ಚಿಂತಾಜನಕ ಸ್ಥಿತಿಯಲ್ಲಿ ‘ಸೂರ್ಯವಂಶ’ ನಟಿ ವಿಜಯಲಕ್ಷ್ಮೀ ಸಹೋದರಿ; ಸಹಾಯಕ್ಕಾಗಿ ಶಿವಣ್ಣನಿಗೆ ಮನವಿ

Vijayalakshmi: ಖ್ಯಾತ ನಟಿ ವಿಜಯಲಕ್ಷ್ಮೀ ಅವರ ಸಹೋದರಿ ಉಷಾ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ದಿನದಿಂದ ದಿನಕ್ಕೆ ಅವರ ಸ್ಥಿತಿ ಚಿಂತಾಜನಕ ಆಗುತ್ತಿದ್ದು, ಸಹಾಯಕ್ಕಾಗಿ ವಿಜಯಲಕ್ಷ್ಮೀ ಅಂಗಲಾಚಿದ್ದಾರೆ.

ಚಿಂತಾಜನಕ ಸ್ಥಿತಿಯಲ್ಲಿ ‘ಸೂರ್ಯವಂಶ’ ನಟಿ ವಿಜಯಲಕ್ಷ್ಮೀ ಸಹೋದರಿ; ಸಹಾಯಕ್ಕಾಗಿ ಶಿವಣ್ಣನಿಗೆ ಮನವಿ
ಶಿವರಾಜ್​ಕುಮಾರ್​, ಉಷಾ, ವಿಜಯಲಕ್ಷ್ಮೀ
Follow us
| Updated By: ರಾಜೇಶ್ ದುಗ್ಗುಮನೆ

Updated on: May 30, 2021 | 3:45 PM

ನಾಗಮಂಡಲ, ಸೂರ್ಯವಂಶ ಮುಂತಾದ ಸಿನಿಮಾಗಳಲ್ಲಿ ನಟಿಸಿ ಕರುನಾಡಿನಲ್ಲಿ ಜನಪ್ರಿಯವಾದ ನಟಿ ವಿಜಯಲಕ್ಷ್ಮೀ ಅವರು ಇತ್ತೀಚಿನ ವರ್ಷಗಳಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗ ಅವರ ಸಹೋದರಿ ಉಷಾ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಚೆನ್ನೈನಲ್ಲಿ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆದರೂ ಉಷಾ ಆರೋಗ್ಯ ಚಿಂತಾಜನಕ ಆಗಿದೆ. ಈ ಕಷ್ಟದ ಸಂದರ್ಭದಲ್ಲಿ ತಮಗೆ ಸಹಾಯ ಮಾಡುವಂತೆ ಅವರು ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದಾರೆ. ತಮ್ಮ ಈ ಕಷ್ಟವನ್ನು ಶಿವರಾಜ್​ಕುಮಾರ್​ ಅವರ ಗಮನಕ್ಕೆ ತನ್ನಿ ಎಂದು ವಿಜಯಲಕ್ಷ್ಮೀ ಅಳಲು ತೋಡಿಕೊಂಡಿದ್ದಾರೆ.

‘ಉಷಾ ಆರೋಗ್ಯದ ಬಗ್ಗೆ ಆತಂಕದಲ್ಲಿ ಇದ್ದೇನೆ. ಅವರ ಪರಿಸ್ಥಿತಿ ಕ್ರಿಟಿಕಲ್​ ಆಗಿದೆ. ಗರ್ಭಕೋಶದಲ್ಲಿ​ ಮೂರು ದೊಡ್ಡ ಗಡ್ಡೆಗಳು​ ಆಗಿದ್ದವು. ಅವು ದೊಡ್ಡದಾಗಿದ್ದರಿಂದ ಗರ್ಭಕೋಶ ತೆಗೆಯಬೇಕಾಯಿತು. ಕಳೆದ ತಿಂಗಳು 14ರಂದು ವೈದ್ಯರು ಸರ್ಜರಿ ಮಾಡಿದರು. ಆ ಬಳಿಕ ಅವರು ತುಂಬ ವೀಕ್​ ಆಗಿದ್ದರು. ನೀರು ಕೂಡ ಕುಡಿಯೋಕೆ ಆಗುತ್ತಿರಲಿಲ್ಲ. ಊಟ ಮಾಡಲು ಕಷ್ಟ ಆಗಿತ್ತು. ಆ ಆಸ್ಪತ್ರೆಯಲ್ಲಿ ಕೊವಿಡ್​ ಸೋಂಕಿತರು ಇದ್ದಿದ್ದರಿಂದ ಉಷಾ ಅಲ್ಲಿರುವುದು ಬೇಡ ಎಂದು ಡಾಕ್ಟರ್​ ಹೇಳಿದರು. ಮನೆಗೆ ಕರೆದುಕೊಂಡು ಬಂದ ಬಳಿಕ ಅವರಿಗೆ ಏನೇ ತಿಂದರೂ ಬ್ಲೀಡಿಂಗ್​ ಶುರು ಆಯಿತು. ನಂತರ ಆಸ್ಪತ್ರೆಗೆ ಕರೆದುಕೊಂಡು ಹೋದರೆ ಕೊವಿಡ್​ ಇರುವುದರಿಂದ ಇಲ್ಲಿಗೆ ಬರಬೇಡಿ ಅಂತ ಹೇಳಿದರು’ ಎಂದು ವಿಡಿಯೋದಲ್ಲಿ ವಿಜಯಲಕ್ಷ್ಮಿ ವಿವರಿಸಿದ್ದಾರೆ.

‘ಉಷಾ ತುಂಬಾ ವೀಕ್​​ ಆಗಿದ್ದಾರೆ. ಎರಡು ಮೂರು ದಿನದಿಂದ ನೆನಪು ಮಾಡಿಕೊಳ್ಳಲು ಕಷ್ಟಪಡುತ್ತಿದ್ದಾರೆ. ಮಾತನಾಡೋಕೆ ಆಗುತ್ತಿಲ್ಲ. ಸರ್ಜರಿ ಆದ ನಂತರ ಇಷ್ಟೆಲ್ಲ ಆಗಿದೆ. ಡಾಕ್ಟರ್​ ಜೊತೆ ಮಾತಾಡಿ ನನಗೆ ಸಾಕಾಗಿದೆ. ಯಾರೂ ಕೂಡ ಅವರು ಮಾಡಿರುವ ತಪ್ಪನ್ನು ಒಪ್ಪಿಕೊಳ್ಳುತ್ತಿಲ್ಲ. ಈಗ ಉಷಾ ಅವರಿಗೆ ಬೇರೆ ಕಡೆ ಚಿಕಿತ್ಸೆ ಕೊಡಿಸೋಕೆ ನಮ್ಮ ಬಳಿ ದುಡ್ಡಿಲ್ಲ. ನಾವೀಗ ಬಹಳ ನೋವಿನಲ್ಲಿ ಇದ್ದೇವೆ. ದಯವಿಟ್ಟು ನಮಗೆ ಆರ್ಥಿಕವಾಗಿ ಸಹಾಯ ಮಾಡಿ’ ಎಂದು ವಿಜಯಲಕ್ಷ್ಮೀ ಹೇಳಿದ್ದಾರೆ.

‘ಈ ಸಂದರ್ಭದಲ್ಲಿ ಎಲ್ಲರೂ ಕಷ್ಟದಲ್ಲಿ ಇದ್ದಾರೆ. ಹಾಗಾಗಿ ದುಡ್ಡು ಕೇಳೋಕೆ ನನಗೆ ಬೇಜಾರಾಗುತ್ತಿದೆ. ಕರ್ನಾಟಕದಲ್ಲಿರುವ ಜನರು, ಅಭಿಮಾನಿಗಳು ಮತ್ತು ಚಿತ್ರರಂಗದ ಹಿರಿಯ ನಟರು ನನಗೆ ಸಹಾಯ ಮಾಡಿ. ದಯವಿಟ್ಟು ಇದನ್ನು ಶಿವಣ್ಣ ಅವರ ಗಮನಕ್ಕೆ ತನ್ನಿ ಎಂದು ಕೇಳಿಕೊಳ್ಳುತ್ತೇನೆ. ಇಲ್ಲಿಯೂ ರಜನಿಕಾಂತ್​ ಮುಂತಾದ ದೊಡ್ಡ ನಟರು ಇದ್ದಾರೆ. ಅವರಿಗೆ ಕರ್ನಾಟಕದ ಹಿರಿಯರು ವಿಷಯ ತಿಳಿಸಿದರೆ ನಮಗೆ ಸಹಾಯ ಆಗುತ್ತದೆ. ನನಗೆ ಅದನ್ನು ಒಬ್ಬಳೇ ಹೇಗೆ ಮಾಡಬೇಕು ಎಂದು ಗೊತ್ತಾಗುತ್ತಿಲ್ಲ’ ಎಂದು ಅವರು ಅಸಹಾಯಕತೆ ತೋಡಿಕೊಂಡಿದ್ದಾರೆ.

ಇದನ್ನೂ ಓದಿ:

ಸಹಾಯಕ್ಕಾಗಿ ಅಂಗಲಾಚಿದ ಕೆಲವೇ ಗಂಟೆಗಳಲ್ಲಿ ಸ್ಟಾರ್​ ನಟಿ ಪಿಯಾ ಸಹೋದರ ಕೊರೊನಾದಿಂದ ನಿಧನ

ಗ್ಲೆನ್​ ಮ್ಯಾಕ್ಸ್​​ವೆಲ್​​ಗೆ ಗೊತ್ತು ಸೆಂಚುರಿ ಸ್ಟಾರ್​ ಶಿವರಾಜ್​ಕುಮಾರ್​; ಶಿವಣ್ಣನ ಬಗ್ಗೆ ಮ್ಯಾಕ್ಸಿ ಹೇಳಿದ್ದೇನು?

ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್