AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾಗಮಂಡಲ’ ವಿಜಯಲಕ್ಷ್ಮಿಗೆ ಮುಗಿಯದ ಸಂಕಷ್ಟ; ತಾಯಿಯನ್ನು ಕಳೆದುಕೊಂಡ ನಟಿ

ವಿಜಯಲಕ್ಷ್ಮಿ ಅವರು ಚಿತ್ರರಂಗದಲ್ಲಿ ಆ್ಯಕ್ಟಿವ್​ ಆಗಿಲ್ಲ. ಆದರೆ, ಇತ್ತೀಚೆಗೆ ಅವರು ಸುದ್ದಿಯಲ್ಲಿದ್ದಾರೆ. ಅವರ ಸಹೋದರಿ ಉಷಾ ಅವರಿಗೆ ಅನಾರೋಗ್ಯ ಕಾಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇತ್ತೀಚೆಗೆ

‘ನಾಗಮಂಡಲ’ ವಿಜಯಲಕ್ಷ್ಮಿಗೆ ಮುಗಿಯದ ಸಂಕಷ್ಟ; ತಾಯಿಯನ್ನು ಕಳೆದುಕೊಂಡ ನಟಿ
ದುಃಖತಪ್ತ ವಿಜಯಲಕ್ಷ್ಮಿ ಫೋಟೋ ಈವರೆಗೆ ಬಳಸಿದ್ದೇವೆ. ಅವರ ತಾಯಿಯ ಫೋಟೋ ಲಭ್ಯವಾಗಿಲ್ಲ.
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Sep 27, 2021 | 6:43 PM

Share

‘ನಾಗಮಂಡಲ’ ಖ್ಯಾತಿಯ ನಟಿ ನಟಿ ವಿಜಯಲಕ್ಷ್ಮಿ ತಾಯಿ ವಿಜಯಾ ಸುಂದರಂ ಅವರು ಇಂದು (ಸೆಪ್ಟೆಂಬರ್​ 27) ಮೃತಪಟ್ಟಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ವಿಜಯಾ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಗಾಂಧಿನಗರದ ಸಂತೃಪ್ತಿ ಹೊಟೇಲ್​​ನಲ್ಲಿ  ವಿಜಯಲಕ್ಷ್ಮಿ ಕುಟುಂಬ ವಾಸವಾಗಿತ್ತು.  

ವಿಜಯಲಕ್ಷ್ಮಿ ಅವರು ಚಿತ್ರರಂಗದಲ್ಲಿ ಆ್ಯಕ್ಟಿವ್​ ಆಗಿಲ್ಲ. ಆದರೆ, ಇತ್ತೀಚೆಗೆ ಅವರು ಸುದ್ದಿಯಲ್ಲಿದ್ದಾರೆ. ಅವರ ಸಹೋದರಿ ಉಷಾ ಅವರಿಗೆ ಅನಾರೋಗ್ಯ ಕಾಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇತ್ತೀಚೆಗೆ ವಿಜಯಲಕ್ಷ್ಮಿಗೆ ಕೊವಿಡ್​ ಅಂಟಿತ್ತು. ಇದರಿಂದ ಅವರ ಆರೋಗ್ಯ ಗಂಭೀರವಾಗಿತ್ತು. ಈ ಬಗ್ಗೆ ವಿಡಿಯೋ ಮಾಡಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

‘ನಾನು ತುಂಬಾ ನರಳುತ್ತಿದ್ದೇನೆ. ಐದು ದಿನದಿಂದ ಜ್ವರ ಬಂದಿದೆ. ಕಷ್ಟಪಟ್ಟು ಆಸ್ಪತ್ರೆಗೆ ಬಂದಿದ್ದೇನೆ. ನಾನು ಕೊವಿಡ್​ ಸೆಂಟರ್​ಗೆ ಹೋಗಬೇಕು. ಈ ಬಗ್ಗೆ ಕಲಾವಿದರ ಸಂಘಕ್ಕೆ ಮನವಿ ಮಾಡಿದ್ದೇನೆ. ನಾನು ಎಲ್ಲರ ಜತೆಯೂ ಮಾತನಾಡುತ್ತಾ ಇದ್ದೇನೆ. ಆದರೆ, ಪ್ರಯೋಜನ ಆಗುತ್ತಿಲ್ಲ. ನನಗೆ ಕೊವಿಡ್​ ನ್ಯುಮೋನಿಯಾ ಅಟ್ಯಾಕ್​ ಆಗಿದೆ. ನಾನು ಉಳಿಯುವ ರೀತಿ ಕಾಣುತ್ತಿಲ್ಲ. ಐದು ದಿನದಿಂದ ಊಟ ಸರಿಯಾಗಿ ಸಿಗುತ್ತಿಲ್ಲ. ನಾನು ಎಲ್ಲಿಯೂ ಹೋಗಿಲ್ಲ. ಕರ್ನಾಟಕದಲ್ಲೇ ಇದ್ದೇನೆ’ ಎಂದಿದ್ದರು ಅವರು.

ಸಹೋದರಿ ಉಷಾ ಬಗ್ಗೆಯೂ ವಿಡಿಯೋ ಮಾಡಿ ಹಾಕಿದ್ದರು. ‘ಉಷಾ ತುಂಬಾ ವೀಕ್​​ ಆಗಿದ್ದಾರೆ. ಎರಡು ಮೂರು ದಿನದಿಂದ ನೆನಪು ಮಾಡಿಕೊಳ್ಳಲು ಕಷ್ಟಪಡುತ್ತಿದ್ದಾರೆ. ಮಾತನಾಡೋಕೆ ಆಗುತ್ತಿಲ್ಲ. ಸರ್ಜರಿ ಆದ ನಂತರ ಇಷ್ಟೆಲ್ಲ ಆಗಿದೆ. ಡಾಕ್ಟರ್​ ಜೊತೆ ಮಾತಾಡಿ ನನಗೆ ಸಾಕಾಗಿದೆ. ಯಾರೂ ಕೂಡ ಅವರು ಮಾಡಿರುವ ತಪ್ಪನ್ನು ಒಪ್ಪಿಕೊಳ್ಳುತ್ತಿಲ್ಲ. ಈಗ ಉಷಾ ಅವರಿಗೆ ಬೇರೆ ಕಡೆ ಚಿಕಿತ್ಸೆ ಕೊಡಿಸೋಕೆ ನಮ್ಮ ಬಳಿ ದುಡ್ಡಿಲ್ಲ. ನಾವೀಗ ಬಹಳ ನೋವಿನಲ್ಲಿ ಇದ್ದೇವೆ. ದಯವಿಟ್ಟು ನಮಗೆ ಆರ್ಥಿಕವಾಗಿ ಸಹಾಯ ಮಾಡಿ’ ಎಂದು ವಿಜಯಲಕ್ಷ್ಮಿ ಮನವಿ ಮಾಡಿಕೊಂಡಿದ್ದರು. ಇದಾದ ಕೆಲವೇ ತಿಂಗಳಲ್ಲಿ ಅವರಿಗೆ ಕೊವಿಡ್​ ಆಗಿತ್ತು. ಈಗ ತಾಯಿಯನ್ನು ಕಳೆದುಕೊಂಡಿದ್ದಾರೆ.

ಇದನ್ನೂ ಓದಿ: ‘ನಾನು ಉಳಿಯುವ ರೀತಿ ಕಾಣುತ್ತಿಲ್ಲ’; ಹೊಸ ವಿಡಿಯೋ ಮಾಡಿ ಹರಿಬಿಟ್ಟ ನಟಿ ವಿಜಯಲಕ್ಷ್ಮಿ

Published On - 6:42 pm, Mon, 27 September 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!