AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sapthami Gowda: ‘ಯುವ’ ಸಿನಿಮಾಕ್ಕೆ ಸಪ್ತಮಿ ಗೌಡ ಆಯ್ಕೆ ಆಗಿದ್ದು ಹೇಗೆ? ಕೆಲವೇ ನಿಮಿಷಗಳಲ್ಲಿ ನಿರ್ಧಾರ

ಯುವ ರಾಜ್​ಕುಮಾರ್ ನಟನೆಯ ಮೊದಲ ಸಿನಿಮಾ ಯುವದಲ್ಲಿ ನಾಯಕಿಯಾಗಿರುವ ಸಪ್ತಮಿ ಗೌಡ, ಸಿನಿಮಾದಲ್ಲಿ ನಟಿಸುವ ಅವಕಾಶ ಲಭಿಸಿದ ಬಗ್ಗೆ ಮಾತನಾಡಿದ್ದಾರೆ.

Sapthami Gowda: 'ಯುವ' ಸಿನಿಮಾಕ್ಕೆ ಸಪ್ತಮಿ ಗೌಡ ಆಯ್ಕೆ ಆಗಿದ್ದು ಹೇಗೆ? ಕೆಲವೇ ನಿಮಿಷಗಳಲ್ಲಿ ನಿರ್ಧಾರ
ಸಪ್ತಮಿ ಗೌಡ-ಯುವ
ಮಂಜುನಾಥ ಸಿ.
|

Updated on: Mar 11, 2023 | 10:29 PM

Share

ಕಾಂತಾರ‘ (Kantara) ಸಿನಿಮಾ ಮೂಲಕ ದೊಡ್ಡ ಹಿಟ್ ಸಿನಿಮಾ ಖಾತೆಗೆ ಹಾಕಿಕೊಂಡ ನಟಿ ಸಪ್ತಮಿ ಗೌಡ (Sapthami Gowda) ಅವಕಾಶಗಳ ಮೇಲೆ ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ. ಕಾಂತಾರದ ಬಳಿಕ ಬಾಲಿವುಡ್ ಸಿನಿಮಾದಲ್ಲಿ ನಟಿಸಿ ಬಂದ ಸಪ್ತಮಿಗೆ ಕಾಳಿ ಸಿನಿಮಾದಲ್ಲಿ ಪಾತ್ರ ಸಿಕ್ಕಿತು ಬಳಿಕ ಇದೀಗ ಯುವ ರಾಜ್​ಕುಮಾರ್ (Yuva Rajkumar) ನಟನೆಯ ಚೊಚ್ಚಿಲ ಸಿನಿಮಾ ಯುವ ನಲ್ಲಿ ಸಪ್ತಮಿಯೇ ನಾಯಕಿ? ಈ ಸಿನಿಮಾಕ್ಕೆ ಸಪ್ತಮಿ ಆಯ್ಕೆ ಆಗಿದ್ದು ಹೇಗೆ ಎಂಬುದನ್ನು ಅವರೇ ಹೇಳಿಕೊಂಡಿದ್ದಾರೆ.

ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸಪ್ತಮಿ ಗೌಡ ಟಿವಿ9 ಜೊತೆ ಮಾತನಾಡಿದ್ದು, ಯುವ ರಾಜ್​ಕುಮಾರ್ ಅವರ ಮೊದಲ ಸಿನಿಮಾದಲ್ಲಿ ನಾಯಕಿಯಾಗಲು ಅವಕಾಶ ಸಿಕ್ಕಿದ್ದು ಬಹಳ ಖುಷಿಯಿದೆ. ನಾನು ಅಪ್ಪು ಅವರ ಅಭಿಮಾನಿ, ಸಿನಿಮಾ ರಂಗಕ್ಕೆ ಬಂದಾಗ ಅವರನ್ನೊಮ್ಮೆ ಭೇಟಿಯಾಗುವ ಆಸೆಯಿತ್ತು ಆದರೆ ಆಗಿರಲಿಲ್ಲ. ಆದರೆ ಈಗ ಅವರ ಕುಟುಂಬದವರಿಗೆ ಮುಖ್ಯವಾದ ಸಿನಿಮಾದಲ್ಲಿ ನಾನು ನಟಿಸುತ್ತಿರುವುದು ಖುಷಿ ಇದೆ ಎಂದಿದ್ದಾರೆ.

ಸಿನಿಮಾದಲ್ಲಿನ ತಮ್ಮ ಪಾತ್ರದ ಬಗ್ಗೆ ಮಾತನಾಡಿ, ಈ ವರೆಗೆ ನಾನು ಕಾಣಿಸಿಕೊಳ್ಳದ ರೀತಿಯ ಪಾತ್ರದಲ್ಲಿ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದೇನೆ. ಲೀಲಾ ಪಾತ್ರಕ್ಕೂ ಈ ಪಾತ್ರಕ್ಕೂ ಬಹಳ ವ್ಯತ್ಯಾಸವಿರಲಿದೆ ಎಂದ ಸಪ್ತಮಿ, ಈ ಸಿನಿಮಾದ ಪಾತ್ರ ಸಿಕ್ಕಿದ್ದು ಒಂದು ರೀತಿ ಅದೃಷ್ಟ. ಎಲ್ಲ ಕೇವಲ 30-40 ನಿಮಿಷದಲ್ಲಿ ಆಗಿಬಿಟ್ಟಿತು. ನನ್ನನ್ನು ಕರೆದು ಲುಕ್ ಟೆಸ್ಟ್ ಮಾಡಿದರು ಕೆಲವು ಫೋಟೊಗಳನ್ನು ತೆಗೆದು ಪಾತ್ರ ಡಿಸ್ಕಸ್ ಮಾಡಿದರು ಅದರ ಮಾರನೇಯ ದಿನವೇ ನಾಯಕಿ ನಾನೇ ಎಂದು ಘೋಷಣೆ ಮಾಡಿಬಿಟ್ಟರು. ಮತ್ತೊಮ್ಮೆ ಹೊಂಬಾಳೆ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿರುವುದು ನನ್ನ ಅದೃಷ್ಟ ಎಂದಿದ್ದಾರೆ ಸಪ್ತಮಿ.

ಅಪ್ಪು ಬಗ್ಗೆ ಮಾತು ಮುಂದುವರೆಸಿ, ನನ್ನ ಕುಟುಂಬದಲ್ಲಿ ನನ್ನ ತಾಯಿ ಅಪ್ಪು ಅವರ ಬಹಳ ದೊಡ್ಡ ಅಭಿಮಾನಿ, ಅದನ್ನು ಅವರು ಬಹಿರಂಗವಾಗಿ ಹೇಳಿಕೊಳ್ಳುವುದಿಲ್ಲ ಆದರೂ ಅಪ್ಪು ಅಗಲಿಕೆ ಅವರನ್ನು ಇಂದಿಗೂ ಕಾಡುತ್ತಿದೆ. ಅಪ್ಪು ಇಲ್ಲ ಎನ್ನುವುದನ್ನು ಅವರಿಗೆ ಅರಗಿಸಿಕೊಳ್ಳಲು ಇಂದಿಗೂ ಸಾಧ್ಯವಾಗಿಲ್ಲ ಎಂದಿದ್ದಾರೆ. ದೊಡ್ಮನೆ ಕುಟುಂಬದವರ ಸಿನಿಮಾದಲ್ಲಿ ನಟಿಸಲು ಅವಕಾಶ ಸಿಕ್ಕಿರುವುದು ತಮ್ಮ ಪೋಷಕರಿಗೆ ಬಹಳ ಖುಷಿ ತಂದಿದೆ ಎಂದೂ ಸಹ ಸಪ್ತಮಿ ಹೇಳಿಕೊಂಡಿದ್ದಾರೆ.

ತಮ್ಮ ಮೊದಲ ಬಾಲಿವುಡ್ ಸಿನಿಮಾ ಬಗ್ಗೆಯೂ ಮಾತನಾಡಿರುವ ಸಪ್ತಮಿ ಗೌಡ, ಆ ಸಿನಿಮಾದ ಶೂಟಿಂಗ್ ಮುಗಿಸಿ ಬಂದಿದ್ದೇನೆ. ಬೇಗನೆ ಶೂಟಿಂಗ್ ಮುಗಿಯಿತು ನನ್ನ ಪಾತ್ರದ ಕೆಲಸವನ್ನು ನಾನು ಮುಗಿಸಿದ್ದೇನೆ. ಆ ಸಿನಿಮಾ ಆಗಸ್ಟ್ 15 ಕ್ಕೆ ತೆರೆಗೆ ಬರಲಿದೆ ಎಂದಿದ್ದಾರೆ. ಸಪ್ತಮಿ, ವ್ಯಾಕ್ಸಿನ್ ವಾರ್ ಹೆಸರಿನ ಹಿಂದಿ ಸಿನಿಮಾದಲ್ಲಿ ನಟಿಸಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ನಿರ್ದೇಶನ ಮಾಡಿದ್ದ ವಿವೇಕ್ ಅಗ್ನಿಹೋತ್ರಿ ಈ ಸಿನಿಮಾವನ್ನು ನಿರ್ದೇಶಿಸಿದ್ದಾರೆ.

ಸಪ್ತಮಿ ಗೌಡ ಪ್ರಸ್ತುತ ಕಾಂತಾರ 2, ಅಭಿಷೇಕ್ ಅಂಬರೀಶ್ ನಟನೆಯ ಕಾಳಿ ಹಾಗೂ ಯುವ ರಾಜ್​ಕುಮಾರ್ ನಟನೆಯ ಯುವ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಡಾಲಿ ನಟನೆಯ ಉತ್ತರಕಾಂಡ ಸಿನಿಮಾದಲ್ಲಿಯೂ ಸಪ್ತಮಿ ಇರಲಿದ್ದಾರೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ