AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯಾದ ಅದಿತಿ ಪ್ರಭುದೇವ; ಹೆಣ್ಣು ಮಗುವಿನ ಫೋಟೋ ಹಂಚಿಕೊಂಡ ನಟಿ

ನಟಿ ಅದಿತಿ ಪ್ರಭುದೇವ ಅವರಿಗೆ ಏಪ್ರಿಲ್​ 4ರಂದು ಹೆಣ್ಣು ಮಗು ಜನಿಸಿದೆ. ‘ನಮ್ಮನೆ ಮಹಾಲಕ್ಷ್ಮಿ’ ಎನ್ನುವ ಕ್ಯಾಪ್ಷನ್​ನೊಂದಿಗೆ ಅವರು ಮಗುವಿನ ಫೋಟೋ ಹಂಚಿಕೊಂಡಿದ್ದಾರೆ. ಅವರ ಬದುಕಿನಲ್ಲೀಗ ಹೊಸ ಅಧ್ಯಾಯ ಆರಂಭ ಆಗಿದೆ. ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ಅದಿತಿ ಪ್ರಭುದೇವ-ಯಶಸ್ ಪಾಟ್ಲಾ​ ದಂಪತಿಗೆ ಅಭಿನಂದನೆ ತಿಳಿಸುತ್ತಿದ್ದಾರೆ.

ತಾಯಿಯಾದ ಅದಿತಿ ಪ್ರಭುದೇವ; ಹೆಣ್ಣು ಮಗುವಿನ ಫೋಟೋ ಹಂಚಿಕೊಂಡ ನಟಿ
ಅದಿತಿ ಪ್ರಭುದೇವ
ಮದನ್​ ಕುಮಾರ್​
|

Updated on: Apr 09, 2024 | 3:36 PM

Share

ಕನ್ನಡ ಚಿತ್ರರಂಗದ ಖ್ಯಾತ ನಟಿ ಅದಿತಿ ಪ್ರಭುದೇವ (Aditi Prabhudeva) ಅವರು ತಾಯಿಯಾಗಿದ್ದಾರೆ. ಹೆಣ್ಣು ಮಗುವಿಗೆ ಅವರು ಜನ್ಮ ನೀಡಿದ್ದಾರೆ. ಈ ವಿಚಾರವನ್ನು ಸ್ವತಃ ಅತಿದಿ ಪ್ರಭುದೇವ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಹೆಣ್ಣು ಮಗುವಿನ (Baby Girl) ಫೋಟೋವನ್ನು ಅದಿತಿ ಅವರು ಶೇರ್​ ಮಾಡಿಕೊಂಡಿದ್ದಾರೆ. ಆದರೆ ಇದರಲ್ಲಿ ಅವರು ಮಗುವಿನ ಮುಖ ತೋರಿಸಿಲ್ಲ. ಯಶಸ್​ ಪಾಟ್ಲಾ (Yashas Patla) ಹಾಗೂ ಅದಿತಿ ಪ್ರಭುದೇವ ದಂಪತಿಗೆ ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ಶುಭಾಶಯ ಕೋರುತ್ತಿದ್ದಾರೆ.

2022ರ ನವೆಂಬರ್​ನಲ್ಲಿ ಅದಿತಿ ಪ್ರಭುದೇವ ಹಾಗೂ ಯಶಸ್​ ಪಾಟ್ಲಾ ಅವರ ಮದುವೆ ನೆರವೇರಿತ್ತು. 2024ರ ಜನವರಿ 1ರಂದು ಅದಿತಿ ಪ್ರಭುದೇವ ಅವರು ಸಿಹಿ ಸುದ್ದಿ ನೀಡಿದ್ದರು. ತಾವು ತಾಯಿ ಆಗುತ್ತಿರುವ ವಿಷಯವನ್ನು ಅವರು ಬಹಿರಂಗ ಪಡಿಸಿದ್ದರು. ಈಗ ಅವರು ಹೆಣ್ಣು ಮಗುವಿನ ಆಗಮನದಿಂದ ಖುಷಿ ಆಗಿದ್ದಾರೆ. ಅವರ ಬಾಳಿನಲ್ಲಿ ಹೊಸ ಅಧ್ಯಾಯ ಪ್ರಾರಂಭ ಆದಂತಾಗಿದೆ.

ಇದನ್ನೂ ಓದಿ: ಕೊನೆಗೂ ಈಡೇರಿದ ನನ್ನ ಪುಟ್ಟ ಆಸೆ ಎಂದ ಅದಿತಿ

ಅದಿತಿ ಪ್ರಭುದೇವ ಅವರಿಗೆ ಏಪ್ರಿಲ್​ 4ರಂದು ಹೆಣ್ಣು ಮಗು ಜನಿಸಿದೆ. ‘4.4.2024 ನಮ್ಮನೆ ಮಹಾಲಕ್ಷ್ಮಿ. ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು’ ಎಂಬ ಕ್ಯಾಪ್ಷನ್​ನೊಂದಿಗೆ ಅದಿತಿ ಪ್ರಭುದೇವ ಅವರು ಖುಷಿಯ ಸಮಾಚಾರ ತಿಳಿಸಿದ್ದಾರೆ. ‘ನನ್ನ ಜೀವದ ಗೆಳತಿ ಅದಿತಿ. ನಿನ್ನ ಹಾಗೆಯೇ ನಮ್ಮ ಮಗಳು’ ಎಂದು ಯಶಸ್​ ಪಾಟ್ಲಾ ಅವರು ಈ ಪೋಸ್ಟ್​ಗೆ ಕಮೆಂಟ್​ ಮಾಡಿದ್ದಾರೆ.

ಅದಿತಿ ಪ್ರಭುದೇವ ಅವರು ಚಿತ್ರರಂಗಕ್ಕೆ ಕಾಲಿಟ್ಟು ಕೆಲವು ವರ್ಷಗಳು ಕಳೆದಿವೆ. 2017ರಲ್ಲಿ ಬಂದ ‘ಧೈರ್ಯ’ ಅವರು ನಟಿಸಿದ ಮೊದಲ ಸಿನಿಮಾ. ಆ ಬಳಿಕ ಸಾಲು ಸಾಲು ಸಿನಿಮಾಗಳಲ್ಲಿ ಅವರು ನಟಿಸಿದರು. ಇತ್ತೀಚೆಗೆ ಅವರು ಸಂಸಾರದ ಕಡೆಗೆ ಹೆಚ್ಚು ಗಮನ ಹರಿಸಿದ್ದಾರೆ. ಈಗ ಮಗುವಿನ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಮತ್ತೆ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಲಿ ಎಂದು ಅಭಿಮಾನಿಗಳು ಬಯಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..