AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಟ್ಟಾಗಿ ಎಂಗೇಜ್​ಮೆಂಟ್​ ಮಾಡಿಕೊಂಡ ಅದಿತಿ ಪ್ರಭುದೇವ?; ಕನಸು ನನಸಾಯ್ತು ಎಂದ ನಟಿ

Aditi Prabhudeva: ಅದಿತಿ ಹೊಸ ಫೋಟೋ ಪೋಸ್ಟ್​ ಮಾಡಿದ್ದಾರೆ. ಈ ಫೋಟೋದಲ್ಲಿ ಉಂಗುರ ಹೈಲೈಟ್​ ಆಗಿದೆ. ಅವರಿಗೆ ಎಲ್ಲರೂ ಶುಭಾಶಯ ಹೇಳುತ್ತಿದ್ದಾರೆ.

ಗುಟ್ಟಾಗಿ ಎಂಗೇಜ್​ಮೆಂಟ್​ ಮಾಡಿಕೊಂಡ ಅದಿತಿ ಪ್ರಭುದೇವ?; ಕನಸು ನನಸಾಯ್ತು ಎಂದ ನಟಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Dec 28, 2021 | 5:58 PM

ನಟಿ ಅದಿತಿ ಪ್ರಭುದೇವ ಅವರು ಸ್ಯಾಂಡಲ್​ವುಡ್​ನಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಕಿರುತೆರೆಯಿಂದ ಬಣ್ಣದ ಬದುಕು ಆರಂಭಿಸಿದ ಅವರು ಈಗ ಹಿರಿತೆರೆಯಲ್ಲಿ ಮಿಂಚುತ್ತಿದ್ದಾರೆ. ಈಗ ಅವರ ಕಡೆಯಿಂದ ಗುಡ್​ನ್ಯೂಸ್​ ಸಿಕ್ಕಿದೆ! ಅವರು ಸೈಲೆಂಟ್​ ಆಗಿ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಬೆನ್ನಲ್ಲೇ ಅವರು ಹುಡಗನೊಬ್ಬನ ಜತೆ ಇರುವ ಫೋಟೋ ಹಾಕಿದ್ದಾರೆ. ಈ ಫೋಟೋದಲ್ಲಿ ಉಂಗುರ ಹೈಲೈಟ್​ ಆಗಿದೆ. ಅವರಿಗೆ ಎಲ್ಲರೂ ಶುಭಾಶಯ ಹೇಳುತ್ತಿದ್ದಾರೆ. ನಿಜಕ್ಕೂ ಅವರು ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರಾ ಎನ್ನುವ ಪ್ರಶ್ನೆಗೆ ಅವರ ಕಡೆಯಿಂದಲೇ ಉತ್ತರ ಸಿಗಬೇಕಿದೆ.

ಭಾನುವಾರ (ಡಿಸೆಂಬರ್​ 26) ಅದಿತಿ ಅವರು ಹೊಳೆನರಸೀಪುರದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕಾರ್ಯಕ್ರಮಕ್ಕೆ ಕೇವಲ ಆಪ್ತರಿಗೆ ಅಷ್ಟೇ ಆಹ್ವಾನ ಇತ್ತು ಎಂದು ಮೂಲಗಳು ತಿಳಿಸಿವೆ. ಫೋಟೋದಲ್ಲಿರುವ ಹುಡುಗ ಉದ್ಯಮಿ ಆಗಿದ್ದು, ದಾವಣಗೆರೆ ಮೂಲದವರು ಎಂದು ತಿಳಿದು ಬಂದಿದೆ.

ಇನ್​ಸ್ಟಾಗ್ರಾಮ್​ನಲ್ಲಿ ಫೋಟೋ ಪೋಸ್ಟ್​ ಮಾಡಿರುವ ಅದಿತಿ, ‘ಒಂದು ಕನಸಿನಂತೆ ಈ ಕನಸು ನನಸಾಯಿತು’ ಎಂದು ಬರೆದುಕೊಂಡಿದ್ದಾರೆ. ಈ ಫೋಟೋದಲ್ಲಿ ಅದಿತಿ ಕೈಯಲ್ಲಿರುವ ಉಂಗುರ ಹೈಲೈಟ್​ ಆಗಿದೆ. ಸದ್ಯ, ಈ ವಿಚಾರದ ಬಗ್ಗೆ ಅದಿತಿ ಮೌನ ವಹಿಸಿದ್ದಾರೆ. ಅವರ ಕಡೆಯಿಂದ ಈ ಬಗ್ಗೆ ಪ್ರತಿಕ್ರಿಯೆ ಬರಬೇಕಿದೆ.

ಇತ್ತೀಚೆಗೆ ಅದಿತಿ ನಟನೆಯ ‘ಆನ’ ಸಿನಿಮಾ ತೆರೆಗೆ ಬಂದಿತ್ತು. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಅಲ್ಲದೆ, ದೊಡ್ಡದೊಡ್ಡ ಸಿನಿಮಾಗಳು ಕೂಡ ಇದೇ ಸಂದರ್ಭದಲ್ಲಿ ರಿಲೀಸ್​ ಆಗಿದ್ದರಿಂದ ಈ ಚಿತ್ರಕ್ಕೆ ಹೆಚ್ಚು ಚಿತ್ರಮಂದಿರ ಸಿಕ್ಕಿರಲಿಲ್ಲ.

ಬೆಳಗಾವಿಯಲ್ಲಿ ಕನ್ನಡ ಬಾವುಟಕ್ಕೆ ಅವಮಾನ ಆದ ಬಗ್ಗೆ ಅದಿತಿ ಮಾತನಾಡಿದ್ದರು. ‘ಕನ್ನಡ ಭಾಷೆ ಮತ್ತು ಧ್ವಜಕ್ಕೆ ಅವಮಾನ ಮಾಡಿದ್ರೆ ನಮ್ಮ ತಾಯಿಗೆ ಅವಮಾನ ಆದಂತೆ. ಸಾಮಾನ್ಯವಾಗಿ ನಮ್ಮ ತಾಯಿಗೆ ಯಾರಾದ್ರೂ ಸ್ವಲ್ಪ ಅಗೌರವ ತೋರಿಸಿದ್ದರೂ ನಾವು ಸಾಯ್ಸೋಕೂ ಹೇಸಲ್ಲ. ಅಷ್ಟು ಕೋಪ ಬರುತ್ತದೆ. ಅಂಥದ್ರಲ್ಲಿ ಕೋಟ್ಯಂತರ ಜನರ ತಾಯಿ ಕನ್ನಡಾಂಬೆಗೆ ಅವಮಾನ ಆಗಿದ್ದರೂ ನಾವು ಸುಮ್ಮನೆ ಇದ್ದೀವಿ ಅಂದ್ರೆ ನಾವು ಎಂಥವರು? ಅ ಪದ ಉಪಯೋಗಿಸೋಕೆ ನನಗೆ ಇಷ್ಟ ಇಲ್ಲ. ನಾವು ಅಂಥವರು ಅಂತ ಸಾಬೀತು ಮಾಡೋದು ಬೇಡ. ಎಲ್ಲರೂ ಒಟ್ಟಾಗಿ ಶಾಂತಿಯುತವಾಗಿ, ಸೂಕ್ತ ಮಾರ್ಗದಲ್ಲಿ ಇದಕ್ಕೆಲ್ಲ ಅಂತ್ಯ ಹಾಡಬೇಕು. ಒಂದು ದಿನ ಬಂದ್​ ಮಾಡಿ ಸುಮ್ಮನಾಗುವುದಲ್ಲ’ ಎಂದು ಅದಿತಿ ಪ್ರಭುದೇವ ಹೇಳಿದ್ದರು.

ಇದನ್ನೂ ಓದಿ:  ಆ ಸಿನಿಮಾ ನೋಡದೆಯೂ ಅದಿತಿಗೆ ಫ್ಯಾನ್​ ಆದ ಮೇಘನಾ ರಾಜ್ ಸರ್ಜಾ​; ಯಾವುದು ಆ ಚಿತ್ರ?

ಅದಿತಿ ಪ್ರಭುದೇವ ನಮ್ ಇಂಡಸ್ಟ್ರಿಯ ಮಹಾಲಕ್ಷ್ಮೀ ಎಂದ ‘ದುನಿಯಾ’ ವಿಜಯ್​

Published On - 4:44 pm, Mon, 27 December 21

Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್