AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ವಿರುದ್ಧ ಹೆಚ್ಚುವರಿ ಚಾರ್ಜ್​ಶೀಟ್ ಸಲ್ಲಿಕೆ, ಫೋಟೊದಿಂದ ಹೆಚ್ಚಾಯ್ತು ಕಂಟಕ

Darshan Thoogudeepa: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಹಾಗೂ ಇತರೆ ಕೆಲ ಆರೋಪಿಗಳ ವಿರುದ್ಧ ಪ್ರಕರಣದ ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ಅವರು ಹೆಚ್ಚುವರಿ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಕೆಲವು ಮಹತ್ವದ ಸಾಕ್ಷ್ಯಗಳು ಮತ್ತು ಸಾಕ್ಷಿಗಳ ಹೇಳಿಕೆಗಳನ್ನು ಹೆಚ್ಚುವರಿ ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ.

ದರ್ಶನ್ ವಿರುದ್ಧ ಹೆಚ್ಚುವರಿ ಚಾರ್ಜ್​ಶೀಟ್ ಸಲ್ಲಿಕೆ, ಫೋಟೊದಿಂದ ಹೆಚ್ಚಾಯ್ತು ಕಂಟಕ
Darshan Renuka
ಮಂಜುನಾಥ ಸಿ.
|

Updated on:May 21, 2025 | 11:20 AM

Share

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ. ನಿನ್ನೆ ನಡೆದ ವಿಚಾರಣೆಗೆ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಹಾಗೂ ಇತರೆ ಆರೋಪಿಗಳು ಹಾಜರಾಗಿದ್ದರು. ಪ್ರಕರಣದ ತನಿಖೆಯನ್ನು ಎಸಿಪಿ ಚಂದನ್ ಕುಮಾರ್ ನಡೆಸುತ್ತಿದ್ದು, ನಿನ್ನೆ (ಮೇ 20) ದರ್ಶನ್ ಹಾಗೂ ಇತರರ ವಿರುದ್ಧ ಹೆಚ್ಚುವರಿ ಆರೋಪ ಪಟ್ಟಿಯನ್ನು ತನಿಖಾಧಿಕಾರಿ, ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಈ ಹೆಚ್ಚುವರಿ ಚಾರ್ಜ್​ಶೀಟ್​ ಇಂದಾಗಿ ದರ್ಶನ್ ಹಾಗೂ ಇತರೆ ಆರೋಪಿಗಳಿಗೆ ಇನ್ನಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

132 ಪುಟಗಳ ಹೆಚ್ಚುವರಿ ಚಾರ್ಜ್ ಶೀಟ್ ಅನ್ನು ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಈ ಚಾರ್ಜ್​ಶೀಟ್​ನಲ್ಲಿ ಕೆಲ ಮಹತ್ವದ ಸಾಕ್ಷ್ಯಗಳ ಉಲ್ಲೇಖ ಮಾಡಲಾಗಿದೆ. ಜೊತೆಗೆ ಕೆಲ ಸಾಕ್ಷ್ಯಗಳ ಹೇಳಿಕೆಗಳನ್ನು ದಾಖಲಿಸಲಾಗಿದೆ. ಶೆಡ್​ನಲ್ಲಿ ರೇಣುಕಾ ಸ್ವಾಮಿಯ ಕೊಲೆ ಆದ ದಿನ ದರ್ಶನ್ ಅಲ್ಲಿದ್ದ ಕೆಲ ಆರೋಪಿಗಳ ಜೊತೆಗೆ ಫೋಟೊ ತೆಗೆಸಿಕೊಂಡಿದ್ದರು, ಇದೀಗ ಆ ಫೋಟೊವನ್ನು ರಿಟ್ರೀವ್ ಮಾಡಿರುವ ಪೊಲೀಸರು, ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ದರ್ಶನ್ ಜತೆ ಪುನೀತ್, ರವಿಶಂಕರ್, ಅನುಕುಮಾರ್, ಜಗದೀಶ್ ಫೋಟೋ ತೆಗೆಸಿಕೊಂಡಿದ್ದರು. ಆದರೆ ಆ ನಂತರ ಆ ಫೋಟೊ ಅನ್ನು ಡಿಲೀಟ್ ಮಾಡಲಾಗಿತ್ತು. ಪುನೀತ್ ಮೊಬೈಲ್​ನಲ್ಲಿ ಆ ಫೋಟೊ ಇತ್ತು. ಪುನೀತ್ ಮೊಬೈಲ್​ ಅನ್ನು ಎಫ್​ಎಸ್​ಎಲ್​ಗೆ ಕಳಿಸಿದ್ದ ಪೊಲೀಸರು ಬಳಿಕ ಫೋಟೊ ರಿಟ್ರೀವ್ ಮಾಡಿದ್ದಾರೆ.

ಇದನ್ನೂ ಓದಿ:ದರ್ಶನ್ ಮೇಕಪ್ ಆರ್ಟಿಸ್ಟ್ ಹೊನ್ನೆ ಗೌಡ ನಿಧನ; ಸಂತಾಪ ಸೂಚಿಸಿದ ಡಿ ಬಾಸ್

ದರ್ಶನ್​ ಜಾಮೀನು ಅರ್ಜಿ ವಿಚಾರಣೆ ವೇಳೆ ಅವರ ಪರ ವಕೀಲರು, ಘಟನೆ ನಡೆದಾಗ ದರ್ಶನ್ ಸ್ಥಳದಲ್ಲಿ ಇರಲೇ ಇಲ್ಲ ಎಂಬಂತೆ ವಾದ ಮಂಡಿಸಿದ್ದರು. ಆದರೆ ಈಗ ಈ ಫೋಟೊ ಬಹಿರಂಗವಾದ ಬಳಿಕ ದರ್ಶನ್ ಸ್ಥಳದಲ್ಲಿ ಇದ್ದರು ಎಂಬುದಕ್ಕೆ ಇನ್ನಷ್ಟು ಪುಷ್ಠಿ ದೊರೆತಿದೆ. ಇದು ಮುಂದಿನ ದಿನಗಳಲ್ಲಿ ದರ್ಶನ್​ಗೆ ಕಂಟಕವಾಗಿ ಪರಿಣಮಿಸಬಹುದು ಎನ್ನಲಾಗುತ್ತಿದೆ.

ಇದರ ನಡುವೆ ಕೃತ್ಯ ನಡೆದ ಬಳಿಕ ಪೊಲೀಸರು ಕೆಲ ಮೊಬೈಲ್, ವಾಹನಗಳು ಇನ್ನಿತರೆ ಕೆಲ ವಸ್ತುಗಳನ್ನು ಸೀಜ್ ಮಾಡಿದ್ದರು. ಅವುಗಳಲ್ಲಿ ಕೆಲವನ್ನು ಇದೀಗ ಮರಳಿಸಿದ್ದಾರೆ. ಕೆಲ ಕಾರುಗಳು, ಮೊಬೈಲ್​ಗಳನ್ನು ಆರೋಪಿಗಳ ಮನವಿ ಮೇರೆಗೆ ಮರಳಲಿಸಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:51 am, Wed, 21 May 25

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ