AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sreeleela Birthday: ಶ್ರೀಲೀಲಾ ಬರ್ತ್​ಡೇಗೆ ಪೋಸ್ಟರ್​ಗಳ ಸುರಿಮಳೆ; ರಶ್ಮಿಕಾ ಹಿಂದಿಕ್ಕಿದ ನಟಿ

ರಶ್ಮಿಕಾ ಮಂದಣ್ಣ ಅವರು ಟಾಲಿವುಡ್​ನ ಬೇಡಿಕೆಯ ನಟಿ ಆಗಿದ್ದಾರೆ. ಹಲವು ಸಿನಿಮಾ ಒಪ್ಪಿ ಅವರು ನಟಿಸಿದ್ದಾರೆ. ಈಗ ಟಾಲಿವುಡ್​ನಲ್ಲಿ ಶ್ರೀಲೀಲಾ ಬೇಡಿಕೆ ಹೆಚ್ಚುತ್ತಿದೆ.

Sreeleela Birthday: ಶ್ರೀಲೀಲಾ ಬರ್ತ್​ಡೇಗೆ ಪೋಸ್ಟರ್​ಗಳ ಸುರಿಮಳೆ; ರಶ್ಮಿಕಾ ಹಿಂದಿಕ್ಕಿದ ನಟಿ
ಶ್ರೀಲೀಲಾ-ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on:Jun 14, 2023 | 12:52 PM

Share

ಟಾಲಿವುಡ್​ನ ಬೇಡಿಕೆಯ ಹೀರೋಯಿನ್​ಗಳ ಪೈಕಿ ಕನ್ನಡದ ನಟಿ ಶ್ರೀಲೀಲಾ (Sreeleela) ಮುಂಚೂಣಿಯಲ್ಲಿದ್ದಾರೆ. ಇಂದು (ಜೂನ್ 14) ಅವರ ಜನ್ಮದಿನ. ಈ ವಿಶೇಷ ದಿನಂದು ಅವರಿಗೆ ಎಲ್ಲ ಕಡೆಗಳಿಂದ ವಿಶ್ ಬರುತ್ತಿದೆ. ಇಷ್ಟೇ ಅಲ್ಲ, ಅವರ ನಟನೆಯ ಸಿನಿಮಾಗಳ ಪೋಸ್ಟರ್ ರಿಲೀಸ್ ಆಗಿದೆ. ಅವರು ಅಲ್ಲು ಅರ್ಜುನ್ (Allu Arjun) ಚಿತ್ರಕ್ಕೆ  ನಾಯಕಿ ಆಗಿದ್ದಾರೆ ಅನ್ನೋದು ವಿಶೇಷ. ಐದಕ್ಕೂ ಹೆಚ್ಚು ಸಿನಿಮಾ ತಂಡದಿಂದ ನಟಿಗೆ ಬರ್ತ್​ಡೇ ವಿಶ್ ಬಂದಿದೆ. ಈ ಮೂಲಕ ನಟಿ ರಶ್ಮಿಕಾ ಮಂದಣ್ಣ ಅವರನ್ನು ಹಿಂದಿಕ್ಕಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಟಾಲಿವುಡ್​ನ ಬೇಡಿಕೆಯ ನಟಿ ಆಗಿದ್ದಾರೆ. ಹಲವು ಸಿನಿಮಾ ಒಪ್ಪಿ ಅವರು ನಟಿಸಿದ್ದಾರೆ. ಈಗ ಟಾಲಿವುಡ್​ನಲ್ಲಿ ಶ್ರೀಲೀಲಾ ಬೇಡಿಕೆ ಹೆಚ್ಚುತ್ತಿದೆ. ಅಲ್ಲು ಅರ್ಜುನ್ ಜೊತೆ ಅವರು ಸಿನಿಮಾ ಮಾಡುತ್ತಿದ್ದಾರೆ ಅನ್ನೋದು ವಿಶೇಷ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಶ್ರೀಲೀಲಾ ಸಿನಿಮಾ ಲೈನಪ್​ ನೋಡಿ ಫ್ಯಾನ್ಸ್ ಕಣ್ಣರಳಿಸಿದ್ದಾರೆ.

ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾದಲ್ಲಿ ಶ್ರೀಲೀಲಾ ಅಭಿನಯಿಸುತ್ತಿದ್ದಾರೆ. ಈ ಚಿತ್ರಕ್ಕೆ ತ್ರಿವಿಕ್ರಂ ಶ್ರೀನಿವಾಸ್ ನಿರ್ದೇಶನ ಇದೆ. ಈ ಚಿತ್ರದ ಪೋಸ್ಟರ್ ರಿಲೀಸ್ ಆಗಿದೆ. ನಿತಿನ್ 32ನೇ ಚಿತ್ರಕ್ಕೆ ಅವರು ನಾಯಕಿ. ಇದರ ಪೋಸ್ಟರ್​ ಕೂಡ ರಿಲೀಸ್ ಆಗಿದೆ. ‘ಬೋಯಪತಿ ರ್ಯಾಪೋ’ ಸಿನಿಮಾದಲ್ಲೂ ಶ್ರೀಲೀಲಾ ನಟಿಸುತ್ತಿದ್ದು, ಪೋಸ್ಟರ್​ ಬಿಡುಗಡೆ ಆಗಿದೆ.

ಅಲ್ಲು ಅರ್ಜುನ್ ಅವರು ಸ್ಟಾರ್ ಡೈರೆಕ್ಟರ್ ತ್ರಿವಿಕ್ರಂ ಶ್ರೀನಿವಾಸ್​ ಜೊತೆ ಸಿನಿಮಾ ಮಾಡುತ್ತಿದ್ದಾರೆ. ‘ಆಹಾ’ ನಿರ್ಮಾಣದ ಮೊದಲ ಸಿನಿಮಾ ಇದು. ಈ ಚಿತ್ರಕ್ಕೆ ಶ್ರೀಲೀಲಾ ನಾಯಕಿ. ‘ಆಹಾ’ ಕಡೆಯಿಂದ ಒಂದು ಪೋಸ್ಟರ್ ಕೂಡ ಬಿಡುಗಡೆ ಆಗಿದೆ. ಈ ಪೋಸ್ಟರ್​ನಲ್ಲಿ ಅಲ್ಲು ಅರ್ಜುನ್ ಅವರು ಶ್ರೀಲೀಲಾ ಅವರನ್ನು  ತೋಳುಗಳಲ್ಲಿ ಎತ್ತುಕೊಂಡಿದ್ದಾರೆ. ಇವರ ಕಾಂಬಿನೇಷನ್​​ನಲ್ಲಿ ಇದು ಮೊದಲ ಸಿನಿಮಾ.

ಇದನ್ನೂ ಓದಿ: ಗ್ಲಾಮರ್ ಪಾತ್ರಕ್ಕೆ ನೋ ಎಂದ ಶ್ರೀಲೀಲಾ? ಮಹತ್ವದ ನಿರ್ಧಾರ ತೆಗೆದುಕೊಂಡ ನಟಿ

ಶ್ರೀಲೀಲಾ ಕನ್ನಡದ ನಟಿ. ಸದ್ಯ ಅವರ ಕೈಯಲ್ಲಿ ಅಧಿಕೃತವಾಗಿ 7ಕ್ಕೂ ಹೆಚ್ಚು ತೆಲುಗು ಸಿನಿಮಾಗಳಿವೆ. ‘ಜೂನಿಯರ್​’ ಹೆಸರಿನ ಕನ್ನಡ ಸಿನಿಮಾಗೆ ಅವರು ನಾಯಕಿ. ಅವರಿಗೆ ಎಲ್ಲ ಕಡೆಗಳಿಂದ ವಿಶ್ ಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:40 pm, Wed, 14 June 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ