AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಫೋಟೋದಲ್ಲಿರುವ ಸ್ಟಾರ್ ನಟಿ ಯಾರೆಂದು ಗುರುತಿಸುತ್ತೀರಾ? ಈಗ ಇವರು ನಮ್ಮೊಂದಿಗಿಲ್ಲ

ಈ ಫೋಟೋದಲ್ಲಿರುವ ಮುದ್ದಾದ ಪುಟ್ಟ ಹುಡುಗಿ ದೊಡ್ಡವರಾದ ಬಳಿಕ ಜನಪ್ರಿಯ ನಾಯಕಿ ಆದರು. ಬೆಳ್ಳಿತೆರೆಯ ಮೇಲೆ ಮಿಂಚಿದರು.

ಈ ಫೋಟೋದಲ್ಲಿರುವ ಸ್ಟಾರ್ ನಟಿ ಯಾರೆಂದು ಗುರುತಿಸುತ್ತೀರಾ? ಈಗ ಇವರು ನಮ್ಮೊಂದಿಗಿಲ್ಲ
ಖ್ಯಾತ ನಟಿಯ ಬಾಲ್ಯದ ಫೋಟೋ
ರಾಜೇಶ್ ದುಗ್ಗುಮನೆ
|

Updated on: Jul 18, 2023 | 7:08 AM

Share

ಸೋಶಿಯಲ್ ಮೀಡಿಯಾ ವ್ಯಾಪ್ತಿ ಹೆಚ್ಚಿದ ಬಳಿಕ ವಿವಿಧ ರೀತಿಯ ಟ್ರೆಂಡ್​ಗಳು ಆರಂಭ ಆಗಿವೆ. ಅನೇಕ ಸೆಲೆಬ್ರಿಟಿಗಳು ತಮ್ಮ ಬಾಲ್ಯದ ಫೋಟೋ ಹಂಚಿಕೊಳ್ಳುತ್ತಾರೆ. ಕೆಲವೊಮ್ಮೆ ಅಭಿಮಾನಿಗಳೂ ತಮ್ಮ ನೆಚ್ಚಿನ ಸೆಲೆಬ್ರಿಟಿಯ ಫೋಟೋ ಹಂಚಿಕೊಳ್ಳುತ್ತಾರೆ. ಈ ಮೇಲಿನ ಫೋಟೋದಲ್ಲಿರುವ ಮುದ್ದಾದ ಪುಟ್ಟ ಹುಡುಗಿ ದೊಡ್ಡವರಾದ ಬಳಿಕ ಜನಪ್ರಿಯ ನಾಯಕಿ ಆದರು. ಬೆಳ್ಳಿತೆರೆಯ ಮೇಲೆ ಮಿಂಚಿದರು. ದುರಾದೃಷ್ಟವಶಾತ್ ಸಣ್ಣ ವಯಸ್ಸಿಗೆ ಇಹಲೋಕ ತ್ಯಜಿಸಿದರು. ದಕ್ಷಿಣದ ಭಾರತದಲ್ಲಿ ಸ್ಟಾರ್ ನಟಿಯಾಗಿ ಹೊರಹೊಮ್ಮಿದ ಈ ನಟಿ ಬೇರಾರು ಅಲ್ಲ ಸೌಂದರ್ಯಾ (Soundarya). ಇಂದು (ಜುಲೈ 18) ಅವರ ಜನ್ಮದಿನ (Soundarya Birthday). ನಟಿಯನ್ನು ಎಲ್ಲರೂ ಸ್ಮರಿಸಿಕೊಳ್ಳುತ್ತಿದ್ದಾರೆ.

1992ರಲ್ಲಿ ಕನ್ನಡ ಸಿನಿಮಾದಲ್ಲಿ ನಟಿಸುವ ಮೂಲಕ ಸೌಂದರ್ಯಾ ಚಿತ್ರರಂಗಕ್ಕೆ ಕಾಲಿಟ್ಟರು. ಬಳಿಕ ಹಲವು ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆದರು. ಅವರು ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿದರಾದರೂ ತೆಲುಗಿನಿಂದ ಅವರಿಗೆ ಸಾಕಷ್ಟು ಆಫರ್​ಗಳು ಬಂತು. 2004ರ ಆಗಸ್ಟ್​ ತಿಂಗಳಲ್ಲಿ ಅವರ ನಟನೆಯ ‘ಆಪ್ತಮಿತ್ರ’ ಸಿನಿಮಾದ ನಟನೆಗೆ ಎಲ್ಲರೂ ಭೇಷ್ ಎಂದರು. ಬೇಸರದ ಸಂಗತಿ ಎಂದರೆ ಈ ಸಿನಿಮಾ ರಿಲೀಸ್​ಗೂ ಮೊದಲೇ ಅವರು ನಿಧನ ಹೊಂದಿದರು. ‘ಆಪ್ತಮಿತ್ರ’ದ ನಾಗವಲ್ಲಿ ಪಾತ್ರಕ್ಕೂ ಸೌಂದರ್ಯ ಸಾವಿಗೂ ಸಂಬಂಧ ಕಲ್ಪಿಸಲಾಗಿತ್ತು.

ಸೌಂದರ್ಯಾ ಚಿಕ್ಕ ವಯಸ್ಸಿನಲ್ಲೇ ಮೃತಪಟ್ಟರು. ಏಪ್ರಿಲ್ 17, 2004ರಂದು ಬೆಂಗಳೂರಿನಲ್ಲಿ ನಡೆದ ವಿಮಾನ ಅಪಘಾತದಲ್ಲಿ ಅವರು ನಿಧನರಾದರು. ಪಕ್ಷವೊಂದರ ಪರವಾಗಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲು ಸೌಂದರ್ಯಾ ವಿಮಾನ ಏರಿದರು. ವಿಮಾನ ಟೇಕ್​ ಆಫ್ ಆದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೆ ಈಡಾಯಿತು. ಈ ಅವಘಡದಲ್ಲಿ ಸೌಂದರ್ಯಾ ಜೊತೆಗೆ ಅವರ ಸಹೋದರ ಅಮರನಾಥ್​ ಕೂಡ ಮೃತಪಟ್ಟರು.

ಇದನ್ನೂ ಓದಿ: ಚಂದ್ರುಮುಖಿ-2 ಸಿನಿಮಾ ಬಿಡುಗಡೆ ದಿನಾಂಕ ನಿಗದಿ: ಇದು ಆಪ್ತಮಿತ್ರ 2 ರೀಮೇಕಾ?

ಸೌಂದರ್ಯಾ ಜನ್ಮದಿನದ ಅಂಗವಾಗಿ ಅವರ ಬಾಲ್ಯದ ಮತ್ತು ಅಪರೂಪದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಸೌಂದರ್ಯ ಸಿನಿಮಾಗಳನ್ನು ನೆನಪಿಸಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ