Tara Anuradha: ಮೊದಲು ಅವಕಾಶ ಕೊಟ್ಟ ಗುರುಗಳಿಗಾಗಿ ‘ಆವರ್ತ’ ಚಿತ್ರದ ಆಡಿಯೋ ರಿಲೀಸ್​ ಮಾಡಿದ ನಟಿ ತಾರಾ

Avartha Kannada Movie: ವೇಮಗಲ್​ ಜಗನ್ನಾಥ್​​​ ರಾವ್ ಅವರ ನಿರ್ದೇಶನದಲ್ಲಿ ‘ಆವರ್ತ’ ಸಿನಿಮಾ ಮೂಡಿಬಂದಿದೆ. ನಟಿ ತಾರಾ ಅನುರಾಧಾ ಅವರು ಈ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿದ್ದಾರೆ.

Tara Anuradha: ಮೊದಲು ಅವಕಾಶ ಕೊಟ್ಟ ಗುರುಗಳಿಗಾಗಿ ‘ಆವರ್ತ’ ಚಿತ್ರದ ಆಡಿಯೋ ರಿಲೀಸ್​ ಮಾಡಿದ ನಟಿ ತಾರಾ
‘ಆವರ್ತ’ ಸಿನಿಮಾ ಆಡಿಯೋ ರಿಲೀಸ್​
Follow us
| Updated By: ಮದನ್​ ಕುಮಾರ್​

Updated on:Nov 02, 2022 | 1:41 PM

ನಟಿ ತಾರಾ ಅನುರಾಧಾ (Tara Anuradha) ಅವರು ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಅನೇಕ ಬಗೆಯ ಪಾತ್ರಗಳ ಮೂಲಕ ಅವರು ಅಭಿಮಾನಿಗಳನ್ನು ರಂಜಿಸಿದ್ದಾರೆ. ಪೋಷಕ ಪಾತ್ರಗಳಲ್ಲಿ ಅವರಿಗೆ ಈಗಲೂ ಸಖತ್​ ಡಿಮ್ಯಾಂಡ್​ ಇದೆ. ರಾಜಕೀಯದಲ್ಲೂ ತಾರಾ ಅವರು ಗುರುತಿಸಿಕೊಂಡಿದ್ದಾರೆ. ಇಷ್ಟೆಲ್ಲ ಸಾಧನೆ ಮಾಡಿರುವ ಅವರು ತಮಗೆ ಮೊದಲು ಅವಕಾಶ ನೀಡಿದವರನ್ನು ಮರೆತಿಲ್ಲ. ಹೌದು, ಮೊದಲ ಬಾರಿಗೆ ತಾರಾ ಅವರು ಸ್ಯಾಂಡಲ್​ವುಡ್​ನಲ್ಲಿ (Sandalwood) ಬಣ್ಣ ಹಚ್ಚಿದ್ದು ‘ತುಳಸಿ ದಳ’ ಚಿತ್ರದಲ್ಲಿ. ಆ ಚಿತ್ರದ ನಿರ್ದೇಶಕ ವೇಮಗಲ್​ ಜಗನ್ನಾಥ್​​​ ರಾವ್​ ಅವರು ತಾರಾಗೆ ಅಂದು ನಟಿಸುವ ಅವಕಾಶ ನೀಡಿದ್ದರು. ಆ ಕಾರಣದಿಂದ ಇಂದು ವೇಮಗಲ್​ ಜಗನ್ನಾಥ್​ ರಾವ್ ಅವರ ಹೊಸ ಚಿತ್ರಕ್ಕೆ ತಾರಾ ಅವರು ಸಾಥ್​ ನೀಡಿದ್ದಾರೆ. ‘ಆವರ್ತ’ (Avartha Kannada Movie) ಸಿನಿಮಾದ ಹಾಡುಗಳನ್ನು ಅವರು ಬಿಡುಗಡೆ ಮಾಡಿದ್ದಾರೆ.

ಸಸ್ಪೆನ್ಸ್​ ಕಥಾಹಂದರ ಇರುವ ‘ಆವರ್ತ’ ಚಿತ್ರದ ಟ್ರೇಲರ್​ ಇತ್ತೀಚೆಗೆ ‘ಝಂಕಾರ್​’ ಯೂಟ್ಯೂಬ್​ ಚಾನೆಲ್​ ಮೂಲಕ ವೀಕ್ಷಣೆಗೆ ಲಭ್ಯವಾಗಿದೆ. ಕಥೆಗಾರನ ಪಾತ್ರದಲ್ಲಿ ನಾಯಕನಟ ಜಯ್ ಚಂದ್ರ ಅಭಿನಯಿಸಿದ್ದಾರೆ. ಸಿ.ಓ.ಡಿ. ಅಧಿಕಾರಿ ಪಾತ್ರಕ್ಕೆ ಧನ್ವಿತ್ ಬಣ್ಣ ಹಚ್ಚಿದ್ದಾರೆ. ನಾಯಕಿಯಾಗಿ ನಯನಾ ನಟಿಸಿದ್ದಾರೆ.

‘ಆವರ್ತ’ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ತಾರಾ ಅನುರಾಧಾ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ‘ನನ್ನ ಮೊದಲ ಚಿತ್ರ ‘ತುಳಸಿದಳ’. ಆ ಚಿತ್ರದಲ್ಲಿ ವೇಮಗಲ್ ಜಗನ್ನಾಥ್ ರಾವ್ ಅವರು ನನ್ನನ್ನು ಗುರುತಿಸಿ ಅವಕಾಶ ನೀಡಿದ್ದರು. ನನ್ನ ಗುರುಗಳು ನಿರ್ದೇಶಿಸಿರುವ ಈ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿರುವುದಕ್ಕೆ ಬಹಳ ಖುಷಿಯಾಗಿದೆ. ಚಿತ್ರತಂಡಕ್ಕೆ ಒಳ್ಳೆಯದಾಗಲಿ’ ಎಂದು ತಾರಾ ಅನುರಾಧ ಶುಭ ಕೋರಿದ್ದಾರೆ.

ಇದನ್ನೂ ಓದಿ
Image
ರವಿಚಂದ್ರನ್ ಈ ವಿಚಾರದಲ್ಲಿ ತುಂಬಾ ಪುಣ್ಯವಂತರು ಎಂದು ನಟಿ ತಾರಾ
Image
ತಾಯಿಯ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ನಟಿ ತಾರಾ ಅನುರಾಧ; ಇಲ್ಲಿದೆ ವಿಡಿಯೋ
Image
ಕೊನೆಗೂ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ನಟಿ ತಾರಾ ಅನುರಾಧ
Image
ತಿರುಪತಿಯಲ್ಲಿ ಮಳೆ ಸೃಷ್ಟಿಸಿರುವ ತಲ್ಲಣ ನಟಿ ತಾರಾಗೆ ತಿಮ್ಮಪ್ಪನ ದರ್ಶನ ಭಾಗ್ಯ ಲಭಿಸದಂತೆ ಮಾಡಿತು

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್ ಅವರು ‘ಆವರ್ತ’ ಚಿತ್ರ ಟ್ರೇಲರ್​ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ. ಈ ಚಿತ್ರದಲ್ಲಿ ಮೂರು ಸಾಹಸ ಸನ್ನಿವೇಶಗಳು ಚೆನ್ನಾಗಿದೆ ಎಂದು ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಹೇಳಿದ್ದಾರೆ. ಅತಿಶಯ್ ಜೈನ್ ಸಂಗೀತ ನಿರ್ದೇಶನ ಹಾಗೂ ಮಲ್ಲಿಕಾರ್ಜುನ್ ಛಾಯಾಗ್ರಹಣ ಮಾಡಿದ್ದಾರೆ.

‘ಯುವಕನೊಬ್ಬನಿಗೆ ಕಥೆ ಬರೆಯುವ ಹವ್ಯಾಸ ಇರುತ್ತದೆ. ಕಾಲ್ಪನಿಕ ಕಥೆ ಬರೆಯುವ ಬಯಕೆಯಿಲ್ಲದ ಆತನಿಗೆ ನೈಜಘಟನೆ ಕುರಿತು ಕಥೆ ಬರೆಯುವ ಆಸಕ್ತಿ. ಆ ಸಮಯದಲ್ಲಿ ಆತನಿಗೊಂದು ಮೆಸೇಜ್ ಬರುತ್ತದೆ. ಆತ ಆ ಸ್ಥಳಕ್ಕೆ ಹೋದಾಗ ಏನೆಲ್ಲಾ ಆಗುತ್ತದೆ ಎಂಬುದು ನಮ್ಮ ಚಿತ್ರದ ಕಥೆ’ ಎಂದು ನಿರ್ದೇಶಕ ವೇಮಗಲ್ ಜಗನ್ನಾಥ್​ ರಾವ್ ಮಾಹಿತಿ ನೀಡಿದ್ದಾರೆ. ನವೆಂಬರ್ 18ರಂದು ಈ ಸಿನಿಮಾ ರಿಲಿಸ್​ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:41 pm, Wed, 2 November 22

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ