AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವೇ ಜಗಳವಾಡಿಕೊಂಡ್ರೆ CCBಗೇ ಲಾಭವಾಗುತ್ತೆ, ಒಂದಾಗೋಣ ಬಾ ಅಂದ್ರು ಅವರಿಬ್ಬರೂ!

[lazy-load-videos-and-sticky-control id=”TQmdz-iQ_I”] ಬೆಂಗಳೂರು: ಸ್ಯಾಂಡಲ್‌ವುಡ್ ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ಬಂಧಿಯಾಗಿರುವ ನಟಿ ರಾಗಿಣಿ ಹಾಗೂ ಸಂಜನಾ ಇಬ್ಬರೂ ಮತ್ತೆ ಒಂದಾಗಿದ್ದಾರೆ. ಅನೇಕ ಕಾರಣಗಳಿಂದ ಇವರಿಬ್ಬರಲ್ಲಿ ಪುರಾತನ ಭಿನ್ನಮತ ಇತ್ತು. ಆದ್ರೆ ಈ ಪ್ರಕರಣದಿಂದಾಗಿ ಇವರಿಬ್ಬರಲ್ಲಿ ಹೊಂದಾಣಿಕೆ ನಡೆದಿದೆ. ಕೆಲವು ವರ್ಷಗಳಿಂದ ಒಬ್ಬರ ಮುಖ ಒಬ್ಬರು ನೋಡದಂತೆ ಹಾವು ಮುಂಗಸಿಯಂತೆ ಇದ್ದ ನಟಿಯರು ಈಗ ಗೆಳತಿಯರಾಗಿದ್ದಾರೆ. ಮೊದಲ ದಿನ ಮುಖಾಮುಖಿಯಾದಾಗ ಒಬ್ಬರಿಗೊಬ್ಬರು ಟಾಂಗ್ ಕೊಟ್ಟಿದ್ದರು. ಮಹಿಳಾ ಸಾಂತ್ವನ ಕೇಂದ್ರದಲ್ಲಿ ಗಲಾಟೆ ಮಾಡಿಕೊಂಡಿದ್ದರು. ಮಹಿಳಾ ಪೊಲೀಸರೇ ಮಧ್ಯಪ್ರವೇಶಿಸಿ ಎರಡು […]

ನಾವೇ ಜಗಳವಾಡಿಕೊಂಡ್ರೆ CCBಗೇ ಲಾಭವಾಗುತ್ತೆ, ಒಂದಾಗೋಣ ಬಾ ಅಂದ್ರು ಅವರಿಬ್ಬರೂ!
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Sep 11, 2020 | 7:06 PM

Share

[lazy-load-videos-and-sticky-control id=”TQmdz-iQ_I”]

ಬೆಂಗಳೂರು: ಸ್ಯಾಂಡಲ್‌ವುಡ್ ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ಬಂಧಿಯಾಗಿರುವ ನಟಿ ರಾಗಿಣಿ ಹಾಗೂ ಸಂಜನಾ ಇಬ್ಬರೂ ಮತ್ತೆ ಒಂದಾಗಿದ್ದಾರೆ. ಅನೇಕ ಕಾರಣಗಳಿಂದ ಇವರಿಬ್ಬರಲ್ಲಿ ಪುರಾತನ ಭಿನ್ನಮತ ಇತ್ತು. ಆದ್ರೆ ಈ ಪ್ರಕರಣದಿಂದಾಗಿ ಇವರಿಬ್ಬರಲ್ಲಿ ಹೊಂದಾಣಿಕೆ ನಡೆದಿದೆ.

ಕೆಲವು ವರ್ಷಗಳಿಂದ ಒಬ್ಬರ ಮುಖ ಒಬ್ಬರು ನೋಡದಂತೆ ಹಾವು ಮುಂಗಸಿಯಂತೆ ಇದ್ದ ನಟಿಯರು ಈಗ ಗೆಳತಿಯರಾಗಿದ್ದಾರೆ. ಮೊದಲ ದಿನ ಮುಖಾಮುಖಿಯಾದಾಗ ಒಬ್ಬರಿಗೊಬ್ಬರು ಟಾಂಗ್ ಕೊಟ್ಟಿದ್ದರು. ಮಹಿಳಾ ಸಾಂತ್ವನ ಕೇಂದ್ರದಲ್ಲಿ ಗಲಾಟೆ ಮಾಡಿಕೊಂಡಿದ್ದರು. ಮಹಿಳಾ ಪೊಲೀಸರೇ ಮಧ್ಯಪ್ರವೇಶಿಸಿ ಎರಡು ಮೂರು ಬಾರಿ ಸಮಾಧಾನ ಪಡಿಸಿದ್ರು. ಈಗ ಇವರಿಬ್ಬರೂ ಒಂದು ನಿರ್ಣಯ ತೆಗೆದುಕೊಂಡಿದ್ದಾರೆ.

ನಾವೇ ಜಗಳವಾಡಿಕೊಂಡ್ರೆ CCB ಪೊಲೀಸರಿಗೆ ಲಾಭವಾಗುತ್ತೆ. ಮತ್ತಷ್ಟು ದಂಧೆಯ ವಿಚಾರಗಳು ಬಯಲಿಗೆ ಬರುತ್ತೆ. ಹೀಗಾಗಿ ನಾವು ಈ ವಿಚಾರದಲ್ಲಿ ಒಂದಾದ್ರೆ ಸೇಫ್ ಆಗುತ್ತೇವೆ. ಯಾವುದೇ ವಿಚಾರಗಳು ಬಯಲಿಗೆ ಬರುವುದಿಲ್ಲ ಎಂದು ಹಳೆ ವಿಚಾರಗಳನ್ನ ಮರೆತು ಗಂಟೆಗಟ್ಟಲೆ ಮಾತುಕತೆ ನಡೆಸಿದ್ದಾರೆ. ಇದಕ್ಕೆ ಪೊಷಕರು, ವಕೀಲರು ಹಾಗೂ ಹಿತೈಷಿಗಳು ಸಹ ತಿಳಿಮಾತು ಹೇಳಿದ್ದಾರೆ ಎಂದು ತಿಳಿದುಬಂದಿದೆ.

Published On - 10:56 am, Fri, 11 September 20

ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್