AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಹಿರಿಯ ನಟಿಗೆ ಕೊರೊನಾ ಒಮಿಕ್ರಾನ್​; ರೂಪಾಂತರಿಯಿಂದ ಆದ ಸಮಸ್ಯೆಗಳನ್ನು ವಿವರಿಸಿದ ಹೀರೋಯಿನ್​

. ಒಮಿಕ್ರಾನ್​ನಿಂದ ಆಗುವ ಸಮಸ್ಯೆಗಳು ಏನು? ಈ ರೂಪಾಂತರಿಯ ಲಕ್ಷಣ ಏನು ಎಂಬ ಬಗ್ಗೆ ಅಷ್ಟಾಗಿ ಎಲ್ಲರಿಗೂ ಗೊತ್ತಿಲ್ಲ. ಈ ಕಾರಣಕ್ಕೆ ಶೋಭನಾ ಅವರು ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಖ್ಯಾತ ಹಿರಿಯ ನಟಿಗೆ ಕೊರೊನಾ ಒಮಿಕ್ರಾನ್​; ರೂಪಾಂತರಿಯಿಂದ ಆದ ಸಮಸ್ಯೆಗಳನ್ನು ವಿವರಿಸಿದ ಹೀರೋಯಿನ್​
TV9 Web
| Edited By: |

Updated on: Jan 10, 2022 | 2:51 PM

Share

ಕೊರೊನಾ ಪ್ರಕರಣ (Corona Cases) ಹೆಚ್ಚುತ್ತಿದೆ. ಭಾರತದಲ್ಲಿ ಇಂದು (ಜನವರಿ 10) ಒಂದೇ ದಿನ ಬರೋಬ್ಬರಿ 1.72 ಲಕ್ಷ ಕೊವಿಡ್​ ಕೇಸ್​ ಪತ್ತೆ ಆಗಿದೆ. ಕಳೆದ ವರ್ಷ ಮೇ ಸಂದರ್ಭದಲ್ಲಿ ಇಷ್ಟು ಪ್ರಕರಣ ದಾಖಲಾಗಿತ್ತು. ಹಳೆಯ ದಿನಗಳು ಈಗ ಮರುಕಳಿಸುತ್ತಿವೆ. ಇದರ ಜತೆಗೆ ಕೊರೊನಾ ರೂಪಾಂತರಿ ಒಮಿಕ್ರಾನ್​ (Omicron variant) ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿದೆ. ಈ ವೈರಸ್​ ನಿಯಂತ್ರಣಕ್ಕೆ ಸರ್ಕಾರ ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೆ, ಅವೆಲ್ಲವೂ ಹೊಳೆಯಲ್ಲಿ ಹೋಮ ಮಾಡಿದಂತಾಗುತ್ತಿದೆ. ಕೆಲವರು ಸೂಕ್ತ ಮುಂಜಾಗೃತ ಕ್ರಮ ಕೈಗೊಂಡರೂ ಕೊವಿಡ್​ ಅಂಟುತ್ತಿದೆ. ಕನ್ನಡ ಸೇರಿ ದಕ್ಷಿಣದ ಹಲವು ಭಾಷೆಗಳಲ್ಲಿ ಬಣ್ಣ ಹಚ್ಚಿದ ನಟಿಗೆ ಒಮಿಕ್ರಾನ್​ ಅಂಟಿದೆ. ಅವರು ಈ ಬಗ್ಗೆ ಬರೆದುಕೊಂಡಿದ್ದಾರೆ.

ಹಿರಿಯ ನಟಿ ಶೋಭನಾ ಅವರಿಗೆ ಕೊವಿಡ್​ ರೂಪಾಂತರಿ ಒಮಿಕ್ರಾನ್​ ಅಂಟಿದೆ. ಒಮಿಕ್ರಾನ್​ನಿಂದ ಆಗುವ ಸಮಸ್ಯೆಗಳು ಏನು? ಈ ರೂಪಾಂತರಿಯ ಲಕ್ಷಣ ಏನು ಎಂಬ ಬಗ್ಗೆ ಅಷ್ಟಾಗಿ ಎಲ್ಲರಿಗೂ ಗೊತ್ತಿಲ್ಲ. ಈ ಕಾರಣಕ್ಕೆ ಶೋಭನಾ ಅವರು ತಮ್ಮ ಅನುಭವ ಹಂಚಿಕೊಂಡಿದ್ದಾರೆ.

‘ನಾನು ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೂ ಓಮಿಕ್ರಾನ್‌ಗೆ ತುತ್ತಾಗಿದ್ದೇನೆ. ಕೀಲುಗಳಲ್ಲಿ ನೋವಿದೆ. ಶೀತ ಉಂಟಾಗಿದೆ. ಗಂಟಲಿನಲ್ಲಿ ತುರಿಕೆ ಇದೆ. ಗಂಟಲು ಸ್ವಲ್ಪ ನೋಯುತ್ತಿದೆ. ಇದು ಮೊದಲ ದಿನದ ಲಕ್ಷಣಗಳು. ಪ್ರತಿದಿನ ನನ್ನ ರೋಗಲಕ್ಷಣಗಳು ಬಹಳವಾಗಿ ಕಡಿಮೆಯಾಗುತ್ತಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

ಲಸಿಕೆ ಪಡೆದವರಿಗೆ ಕೊರೊನಾ ಹಾನಿ ಮಾಡುವುದು ಕಡಿಮೆ ಎಂದು ತಜ್ಞರು ಹೇಳಿದ್ದಾರೆ. ಹೀಗಾಗಿ, ಅನೇಕ ಸೆಲೆಬ್ರಿಟಿಗಳು ಇದನ್ನು ಒತ್ತಿ ಹೇಳಿದ್ದಾರೆ. ಶೋಭನಾ ಕೂಡ ಇದೇ ಮಾತನ್ನು ಪುನರುಚ್ಚರಿಸಿದ್ದಾರೆ.  ಕೊವಿಡ್​ ಲಸಿಕೆ ಪಡೆದು ಈ ಸಾಂಕ್ರಾಮಿಕದಿಂದ ಪಾರಾಗಿ ಎಂದು ಅವರು ಕೋರಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ, ಭಾರತದಲ್ಲಿ ಇಂದು 1,79,723 ಕೊರೊನಾ ವೈರಸ್ ಪ್ರಕರಣ ದಾಖಲಾಗಿದೆ. ಇದರಲ್ಲಿ 4,033 ಒಮಿಕ್ರಾನ್ ರೂಪಾಂತರಿ ಪ್ರಕರಣಗಳು ಸೇರಿವೆ.  ಈ ಮೂಲಕ ಭಾರತದ ಕೊವಿಡ್​ ಪ್ರಕರಣಗಳ ಸಂಖ್ಯೆ 3,57,07,727 ಆಗಿದೆ.

ಶೋಭನಾ ಮಲಯಾಳಂ ಸಿನಿಮಾದಲ್ಲಿ ಹೆಚ್ಚು ಕಾಣಿಸಿಕೊಂಡಿದ್ದಾರೆ. 1985ರಲ್ಲಿ ತೆರೆಗೆ ಬಂದ ಕನ್ನಡದ ‘ಗಿರಿ ಬಾಲೆ’ ಹಾಗೂ 1990ರ ‘ಶಿವಶಂಕರ’ ಚಿತ್ರದಲ್ಲಿ ಅವರು ನಟಿಸಿದ್ದಾರೆ.

ಇದನ್ನೂ ಓದಿ: Vikram Vedha: ‘ವಿಕ್ರಮ್ ವೇದ’ ಚಿತ್ರದ ಹೃತಿಕ್​ ರೋಷನ್​ ಲುಕ್​ ರಿವೀಲ್​; ಫ್ಯಾನ್ಸ್​ ಫಿದಾ

‘ಪುಷ್ಪ 2’ ಚಿತ್ರಕ್ಕಾಗಿ ಈಗಲೇ ಐಟಂ ಸಾಂಗ್​ ಸಿದ್ಧಪಡಿಸಲು ಮುಂದಾದ ನಿರ್ದೇಶಕ; ಈ ಬಾರಿ ಸಮಂತಾಗಿಲ್ಲ ಚಾನ್ಸ್​

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ