AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗುಟ್ಟಾಗಿ ಮದುವೆಯಾಗಿ ಮೋಸ ಮಾಡಿದ’; ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಜಯಲಕ್ಷ್ಮಿ ವಿಡಿಯೋ

‘ಆ ಸಂದರ್ಭದಲ್ಲಿ ಅವನಿಗೆ ಇನ್ನೂ ಮದುವೆಯಾಗಿರಲಿಲ್ಲ. ನನ್ನನ್ನು ಮದುವೆ ಆಗುತ್ತೇನೆ ಅಂತ ಭರವಸೆ ನೀಡಿ, 3 ವರ್ಷ ಅವನು ನನ್ನ ಜೊತೆಗಿದ್ದ. ಯಾರಿಗೂ ಗೊತ್ತಾಗದಂತೆ ನನ್ನ ಜತೆ ರಹಸ್ಯವಾಗಿ ಮದುವೆ ಮಾಡಿಕೊಂಡ. ನನ್ನ ಇಡೀ ಜೀವನ ಹಾಳು ಮಾಡಿದ. ಅವನಿಗೆ ಸಮಸ್ಯೆಗಳು ಬಂದಾಗ ನನ್ನನ್ನು ಒಂಟಿ ಮಾಡಿದ’ ಎಂದು ವಿಜಯಲಕ್ಷ್ಮಿ ಆರೋಪ ಮಾಡಿದ್ದಾರೆ.

‘ಗುಟ್ಟಾಗಿ ಮದುವೆಯಾಗಿ ಮೋಸ ಮಾಡಿದ’; ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಜಯಲಕ್ಷ್ಮಿ ವಿಡಿಯೋ
ಸೀಮಾನ್​, ವಿಜಯಲಕ್ಷ್ಮಿ
Follow us
ಮದನ್​ ಕುಮಾರ್​
|

Updated on: Mar 06, 2024 | 3:24 PM

‘ಸೂರ್ಯವಂಶ’, ‘ನಾಗಮಂಡಲ’, ‘ಜೋಡಿ ಹಕ್ಕಿ’ ಮುಂತಾದ ಸಿನಿಮಾಗಳಲ್ಲಿ ನಟಿಸಿ ಫೇಮಸ್​ ಆದ ನಟಿ ವಿಜಯಲಕ್ಷ್ಮಿ (Vijayalakshmi) ಅವರು ಇತ್ತೀಚಿನ ವರ್ಷಗಳಲ್ಲಿ ವಿವಾದಗಳ ಮೂಲಕವೇ ಸುದ್ದಿ ಆಗಿದ್ದು ಹೆಚ್ಚು. ಪರಭಾಷೆಯಲ್ಲೂ ನಟಿಸಿ ಮನೆಮಾತಾಗಿರುವ ವಿಜಯಲಕ್ಷ್ಮಿ ಅವರು ಮತ್ತೆ ವಿವಾದ ಮಾಡಿಕೊಳ್ಳುತ್ತಿದ್ದಾರೆ. ನಾಮ್​ ತಮಿಳರ್​ ಪಾರ್ಟಿಯ ಸೀಮಾನ್​ (Seeman) ವಿರುದ್ಧ ಅವರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಅವರು ವಿಡಿಯೋ (Vijayalakshmi Viral Video) ಮೂಲಕ ಎಚ್ಚರಿಕೆ ನೀಡಿದ್ದಾರೆ. ಇದು ತಮ್ಮ ಕೊನೆಯ ವಿಡಿಯೋ ಎಂದು ಕೂಡ ವಿಜಯಲಕ್ಷ್ಮಿ ಹೇಳಿದ್ದಾರೆ.

ಫೆಬ್ರವರಿ 29ರಂದು ವಿಜಯಲಕ್ಷ್ಮಿ ಅವರು ತಮ್ಮ ಮನೆಯ ಟೆರೆಸ್​ನಲ್ಲಿ ಒಂದು ವಿಡಿಯೋ ಮಾಡಿದ್ದರು. ‘ದಯವಿಟ್ಟು ಸೀಮಾನ್​ ನನ್ನ ಜೊತೆ ಮಾತನಾಡಬೇಕು’ ಎಂದು ಅವರ ಆ ವಿಡಿಯೋದಲ್ಲಿ ಮನವಿ ಮಾಡಿಕೊಂಡಿದ್ದರು. ಆದರೆ ಸೀಮಾನ್​ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹಾಗಾಗಿ ಈಗ ಮಾರ್ಚ್​ 5ರಂದು ವಿಜಯಲಕ್ಷ್ಮಿ ಅವರು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ತಾವು ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿರುವುದಾಗಿ ಅವರು ಹೇಳಿದ್ದಾರೆ.

ವಿಜಯಲಕ್ಷ್ಮಿ ಅವರು ಆ ವಿಡಿಯೋ ಹಂಚಿಕೊಂಡು 5 ದಿನ ಕಳೆದರೂ ಕೂಡ ಸೀಮಾನ್​ ಕಡೆಯಿಂದ ಪ್ರತಿಕ್ರಿಯೆ ಬಂದಿಲ್ಲ. ‘ಈ ರೀತಿ ವಿಡಿಯೋ ಮಾಡಬೇಕಾದ ಪರಿಸ್ಥಿತಿ ಬಂದಿದೆ ಎಂದರೆ ನನಗೆ ಭಾವನಾತ್ಮಕವಾಗಿ ಎಷ್ಟು ನೋವಾಗಿರಬಹುದು ಅಂತ ನೀವೇ ಯೋಚಿಸಿ’ ಎಂದು ವಿಜಯಲಕ್ಷ್ಮಿ ಹೇಳಿದ್ದಾರೆ. ‘ಪರವಾಗಿಲ್ಲ, ಆಕೆ ಬಿದ್ದು ಸಾಯಲಿ ಎಂಬುದು ಜನರ ಪ್ರತಿಕ್ರಿಯೆ ಆಗಿದ್ದರೆ ಎಲ್ಲವನ್ನೂ ಹೇಳುತ್ತೇನೆ ಕೇಳಿ’ ಎಂದಿದ್ದಾರೆ ವಿಜಯಲಕ್ಷ್ಮಿ.

‘ನನ್ನ ಸಹೋದರಿಯ ಸಮಸ್ಯೆಯಿಂದಾಗಿ ನಾನು ಮೊದಲ ಬಾರಿಗೆ ಸೀಮಾನ್​ ಭೇಟಿ ಮಾಡಿದೆ. ಆಗ ಆತನಿಗೆ ಮದುವೆ ಆಗಿರಲಿಲ್ಲ. ನನ್ನನ್ನು ಮದುವೆ ಆಗುವುದಾಗಿ ಭರವಸೆ ನೀಡಿ, ನನ್ನ ಜೊತೆ ಆತ ಮೂರು ವರ್ಷ ಇದ್ದ. ಯಾರಿಗೂ ಗೊತ್ತಾಗದಂತೆ ಆತ ನನ್ನ ಜೊತೆ ರಹಸ್ಯವಾಗಿ ಮದುವೆ ಆದ. ನನ್ನ ಇಡೀ ಬದುಕನ್ನು ಹಾಳು ಮಾಡಿದ. ಸಮಸ್ಯೆಗಳು ಎದುರಾದಾಗ ನನ್ನನ್ನು ಒಂಟಿ ಮಾಡಿದ’ ಎಂದು ವಿಜಯಲಕ್ಷ್ಮಿ ಹೇಳಿದ್ದಾರೆ.

ಇದನ್ನೂ ಓದಿ: ದೇವರಿಗೆ ಮುಡಿ ಕೊಟ್ಟು, ಪುನೀತ್​ಗಾಗಿ ಹಾಡು ಹೇಳಿದ ನಟಿ ವಿಜಯಲಕ್ಷ್ಮೀ; ಇಲ್ಲಿದೆ ವಿಡಿಯೋ

‘ಇದು ನನ್ನ ಕೊನೆಯ ವಿಡಿಯೋ. ಇನ್ನು ಎರಡು ದಿನದೊಳಗೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ನಾನು ಕರ್ನಾಟಕದಲ್ಲಿ ಸಾಯಲು ಸಿದ್ಧಳಾಗಿದ್ದೇನೆ. ಇದಕ್ಕೆಲ್ಲ ಸೀಮಾನ್​ ಕಾರಣ’ ಎಂದು ವಿಜಯಲಕ್ಷ್ಮಿ ಅವರು ವಿಡಿಯೋದಲ್ಲಿ ತಿಳಿಸಿದ್ದಾರೆ. ತಮಿಳಿನಲ್ಲಿ ಅವರು ಮಾತನಾಡಿರುವ ಈ ವಿಡಿಯೋ ಈಗ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ