AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಟೆಗಟ್ಟಲೆ ಗೇಟ್ ಮುಂದೆ ಕಾದ್ರೂ ದಾಖಲಿಸಿಕೊಂಡಿಲ್ಲ, ಅಪೋಲೋ ವಿರುದ್ಧ ನಟಿ ಗರಂ

[lazy-load-videos-and-sticky-control id=”2DSmkYpjpY0″] ಬೆಂಗಳೂರು: ಸ್ಯಾಂಡಲ್‍ವುಡ್ ನಟಿಗೂ ಖಾಸಗಿ ಆಸ್ಪತ್ರೆ ವೈದ್ಯರ ಬೇಜವಾಬ್ದಾರಿತನದ ನಡೆ ಆಕ್ರೋಶ ಬರುವಂತೆ ಮಾಡಿದೆ. ಅಪೋಲೋ ಆಸ್ಪತ್ರೆ ವಿರುದ್ಧ ನಟಿ ಸುಧಾರಾಣಿ ಗರಂ ಆಗಿದ್ದಾರೆ. ತಡ ರಾತ್ರಿ 10 ಗಂಟೆ ಯಿಂದ 11 ಗಂಟೆವರೆಗೂ ಅಂದರೆ ಸುಮಾರು ಒಂದು ಗಂಟೆಗಳ ಕಾಲ ಗೇಟ್​ಯಿಂದ ಹೊರ ನಿಲ್ಲಿಸಿ ನಟಿ ಸುಧಾರಾಣಿಗೆ ಅಪೋಲೊ ಆಸ್ಪತ್ರೆ ಸಿಬ್ಬಂದಿ ಆಟವಾಡಿಸಿದ್ದಾರೆ. ನಿನ್ನೆ ತಡರಾತ್ರಿ ಸುಧಾರಾಣಿ ಅಣ್ಣನ ಪುತ್ರಿ ಕಿಡ್ನಿ ಸ್ಟೋನ್ ಸಮಸ್ಯೆಯಿಂದಾಗಿ ತಲೆ ಸುತ್ತಿ ಬಿದ್ದಿದ್ದರು. ಹೀಗಾಗಿ ನಟಿ ಸುಧಾರಾಣಿ […]

ಗಂಟೆಗಟ್ಟಲೆ ಗೇಟ್ ಮುಂದೆ ಕಾದ್ರೂ ದಾಖಲಿಸಿಕೊಂಡಿಲ್ಲ, ಅಪೋಲೋ ವಿರುದ್ಧ ನಟಿ ಗರಂ
ಸುಧಾರಾಣಿ
ಆಯೇಷಾ ಬಾನು
| Updated By: |

Updated on:Jul 28, 2020 | 12:00 PM

Share

[lazy-load-videos-and-sticky-control id=”2DSmkYpjpY0″]

ಬೆಂಗಳೂರು: ಸ್ಯಾಂಡಲ್‍ವುಡ್ ನಟಿಗೂ ಖಾಸಗಿ ಆಸ್ಪತ್ರೆ ವೈದ್ಯರ ಬೇಜವಾಬ್ದಾರಿತನದ ನಡೆ ಆಕ್ರೋಶ ಬರುವಂತೆ ಮಾಡಿದೆ. ಅಪೋಲೋ ಆಸ್ಪತ್ರೆ ವಿರುದ್ಧ ನಟಿ ಸುಧಾರಾಣಿ ಗರಂ ಆಗಿದ್ದಾರೆ. ತಡ ರಾತ್ರಿ 10 ಗಂಟೆ ಯಿಂದ 11 ಗಂಟೆವರೆಗೂ ಅಂದರೆ ಸುಮಾರು ಒಂದು ಗಂಟೆಗಳ ಕಾಲ ಗೇಟ್​ಯಿಂದ ಹೊರ ನಿಲ್ಲಿಸಿ ನಟಿ ಸುಧಾರಾಣಿಗೆ ಅಪೋಲೊ ಆಸ್ಪತ್ರೆ ಸಿಬ್ಬಂದಿ ಆಟವಾಡಿಸಿದ್ದಾರೆ.

ನಿನ್ನೆ ತಡರಾತ್ರಿ ಸುಧಾರಾಣಿ ಅಣ್ಣನ ಪುತ್ರಿ ಕಿಡ್ನಿ ಸ್ಟೋನ್ ಸಮಸ್ಯೆಯಿಂದಾಗಿ ತಲೆ ಸುತ್ತಿ ಬಿದ್ದಿದ್ದರು. ಹೀಗಾಗಿ ನಟಿ ಸುಧಾರಾಣಿ ತನ್ನ ಸಹೋದರನ ಪುತ್ರಿಯನ್ನು ಕರೆದುಕೊಂಡು ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಗೆ ಆ್ಯಂಬುಲೆನ್ಸ್​ನಲ್ಲಿ ಬಂದಿದ್ದಾರೆ.‌ ಈ ವೇಳೆ ಆಸ್ಪತ್ರೆಯವರು ಆಸ್ಪತ್ರೆಯಲ್ಲಿ ಬೆಡ್, ವೆಂಟಿಲೇಟರ್ ಇಲ್ಲ ಅಂತ ಬೇಜವಾಬ್ದಾರಿತನದಿಂದ ವರ್ತಿಸಿದ್ದಾರೆ. ಇದರಿಂದ ಬೇಸತ್ತು ಕೊನೆಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್​ಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ.

ಬಳಿಕ ಆಸ್ಪತ್ರೆ ಒಳಗೆ ದಾಖಲಾತಿ ನೀಡಲಾಗಿದೆ. ಈ ಬಗ್ಗೆ ಮಾತನಾಡಿದ ಸುಧಾರಾಣಿ ಅಪೋಲೋ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ವೈದ್ಯರು ದೇವರ ಸಮಾನ ಅಂತೀವಿ ಆದ್ರೆ ಇಲ್ಲಿ‌‌ನ ಪರಿಸ್ಥಿತಿಯೇ ಬೇರೆ ಇದೆ.‌ ನಮ್ಮನ್ನು ರಾತ್ರಿ 10 ಗಂಟೆಯಿಂದ ಹೊರ ನಿಲ್ಲಿಸಿದ್ರು. ಕಮಿಷನರ್​ಗೆ ಫೋನ್ ಮಾಡಿದ ಬಳಿಕ ಒಳಗೆ ಸೇರಿಸಿಕೊಂಡಿದ್ದಾರೆ ಅಂತ ಅಸಮಾಧಾನ ವ್ಯಕ್ತಪಡಿಸಿದ್ರು.

Published On - 7:22 am, Tue, 28 July 20

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ