AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Savi Madappa: ನಟಿ ಸವಿ ಮಾದಪ್ಪ ಸಾವಿನ ಸತ್ಯ ಬಯಲು; ಪೊಲೀಸರ ಕೈ ಸೇರಿದ ಮರಣೋತ್ತರ ಪರೀಕ್ಷೆ ವರದಿ

ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ನಟಿ ಸವಿ ಮಾದಪ್ಪ ಅವರು ಡೆತ್​ ನೋಟ್​ ಬರೆದಿಟ್ಟಿದ್ದರು. ಆ ಪತ್ರದಲ್ಲಿ ಗೆಳೆಯ ವಿವೇಕ್​ಗೆ ಅವರು ಕ್ಷಮೆ ಕೇಳಿದ್ದರು.

Savi Madappa: ನಟಿ ಸವಿ ಮಾದಪ್ಪ ಸಾವಿನ ಸತ್ಯ ಬಯಲು; ಪೊಲೀಸರ ಕೈ ಸೇರಿದ ಮರಣೋತ್ತರ ಪರೀಕ್ಷೆ ವರದಿ
ಸವಿ ಮಾದಪ್ಪ
Follow us
TV9 Web
| Updated By: ಮದನ್​ ಕುಮಾರ್​

Updated on:Oct 18, 2021 | 9:47 AM

ಕನ್ನಡ ಚಿತ್ರರಂಗದಲ್ಲಿ ಆಗತಾನೇ ಗುರುತಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ನಟಿ ಸವಿ ಮಾದಪ್ಪ ಅವರು ಸೆ.30ರಂದು ಅನುಮಾನಾಸ್ಪದವಾಗಿ ಸಾವನ್ನಪಿದರು. ದೊಡ್ಡಬೆಲೆ ಗ್ರಾಮದ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆ ಆಗಿತ್ತು. ಸವಿ ಮಾದಪ್ಪ ನಿಧನದ ನಂತರ ಅವರ ಪೋಷಕರು ಕೆಲವು ಅನುಮಾನ ವ್ಯಕ್ತಪಡಿಸಿದ್ದರು. ಗೆಳೆಯ ವಿವೇಕ್​ ಸೇರಿ ಅನೇಕರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಸವಿ ಮಾದಪ್ಪ ಅವರದ್ದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಶಂಕೆ ಮೂಡಿತ್ತು. ಅದಕ್ಕೀಗ ಮರಣೋತ್ತರ ಪರೀಕ್ಷೆಯಲ್ಲಿ ಉತ್ತರ ಸಿಕ್ಕಿದೆ.

ನಟಿಯ ಸಾವಿನ ಪ್ರಕರಣವನ್ನು ಕುಂಬಳಗೋಡು ಪೊಲೀಸರು ತನಿಖೆ ನಡೆಸಿದ್ದಾರೆ. ಸವಿ ಮಾದಪ್ಪ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ಈಗ ಅದರ ವರದಿ ಪೊಲೀಸರ ಕೈ ಸೇರಿದೆ. ಅದರ ಪ್ರಕಾರ, ಸವಿ ಮಾದಪ್ಪ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. ಫ್ಯಾನ್​ಗೆ ಸ್ವತಃ ನೇಣು ಬಿಗಿದುಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡರು ಎಂದು ಮರಣೋತ್ತರ ಪರೀಕ್ಷೆಯ ವರದಿ ಹೇಳುತ್ತಿದೆ.

ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಸವಿ ಮಾದಪ್ಪ ಅವರು ಡೆತ್​ ನೋಟ್​ ಬರೆದಿಟ್ಟಿದ್ದರು. ಆ ಪತ್ರದಲ್ಲಿ ಗೆಳೆಯ ವಿವೇಕ್​ಗೆ ಅವರು ಕ್ಷಮೆ ಕೇಳಿದ್ದರು. ಜೀವನದಲ್ಲಿ ಅಂದುಕೊಂಡಿದ್ದು ಆಗಲಿಲ್ಲ. ಕೆಲಸದ ವಿಚಾರದಲ್ಲಿ ಯಶಸ್ಸು ಸಿಗಲಿಲ್ಲ. ಹಣಕಾಸಿನ ಸಮಸ್ಯೆಯಿಂದ ಸಾಲ ಮಾಡಿಕೊಳ್ಳುವಂತಾಯಿತು. ಹೆಣ್ಣುಮಕ್ಕಳಿಗೆ ಆಗುವು ದೈಹಿಕ ಸಮಸ್ಯೆಯಿಂದಲೂ ಸಾಕಷ್ಟು ನೋವು ಅನುಭವಿಸಬೇಕಾಯಿತು. ಈ ಎಲ್ಲ ಕಾರಣದಿಂದ ಡಿಪ್ರೆಷನ್​ ಮೂಡಿತು. ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್​ ನೋಟ್​ನಲ್ಲಿ ಸವಿ ಮಾದಪ್ಪ ಬರೆದಿದ್ದರು. ತಮ್ಮ ಎಲ್ಲ ಸಮಸ್ಯೆಗಳನ್ನು 5 ಪುಟಗಳ ಡೆತ್ ​ನೋಟ್​ನಲ್ಲಿ ಅವರು ವಿವರಿಸಿದ್ದರು.

ಸಾಯುವುದಕ್ಕೂ ಒಂದು ದಿನ ಮುಂಚೆ ಇನ್​ಸ್ಟಾಗ್ರಾಮ್​ನಲ್ಲಿ ಅವರು ಕೆಲವೊಂದು ಪೋಸ್ಟ್​ಗಳನ್ನು ಮಾಡಿದ್ದರು. ‘ಯಾರನ್ನೂ ಕೀಳಾಗಿ ಕಾಣಬೇಡಿ. ನಗುತ್ತಾ ಇರುವ ವ್ಯಕ್ತಿಗಳ ಹಿಂದೆಯೂ ಸಾಕಷ್ಟು ನೋವಿರುತ್ತದೆ, ಆ ಬಗ್ಗೆ ಯಾರಿಗೂ ಗೊತ್ತಿರುವುದಿಲ್ಲ’ ಎಂದು ಸವಿ ಬರೆದುಕೊಂಡಿದ್ದರು. ಮತ್ತೊಂದು ಪೋಸ್ಟ್​ನಲ್ಲಿ ತಮ್ಮದೇ ಫೋಟೋ ಹಾಕಿ ‘happiness, Sadness’ ಹ್ಯಾಶ್​ ಟ್ಯಾಗ್​ ಬಳಸಿದ್ದರು. ಇದರ ಜತೆಗೆ ಗೆಳೆಯರು ಹಾಗೂ ಸಹೋದರರ ಫೋಟೋ ಹಾಕಿ ಅವರಿಗೆ ಧನ್ಯವಾದ ಹೇಳಿದ್ದರು.

ಇದನ್ನೂ ಓದಿ:

ಅಂತಿಮ‌ಸಂಸ್ಕಾರದ ವೇಳೆ ಸವಿ ಮಾದಪ್ಪಗೆ ಮದುವೆ ಶಾಸ್ತ್ರ

ನಟಿ ಸವಿ ಮಾದಪ್ಪ ಆತ್ಮಹತ್ಯೆ ಪ್ರಕರಣ: ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ಏನು?

Published On - 8:32 am, Mon, 18 October 21

ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ‘10000 ಗವಾಸ್ಕರ್’ ಬೋರ್ಡ್ ರೂಂ ಉದ್ಘಾಟನೆ
ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ‘10000 ಗವಾಸ್ಕರ್’ ಬೋರ್ಡ್ ರೂಂ ಉದ್ಘಾಟನೆ
ತಿರಂಗ ಯಾತ್ರೆಯಲ್ಲಿ ಅಸಂಖ್ಯಾತ ಬಿಜೆಪಿ ಕಾರ್ಯಕರ್ತರು, ಮತ್ತು ಶಾಲಾಮಕ್ಕಳು
ತಿರಂಗ ಯಾತ್ರೆಯಲ್ಲಿ ಅಸಂಖ್ಯಾತ ಬಿಜೆಪಿ ಕಾರ್ಯಕರ್ತರು, ಮತ್ತು ಶಾಲಾಮಕ್ಕಳು
ಭುಜ್​ನಿಂದ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ರಾಜನಾಥ್​ ಸಿಂಗ್
ಭುಜ್​ನಿಂದ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ರಾಜನಾಥ್​ ಸಿಂಗ್
ಇಂಡಿಯಾ ಮೈತ್ರಿಕೂಟ ದುರ್ಬಲವಾಗಿದೆ: ಪಿ ಚಿದಂಬರಂ ಕಳವಳ
ಇಂಡಿಯಾ ಮೈತ್ರಿಕೂಟ ದುರ್ಬಲವಾಗಿದೆ: ಪಿ ಚಿದಂಬರಂ ಕಳವಳ
ಕಲಬುರಗಿಯಿಂದ ಕೇದಾರನಾಥಕ್ಕೆ 70 ರ ವ್ಯಕ್ತಿಯ ಪಾದಯಾತ್ರೆ: ವಿಡಿಯೋ ವೈರಲ್
ಕಲಬುರಗಿಯಿಂದ ಕೇದಾರನಾಥಕ್ಕೆ 70 ರ ವ್ಯಕ್ತಿಯ ಪಾದಯಾತ್ರೆ: ವಿಡಿಯೋ ವೈರಲ್
ದಕ್ಷಿಣ ಕನ್ನಡ ಜಿಲ್ಲಿಗೆ ಹೆಚ್ಚು ಸಮಯ ನೀಡಲಾಗುತ್ತಿಲ್ಲ: ದಿನೇಶ್ ಗುಂಡೂರಾವ್
ದಕ್ಷಿಣ ಕನ್ನಡ ಜಿಲ್ಲಿಗೆ ಹೆಚ್ಚು ಸಮಯ ನೀಡಲಾಗುತ್ತಿಲ್ಲ: ದಿನೇಶ್ ಗುಂಡೂರಾವ್
ಸರ್ವಪಕ್ಷ ಸಭೆ ಕರೆಯಲಿದ್ದೇನೆ, ಪಾಲಿಕೆ ಎಲ್ಲರಿಗೂ ಸೇರಿದ್ದು: ಶಿವಕುಮಾರ್
ಸರ್ವಪಕ್ಷ ಸಭೆ ಕರೆಯಲಿದ್ದೇನೆ, ಪಾಲಿಕೆ ಎಲ್ಲರಿಗೂ ಸೇರಿದ್ದು: ಶಿವಕುಮಾರ್
ತಾನು ಕೂಡಿಟ್ಟ ಹಣವನ್ನು ಭಾರತೀಯ ಸೇನೆಗೆ ದಾನ ಮಾಡಿದ ಬಾಲಕ
ತಾನು ಕೂಡಿಟ್ಟ ಹಣವನ್ನು ಭಾರತೀಯ ಸೇನೆಗೆ ದಾನ ಮಾಡಿದ ಬಾಲಕ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ