ನಿಂಗ್​ ವಯಸ್ಸಾಯ್ತೋ’ ಖ್ಯಾತಿಯ ಗುರುದತ್ತ ಗಾಣಿಗ ಅವರು ನಿರ್ದೇಶನ ಮಾಡುತ್ತಿರುವ ಈ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್ (Prajwal Devaraj) ಅವರು ನಾಯಕನಾಗಿ ಅಭಿನಯಿಸುತ್ತಿದ್ದಾರೆ. ‘ಕರಾವಳಿ’ ಸಿನಿಮಾದಿಂದ ಹೊಸ ಅಪ್‌ಡೇಟ್ ತಿಳಿಯಲು ಫ್ಯಾನ್ಸ್​ ಕಾತರದಿಂದ ಕಾದಿದ್ದರು. ಈಗ ಈ ಸಿನಿಮಾ ತಂಡದಿಂದ ಹೊಸ ಮಾಹಿತಿಯೊಂದನ್ನು ಹಂಚಿಕೊಳ್ಳಲಾಗಿದೆ. ‘ಕರಾವಳಿ’ ಸಿನಿಮಾದ ನಾಯಕಿ ಯಾರು ಎಂಬ ಮಾಹಿತಿ ಬಹಿರಂಗ ಆಗಿದೆ. ನಟಿ ಸಂಪದಾ (Sampada) ಅವರು ಈ ಸಿನಿಮಾಗೆ ಹೀರೋಯಿನ್​ ಆಗಿ ಎಂಟ್ರಿ ನೀಡಿದ್ದಾರೆ.

‘ಕರಾವಳಿ’ ಸಿನಿಮಾಗೆ ಕನ್ನಡದವರೇ ನಾಯಕಿ ಆಗುತ್ತಾರಾ ಅಥವಾ ಪರಭಾಷೆಯ ನಟಿಯನ್ನು ಕರೆತರಲಾಗುತ್ತಾ ಎಂಬ ಕುತೂಹಲ ಪ್ರಜ್ವಲ್​ ದೇವರಾಜ್​ ಅವರ ಅಭಿಮಾನಿಗಳಲ್ಲಿ ಇತ್ತು. ಆ ಕೌತುಕಕ್ಕೆ ಈಗ ಪೂರ್ಣವಿರಾಮ ಬಿದ್ದಿದೆ. ಕಿರುತೆರೆಯಲ್ಲಿ ಖ್ಯಾತಿ ಪಡೆದಿರುವ ನಟಿ ಸಂಪದಾ ಅವರು ಪ್ಜಜ್ವಲ್‌ಗೆ ನಾಯಕಿಯಾಗುವ ಮೂಲಕ ದೊಡ್ಡ ಪರದೆಯಲ್ಲಿ ಮಿಂಚಲು ರೆಡಿಯಾಗಿದ್ದಾರೆ. ಟೀಸರ್​ ಮೂಲಕ ಹೈಪ್​ ಹೆಚ್ಚಿಸಿಕೊಂಡಿರುವ ಇಂಥ ಸಿನಿಮಾವನ್ನು ಒಪ್ಪಿಕೊಳ್ಳುವ ಮೂಲಕ ಅವರು ಹೀರೋಯಿನ್​ ಆಗಿ ಸ್ಯಾಂಡಲ್​ವುಡ್​ನಲ್ಲಿ ಹೊಸ ಅಧ್ಯಾಯ ಆರಂಭಿಸಿದ್ದಾರೆ.

ಸಂಪದಾ ಅವರು ಈ ಮೊದಲು ನಿಖಿಲ್ ಕುಮಾರ್ ನಟನೆಯ ‘ರೈಡರ್’ ಸಿನಿಮಾದಲ್ಲಿ ಒಂದು ಪಾತ್ರ ಮಾಡಿದ್ದರು. ಈಗ ‘ಕರಾವಳಿ’ ಸಿನಿಮಾದ ಕಥೆಯನ್ನು ಕೇಳಿ ಇಂಪ್ರೆಸ್ ಆಗಿರುವ ಅವರು ಪ್ರಜ್ವಲ್ ದೇವರಾಜ್​ ಜೊತೆ ತೆರೆ ಹಂಚಿಕೊಳ್ಳಲು ಒಪ್ಪಿಕೊಂಡಿದ್ದಾರೆ. ಇಂದು (ಫೆಬ್ರವರಿ 14) ‘ವ್ಯಾಲೆಂಟೈನ್ಸ್​ ಡೇ’ ಪ್ರಯುಕ್ತ ವಿಶೇಷವಾಗಿ ‘ಕರಾವಳಿ’ ಸಿನಿಮಾ ತಂಡದವರು ನಾಯಕಿ ಯಾರೆಂದನ್ನು ರಿವೀಲ್ ಮಾಡಿದ್ದಾರೆ.

ಇದನ್ನೂ ಓದಿ: ಬೃಹತ್ ಸೆಟ್​ನಲ್ಲಿ ‘ಚೀತಾ’ ಚಿತ್ರೀಕರಣ, ಮಾಸ್ ಪಾತ್ರದಲ್ಲಿ ಪ್ರಜ್ವಲ್

ನಾಯಕಿ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಅನಾವರಣ ಆಗಿರುವ ಪೋಸ್ಟರ್​ನಲ್ಲಿ ನಟಿ ಸಂಪದಾ ಅವರು ಕೆಂಪು ಸೀರೆ ಧರಿಸಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಶೀರ್ಷಿಕೆಯೇ ಸೂಚಿಸುವ ಹಾಗೆ ಪಕ್ಕಾ ಕರಾವಳಿ ಭಾಗದ ಕಥೆಯಿರುವ ಸಿನಿಮಾ ಇದು. ಕರಾವಳಿಯಲ್ಲೇ ಸಂಪೂರ್ಣ ಕಥೆ ಸಾಗಲಿದೆ. ಸಂಪದಾ ಕೂಡ ಕರಾವಳಿಯ ಹುಡುಗಿಯ ಪಾತ್ರದಲ್ಲಿ ನಟಿಸಲಿದ್ದಾರೆ.

ಸಚಿನ್ ಬಸ್ರೂರು ಅವರು ‘ಕರಾವಳಿ’ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಅಭಿಮನ್ಯೂ ಸದಾನಂದನ್ ಅವರು ಛಾಯಾಗ್ರಹಣ ಮಾಡಲಿದ್ದಾರೆ. ಇದು ಪ್ರಜ್ವಲ್ ದೇವರಾಜ್​ ಅಭಿನಯದ 40ನೇ ಸಿನಿಮಾ ಎಂಬುದು ಕೂಡ ವಿಶೇಷ. ಈವರೆಗೂ ಕಾಣಿಸಿಕೊಳ್ಳದಂತಹ ಪಾತ್ರಕ್ಕೆ ಪ್ರಜ್ವಲ್​ ಅವರು ಈ ಸಿನಿಮಾದಲ್ಲಿ ಬಣ್ಣ ಹಚ್ಚಲಿದ್ದಾರೆ. ಮಂಗಳೂರು ಸುತ್ತಮುತ್ತ ಶೂಟಿಂಗ್​​ ನಡೆಯಲಿದೆ. ‘ಕರಾವಳಿ’ ಸಿನಿಮಾಗೆ ಶೀಘ್ರದಲ್ಲೇ ಚಿತ್ರೀಕರಣ ಆರಂಭ ಆಗಲಿದೆ. ಮಂಗಳೂರು ಸುತ್ತಮುತ್ತ ಶೂಟಿಂಗ್​​ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ