AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವರಿಗೊಂದು ಕಾನೂನು, ಇವರಿಗೊಂದು ಕಾನೂನನ್ನು ಬಿಜೆಪಿ ಮಾಡಿಲ್ಲ’; ಪಿಎಫ್​​ಐ ನಿಷೇಧದ ಬಗ್ಗೆ ತಾರಾ ಮಾತು

ಅಲ್ಪ ಸಂಖ್ಯಾತರನ್ನು ಟಾರ್ಗೆಟ್ ಮಾಡುವ ಉದ್ದೇಶದಿಂದಲೇ ಪಿಎಫ್​ಐ ಬ್ಯಾನ್ ಮಾಡಲಾಗಿದೆ ಎಂಬ ಆರೋಪವನ್ನು ಕೆಲವರು ಮಾಡಿದ್ದಾರೆ. ಈ ಬಗ್ಗೆ ತಾರಾ ಮಾತನಾಡಿದ್ದಾರೆ.

‘ಅವರಿಗೊಂದು ಕಾನೂನು, ಇವರಿಗೊಂದು ಕಾನೂನನ್ನು ಬಿಜೆಪಿ ಮಾಡಿಲ್ಲ’; ಪಿಎಫ್​​ಐ ನಿಷೇಧದ ಬಗ್ಗೆ ತಾರಾ ಮಾತು
ತಾರಾ
TV9 Web
| Edited By: |

Updated on: Sep 28, 2022 | 2:44 PM

Share

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (Pupular Front of India-PFI) ಹಾಗೂ ಅದರ ಸಹವರ್ತಿ ಸಂಘಟನೆಗಳು ಹಾಗೂ ಅಧೀನ ಸಂಘಟನೆಗಳ ಮೇಲೆ ಕೇಂದ್ರ ಸರ್ಕಾರ ಐದು ವರ್ಷಗಳ ಕಾಲ ನಿಷೇಧ ಹೇರಿದೆ. ಈ ಸಂಘಟನೆಗಳನ್ನು ಕಾನೂನು ಬಾಹಿರ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಈ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ಬಗ್ಗೆ ಪರ-ವಿರೋಧ ಡಿಬೇಟ್​ಗಳು ಆಗುತ್ತಿವೆ. ನಟಿ, ಮೇಲ್ಮನೆ ಸದಸ್ಯೆ ತಾರಾ ಅನುರಾಧ (Tara Anuradha) ಅವರು ಈ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಕೋಲಾರದಲ್ಲಿ ಮಾತನಾಡಿರುವ ತಾರಾ ಅವರು, ‘ಭಾರತವು ಎಲ್ಲಾ ಜಾತಿ, ಧರ್ಮವನ್ನು ಅಪ್ಪಿಕೊಂಡಿರುವ ದೇಶ. ಭಾರತದ ಸಂವಿಧಾನ ಎಲ್ಲರಿಗೂ ಸಮಾನ ಹಕ್ಕುಗಳನ್ನ ನೀಡಿದೆ. ಯಾವುದೆ ಜಾತಿ ಅಥವಾ ಧರ್ಮವು ದೇಶ ವಿರೋಧಿ ಕೆಲಸ‌ ಮಾಡಿದಾಗ ಕಾನೂನು ಅದರ‌ ಕ್ರಮ ಕೈಗೊಳ್ಳುತ್ತದೆ. ಅವರಿಗೊಂದು ಕಾನೂನು, ಇವರಿಗೊಂದು ಕಾನೂನನ್ನು ಬಿಜೆಪಿ ಮಾಡಿಲ್ಲ’ ಎಂದು ತಾರಾ ಹೇಳಿದ್ದಾರೆ.

ಅಲ್ಪ ಸಂಖ್ಯಾತರನ್ನು ಟಾರ್ಗೆಟ್ ಮಾಡುವ ಉದ್ದೇಶದಿಂದಲೇ ಪಿಎಫ್​ಐ ಬ್ಯಾನ್ ಮಾಡಲಾಗಿದೆ ಎಂಬ ಆರೋಪವನ್ನು ಕೆಲವರು ಮಾಡಿದ್ದಾರೆ. ಈ ಬಗ್ಗೆ ತಾರಾ ಮಾತನಾಡಿದ್ದಾರೆ. ‘ಅಲ್ಪ ಸಂಖ್ಯಾತರಿಗೆ ಬಿಜೆಪಿ ಹೆಚ್ಚಿನ ಯೋಜನೆಗಳನ್ನು ನೀಡಿದೆ. ಕಡೆಗಣಿಸಲ್ಪಟ್ಟ ಧರ್ಮಗಳಿಗೆ ಮೋದಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ದೇಶ ವಿರೋಧಿ ಚಟುವಟಿಕೆಗಳನ್ನು ಯಾರು ಮಾಡುತ್ತಾರೆ ಅವರ ವಿರುದ್ಧ ನಮ್ಮ ಸರ್ಕಾರ ಇದೆ. ನ್ಯಾಯಾಲಯ ಯಾವುದು ಸರಿ ಯಾವುದು ತಪ್ಪು ಎಂಬ ತೀರ್ಮಾನ ಮಾಡಲಿದೆ. ಇದರಲ್ಲಿ ಯಾರನ್ನೂ ದೂಷಿಸುವ ಮಾತಿಲ್ಲ. ಜಾತಿ ಆಧಾರದ ಮೇಲೆ ಶಿಕ್ಷೆ ಆಗಿಲ್ಲ, ಅಪರಾಧದ ಆಧಾರದ ಮೇಲೆ ಶಿಕ್ಷೆಯಾಗಿದೆ’ ಎಂದು ತಾರಾ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: Raj Kundra: ಅಶ್ಲೀಲ ಚಿತ್ರ ನಿರ್ಮಾಣ ಕೇಸ್​​ನಲ್ಲಿ ರಾಜ್​ ಕುಂದ್ರಾಗೆ ಮತ್ತೆ ಸಂಕಷ್ಟ; ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿಕೊಂಡ ಜಾರಿ ನಿರ್ದೇಶನಾಲಯ

ಜಾರಿ ನಿರ್ದೇಶನಾಲಯ ಮತ್ತು ಗುಪ್ತಚರದಳ ಸಾಕಷ್ಟು ಮಾಹಿತಿ ಕಲೆಹಾಕಿದ ನಂತರವೇ ಪಿಎಫ್​ಐ ಹಾಗೂ ಎಸ್​ಡಿಪಿಐ ಮೇಲೆ ಕೇಂದ್ರ ಸರ್ಕಾರದ ಏಜೆನ್ಸಿಗಳು ದಾಳಿ ನಡೆಸಿದ್ದವು. ಈ ಸಂಘಟನೆಯ ಬಗ್ಗೆ ಹಲವು ಮಾಹಿತಿಯನ್ನು ಕಲೆ ಹಾಕಿದ ನಂತರ ಕೇಂದ್ರ ಸರ್ಕಾರವು ನಿರ್ಬಂಧ ಹೇರುವ ನಿರ್ಧಾರವನ್ನು ಕೈಗೊಂಡಿದೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್