AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಟ್ಟಾಗಿ ಎಂಗೇಜ್​ಮೆಂಟ್​ ಮಾಡಿಕೊಂಡ ಅದಿತಿ ಪ್ರಭುದೇವ?; ಕನಸು ನನಸಾಯ್ತು ಎಂದ ನಟಿ

Aditi Prabhudeva: ಅದಿತಿ ಹೊಸ ಫೋಟೋ ಪೋಸ್ಟ್​ ಮಾಡಿದ್ದಾರೆ. ಈ ಫೋಟೋದಲ್ಲಿ ಉಂಗುರ ಹೈಲೈಟ್​ ಆಗಿದೆ. ಅವರಿಗೆ ಎಲ್ಲರೂ ಶುಭಾಶಯ ಹೇಳುತ್ತಿದ್ದಾರೆ.

ಗುಟ್ಟಾಗಿ ಎಂಗೇಜ್​ಮೆಂಟ್​ ಮಾಡಿಕೊಂಡ ಅದಿತಿ ಪ್ರಭುದೇವ?; ಕನಸು ನನಸಾಯ್ತು ಎಂದ ನಟಿ
TV9 Web
| Edited By: |

Updated on:Dec 28, 2021 | 5:58 PM

Share

ನಟಿ ಅದಿತಿ ಪ್ರಭುದೇವ ಅವರು ಸ್ಯಾಂಡಲ್​ವುಡ್​ನಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಕಿರುತೆರೆಯಿಂದ ಬಣ್ಣದ ಬದುಕು ಆರಂಭಿಸಿದ ಅವರು ಈಗ ಹಿರಿತೆರೆಯಲ್ಲಿ ಮಿಂಚುತ್ತಿದ್ದಾರೆ. ಈಗ ಅವರ ಕಡೆಯಿಂದ ಗುಡ್​ನ್ಯೂಸ್​ ಸಿಕ್ಕಿದೆ! ಅವರು ಸೈಲೆಂಟ್​ ಆಗಿ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಬೆನ್ನಲ್ಲೇ ಅವರು ಹುಡಗನೊಬ್ಬನ ಜತೆ ಇರುವ ಫೋಟೋ ಹಾಕಿದ್ದಾರೆ. ಈ ಫೋಟೋದಲ್ಲಿ ಉಂಗುರ ಹೈಲೈಟ್​ ಆಗಿದೆ. ಅವರಿಗೆ ಎಲ್ಲರೂ ಶುಭಾಶಯ ಹೇಳುತ್ತಿದ್ದಾರೆ. ನಿಜಕ್ಕೂ ಅವರು ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರಾ ಎನ್ನುವ ಪ್ರಶ್ನೆಗೆ ಅವರ ಕಡೆಯಿಂದಲೇ ಉತ್ತರ ಸಿಗಬೇಕಿದೆ.

ಭಾನುವಾರ (ಡಿಸೆಂಬರ್​ 26) ಅದಿತಿ ಅವರು ಹೊಳೆನರಸೀಪುರದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕಾರ್ಯಕ್ರಮಕ್ಕೆ ಕೇವಲ ಆಪ್ತರಿಗೆ ಅಷ್ಟೇ ಆಹ್ವಾನ ಇತ್ತು ಎಂದು ಮೂಲಗಳು ತಿಳಿಸಿವೆ. ಫೋಟೋದಲ್ಲಿರುವ ಹುಡುಗ ಉದ್ಯಮಿ ಆಗಿದ್ದು, ದಾವಣಗೆರೆ ಮೂಲದವರು ಎಂದು ತಿಳಿದು ಬಂದಿದೆ.

ಇನ್​ಸ್ಟಾಗ್ರಾಮ್​ನಲ್ಲಿ ಫೋಟೋ ಪೋಸ್ಟ್​ ಮಾಡಿರುವ ಅದಿತಿ, ‘ಒಂದು ಕನಸಿನಂತೆ ಈ ಕನಸು ನನಸಾಯಿತು’ ಎಂದು ಬರೆದುಕೊಂಡಿದ್ದಾರೆ. ಈ ಫೋಟೋದಲ್ಲಿ ಅದಿತಿ ಕೈಯಲ್ಲಿರುವ ಉಂಗುರ ಹೈಲೈಟ್​ ಆಗಿದೆ. ಸದ್ಯ, ಈ ವಿಚಾರದ ಬಗ್ಗೆ ಅದಿತಿ ಮೌನ ವಹಿಸಿದ್ದಾರೆ. ಅವರ ಕಡೆಯಿಂದ ಈ ಬಗ್ಗೆ ಪ್ರತಿಕ್ರಿಯೆ ಬರಬೇಕಿದೆ.

ಇತ್ತೀಚೆಗೆ ಅದಿತಿ ನಟನೆಯ ‘ಆನ’ ಸಿನಿಮಾ ತೆರೆಗೆ ಬಂದಿತ್ತು. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಅಲ್ಲದೆ, ದೊಡ್ಡದೊಡ್ಡ ಸಿನಿಮಾಗಳು ಕೂಡ ಇದೇ ಸಂದರ್ಭದಲ್ಲಿ ರಿಲೀಸ್​ ಆಗಿದ್ದರಿಂದ ಈ ಚಿತ್ರಕ್ಕೆ ಹೆಚ್ಚು ಚಿತ್ರಮಂದಿರ ಸಿಕ್ಕಿರಲಿಲ್ಲ.

ಬೆಳಗಾವಿಯಲ್ಲಿ ಕನ್ನಡ ಬಾವುಟಕ್ಕೆ ಅವಮಾನ ಆದ ಬಗ್ಗೆ ಅದಿತಿ ಮಾತನಾಡಿದ್ದರು. ‘ಕನ್ನಡ ಭಾಷೆ ಮತ್ತು ಧ್ವಜಕ್ಕೆ ಅವಮಾನ ಮಾಡಿದ್ರೆ ನಮ್ಮ ತಾಯಿಗೆ ಅವಮಾನ ಆದಂತೆ. ಸಾಮಾನ್ಯವಾಗಿ ನಮ್ಮ ತಾಯಿಗೆ ಯಾರಾದ್ರೂ ಸ್ವಲ್ಪ ಅಗೌರವ ತೋರಿಸಿದ್ದರೂ ನಾವು ಸಾಯ್ಸೋಕೂ ಹೇಸಲ್ಲ. ಅಷ್ಟು ಕೋಪ ಬರುತ್ತದೆ. ಅಂಥದ್ರಲ್ಲಿ ಕೋಟ್ಯಂತರ ಜನರ ತಾಯಿ ಕನ್ನಡಾಂಬೆಗೆ ಅವಮಾನ ಆಗಿದ್ದರೂ ನಾವು ಸುಮ್ಮನೆ ಇದ್ದೀವಿ ಅಂದ್ರೆ ನಾವು ಎಂಥವರು? ಅ ಪದ ಉಪಯೋಗಿಸೋಕೆ ನನಗೆ ಇಷ್ಟ ಇಲ್ಲ. ನಾವು ಅಂಥವರು ಅಂತ ಸಾಬೀತು ಮಾಡೋದು ಬೇಡ. ಎಲ್ಲರೂ ಒಟ್ಟಾಗಿ ಶಾಂತಿಯುತವಾಗಿ, ಸೂಕ್ತ ಮಾರ್ಗದಲ್ಲಿ ಇದಕ್ಕೆಲ್ಲ ಅಂತ್ಯ ಹಾಡಬೇಕು. ಒಂದು ದಿನ ಬಂದ್​ ಮಾಡಿ ಸುಮ್ಮನಾಗುವುದಲ್ಲ’ ಎಂದು ಅದಿತಿ ಪ್ರಭುದೇವ ಹೇಳಿದ್ದರು.

ಇದನ್ನೂ ಓದಿ:  ಆ ಸಿನಿಮಾ ನೋಡದೆಯೂ ಅದಿತಿಗೆ ಫ್ಯಾನ್​ ಆದ ಮೇಘನಾ ರಾಜ್ ಸರ್ಜಾ​; ಯಾವುದು ಆ ಚಿತ್ರ?

ಅದಿತಿ ಪ್ರಭುದೇವ ನಮ್ ಇಂಡಸ್ಟ್ರಿಯ ಮಹಾಲಕ್ಷ್ಮೀ ಎಂದ ‘ದುನಿಯಾ’ ವಿಜಯ್​

Published On - 4:44 pm, Mon, 27 December 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ