AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prabhas: ಕನ್ನಡ ನಿರ್ಮಾಪಕರ ಜತೆ ಹೊಸ ಸಿನಿಮಾಗೆ ಸಹಿ ಮಾಡಿದ ಪ್ರಭಾಸ್​; ಸೋಲಿನ ಬಳಿಕವೂ ಭಾರಿ ಡಿಮ್ಯಾಂಡ್​

Prabhas Next Movie: ಸ್ಯಾಂಡಲ್​ವುಡ್​ನ ನಿರ್ಮಾಣ ಸಂಸ್ಥೆ ಮೂಲಕ ಸಿದ್ಧವಾಗಲಿರುವ ಹೊಸ ಸಿನಿಮಾದಲ್ಲಿ ನಟಿಸಲು ಪ್ರಭಾಸ್​ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಚಿತ್ರ ಕೂಡ ಪ್ಯಾನ್​​ ಇಂಡಿಯಾ ಮಟ್ಟದಲ್ಲಿ ಮೂಡಿಬರಲಿದೆ.

Prabhas: ಕನ್ನಡ ನಿರ್ಮಾಪಕರ ಜತೆ ಹೊಸ ಸಿನಿಮಾಗೆ ಸಹಿ ಮಾಡಿದ ಪ್ರಭಾಸ್​; ಸೋಲಿನ ಬಳಿಕವೂ ಭಾರಿ ಡಿಮ್ಯಾಂಡ್​
ಪ್ರಭಾಸ್​
ಮದನ್​ ಕುಮಾರ್​
|

Updated on: Jun 26, 2023 | 8:24 PM

Share

ನಟ ಪ್ರಭಾಸ್​ ಅವರು ಈ ವರ್ಷ ‘ಆದಿಪುರುಷ್​’ ಸಿನಿಮಾ (Adipurush Movie) ಮೂಲಕ ಭರ್ಜರಿ ಗೆಲುವಿನ ನಿರೀಕ್ಷೆಯಲ್ಲಿ ಇದ್ದರು. ಆದರೆ ಅಂದುಕೊಂಡಂತೆ ಎನೂ ಆಗಲಿಲ್ಲ. ಜೂನ್​ 16ರಂದು ರಿಲೀಸ್​ ಆದ ‘ಆದಿಪುರುಷ್​’ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಮಾಡಲಿಲ್ಲ. ಜನರು ಈ ಚಿತ್ರವನ್ನು ಹೊಗಳಿದ್ದಕ್ಕಿಂತಲೂ ಟ್ರೋಲ್​ ಮಾಡಿದ್ದೇ ಜಾಸ್ತಿ. ಹಾಗಂತ ಪ್ರಭಾಸ್​ (Prabhas) ಅವರಿಗೆ ಇರುವ ಡಿಮ್ಯಾಂಡ್​ ಕಡಿಮೆ ಆಗಿಲ್ಲ. ಈಗಲೂ ಅವರಿಗೆ ಹೊಸ ಹೊಸ ಆಫರ್​ಗಳು ಹರಿದು ಬರುತ್ತಿವೆ. ಮೂಲಗಳ ಪ್ರಕಾರ, ಪ್ರಭಾಸ್​ ಅವರು ಈಗ ಕನ್ನಡದ ‘ಕೆವಿಎನ್​ ಪ್ರೊಡಕ್ಷನ್ಸ್​’ (KVN Productions) ಸಂಸ್ಥೆ ಜೊತೆ ಕೈ ಜೋಡಿಸಿದ್ದಾರೆ. ಈ ಬ್ಯಾನರ್​ನಲ್ಲಿ ಅವರೊಂದು ಪ್ಯಾನ್​ ಇಂಡಿಯಾ ಸಿನಿಮಾ ಮಾಡುತ್ತಾರೆ ಎಂದು ಸುದ್ದಿ ಹರಡಿದೆ. ಆದರೆ ಈ ಬಗ್ಗೆ ಇನ್ನಷ್ಟೇ ಆಧಿಕೃತ ಮಾಹಿತಿ ಸಿಗಬೇಕಿದೆ.

ಕನ್ನಡ ಚಿತ್ರರಂಗದಲ್ಲಿ ‘ಕೆವಿಎನ್​ ಪ್ರೊಡಕ್ಷನ್ಸ್​’ ಸಂಸ್ಥೆ ಭದ್ರವಾಗಿ ನೆಲೆ ಕಂಡುಕೊಳ್ಳುತ್ತಿದೆ. ಪರಭಾಷೆಯ ದೊಡ್ಡ ದೊಡ್ಡ ಸಿನಿಮಾಗಳನ್ನು ಕರುನಾಡಿನಲ್ಲಿ ವಿತರಣೆ ಮಾಡಿದ ಹೆಗ್ಗಳಿಕೆಯೂ ಈ ಸಂಸ್ಥೆಗೆ ಸಲ್ಲುತ್ತದೆ. ಈಗ ಈ ಬ್ಯಾನರ್​ನ ಅಡಿಯಲ್ಲಿ ನಿರ್ಮಾಣ ಆಗಲಿರುವ ಹೊಸ ಸಿನಿಮಾದಲ್ಲಿ ನಟಿಸಲು ಪ್ರಭಾಸ್​ ಒಪ್ಪಿಕೊಂಡಿದ್ದಾರೆ ಎಂದು ಗಾಸಿಪ್​ ಹಬ್ಬಿದೆ. ಚಿತ್ರತಂಡದ ಕಡೆಯಿಂದಲೇ ಸ್ಪಷ್ಟನೆ ಸಿಗಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ಇದನ್ನೂ ಓದಿ: ಪ್ರಾಜೆಕ್ಟ್ ಕೆ ಸೇರಿಕೊಂಡ ಕಮಲ್ ಹಾಸನ್: ಪ್ರಭಾಸ್ ಎದುರು ಗುದ್ದಾಡೋಕೆ ರೆಡಿ

ಪ್ರಭಾಸ್​ ಕೈಯಲ್ಲಿ ಹಲವು ಪ್ರಾಜೆಕ್ಟ್​ಗಳಿವೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಬಹುದೊಡ್ಡ ಯಶಸ್ಸಿನ ಬಳಿಕ ಪ್ರಶಾಂತ್​ ನೀಲ್​ ನಿರ್ದೇಶನದ ಮಾಡುತ್ತಿರುವ ‘ಸಲಾರ್​’ ಸಿನಿಮಾದಲ್ಲಿ ಪ್ರಭಾಸ್​ ನಟಿಸುತ್ತಿದ್ದಾರೆ. ಆ ಸಿನಿಮಾ ಮೇಲೆ ಅಭಿಮಾನಿಗಳಿಗೆ ಬೆಟ್ಟದಷ್ಟು ನಿರೀಕ್ಷೆ ಇದೆ. ಅದರ ಜೊತೆಗೆ ‘ಪ್ರಾಜೆಕ್ಟ್​ ಕೆ’ ಸಿನಿಮಾದ ಕೆಲಸಗಳು ಕೂಡ ಭರದಿಂದ ಸಾಗುತ್ತಿವೆ. ಈ ಸಿನಿಮಾದಲ್ಲಿ ಕಮಲ್​ ಹಾಸನ್​, ಅಮಿತಾಭ್​ ಬಚ್ಚನ್​ ಅವರಂತಹ ಘಟಾನುಘಟಿ ನಟರು ಅಭಿನಯಿಸುತ್ತಿರುವುದು ವಿಶೇಷ.

ಇದನ್ನೂ ಓದಿ: ಇಟಲಿಯಲ್ಲಿ ವಿಲ್ಲಾ ಹೊಂದಿದ್ದಾರೆ ಪ್ರಭಾಸ್; ತಿಂಗಳಿಗೆ ಇದರಿಂದ ಬರುವ ಆದಾಯ ಇಷ್ಟೊಂದಾ?

‘ಬಾಹುಬಲಿ 2’ ಬಳಿಕ ಪ್ರಭಾಸ್​ ಅವರ ಬೇರೆ ಯಾವುದೇ ಸಿನಿಮಾ ಗೆದ್ದಿಲ್ಲ. ‘ಸಾಹೋ’, ‘ರಾಧೆ ಶ್ಯಾಮ್​’, ‘ಆದಿಪುರುಷ್​’ ಸಿನಿಮಾಗಳ ಮೂಲಕ ಅವರು ಬ್ಯಾಕ್​ ಟು ಬ್ಯಾಕ್​ ಸೋಲು ಕಂಡಿದ್ದಾರೆ. ಮುಂದಿನ ಸಿನಿಮಾಗಳಾದರೂ ಗೆಲ್ಲಲಿ ಎಂದು ಅವರ ಫ್ಯಾನ್ಸ್​ ಹಾರೈಸುತ್ತಿದ್ದಾರೆ. ಸೈನ್ಸ್​ ಫಿಕ್ಷನ್​ ಪ್ರಕಾರದಲ್ಲಿ ‘ಪ್ರಾಜೆಕ್ಟ್​ ಕೆ’ ಸಿನಿಮಾ ಮೂಡಿಬರುತ್ತಿದೆ. ಆ ಸಿನಿಮಾಗಾಗಿ ಫ್ಯಾನ್ಸ್​ ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ