AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾದಾಡಿ’ ಸಿನಿಮಾದ ಐಟಂ ಸಾಂಗ್​ನಲ್ಲಿ ಆದಿತ್ಯ ಶಶಿಕುಮಾರ್, ಸೋನಿ ಸಖತ್ ಡ್ಯಾನ್ಸ್

ಥ್ರಿಲ್ಲರ್​ ಅಂಶಗಳನ್ನು ಹೊಂದಿರುವ ‘ಕಾದಾಡಿ’ ಸಿನಿಮಾದಲ್ಲಿ ಶಶಿಕುಮಾರ್​ ಪುತ್ರ ಆದಿತ್ಯ ಮುಖ್ಯ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಹೊಸ ಹಾಡು ಬಿಡುಗಡೆ ಆಗಿದೆ. ಈ ಐಟಂ ಸಾಂಗ್​ನಲ್ಲಿ ಆದಿತ್ಯ ಶಶಿಕುಮಾರ್​ ಜೊತೆ ಬಾಂಬಿ ನಟಿ ಸೋನಿ ಸಖತ್​ ಆಗಿ ಹೆಜ್ಜೆ ಹಾಕಿದ್ದಾರೆ. ‘ಆದಿತ್ಯ ಮ್ಯೂಸಿಕ್​’ ಮೂಲಕ ಈ ಹಾಡು ಬಿಡುಗಡೆ ಆಗಿದ್ದು, ಅನನ್ಯಾ ಭಟ್​ ಧ್ವನಿ ನೀಡಿದ್ದಾರೆ.

‘ಕಾದಾಡಿ’ ಸಿನಿಮಾದ ಐಟಂ ಸಾಂಗ್​ನಲ್ಲಿ ಆದಿತ್ಯ ಶಶಿಕುಮಾರ್, ಸೋನಿ ಸಖತ್ ಡ್ಯಾನ್ಸ್
ಆದಿತ್ಯ ಶಶಿಕುಮಾರ್​, ಸೋನಿ
ಮದನ್​ ಕುಮಾರ್​
|

Updated on: Jun 12, 2024 | 9:09 PM

Share

ಕನ್ನಡ ಚಿತ್ರರಂಗದಲ್ಲಿ ‘ಸುಪ್ರೀಂ ಹೀರೋ’ ಎಂದು ಗುರುತಿಸಿಕೊಂಡವರು ಶಶಿಕುಮಾರ್. ಈಗ ಶಶಿಕುಮಾರ್ (Shashikumar)​ ಪುತ್ರ ಅಕ್ಷಿತ್ ಶಶಿಕುಮಾರ್ ಕೂಡ ಹೀರೋ ಆಗಿ ಸಕ್ರಿಯರಾಗಿದ್ದಾರೆ. ಅಲ್ಲದೇ ಆದಿತ್ಯ ಶಶಿಕುಮಾರ್ (Aditya Shashikumar) ಎಂಬ ಹೆಸರಿನಿಂದ ಅವರು ಸಿನಿಜರ್ನಿ ಮುಂದುವರಿಸಿದ್ದಾರೆ. ಅದಿತ್ಯ ಶಶಿಕುಮಾರ್​ ಅವರು ಈಗ ‘ಕಾದಾಡಿ’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ವಿಶೇಷ ಏನೆಂದರೆ ಬಹುಭಾಷೆಯಲ್ಲಿ ಈ ಸಿನಿಮಾ ಬರಲಿದೆ. ಕನ್ನಡ, ಹಿಂದಿ, ತೆಲುಗು, ತಮಿಳು ಭಾಷೆಗಳಲ್ಲಿ ಈ ಸಿನಿಮಾ ಸಿದ್ದವಾಗಿದೆ. ಈ ಸಿನಿಮಾಗೆ ಸಖತ್​ ಪ್ರಚಾರ ನೀಡಲಾಗುತ್ತಿದೆ. ಇತ್ತೀಚೆಗಷ್ಟೇ ‘ಕಾದಾಡಿ’ (Kaadaadi) ಸಿನಿಮಾದ ಐಟಂ ಸಾಂಗ್​ನ ಲಿರಿಕಲ್ ವಿಡಿಯೋ ರಿಲೀಸ್​​ ಮಾಡಲಾಗಿದೆ. ಈ ಸಿನಿಮಾಗೆ ಸತೀಶ್ ಮಾಲೆಂಪಾಟಿ ನಿರ್ದೇಶನ ಮಾಡಿದ್ದಾರೆ.

‘ಅರುಣಂ ಫಿಲ್ಮ್ಸ್​’ ಮೂಲಕ ‘ಕಾದಾಡಿ’ ಸಿನಿಮಾವನ್ನು ನಿರ್ಮಾಣ ಮಾಡಲಾಗಿದೆ. ಕೃಷ್ಣ ಸಾಹಿತ್ಯ ಬರೆದಿರುವ ‘ನೂರು ಪುಟದ ಜೀವನ.. ಒಂದು ಏಳೆಯ ಕಾಗದ.. ಬೇಕಾದ್ದು ಬರೆದುಕೋ, ನಿಂದೇ ಜೀವನ. ಸರಿ-ತಪ್ಪು ತಿಳಿದುಕೋ.. ತಿಳಿದ ಮೇಲೆ ಮರೆತು ತಪ್ಪು ಮಾಡಿದರೆ ಜನ್ಮ ಪಾವನ.. ಒಂದೇ ಒಂದೇ ಚಾನ್ಸ್​ ಗುರು ಮತ್ತೆ ಮತ್ತೆ ಬಾರದು..’ ಎಂದು ಶುರುವಾಗುವ ಈ ಹಾಡಿಗೆ ಅನನ್ಯಾ ಭಟ್ ಧ್ವನಿ ನೀಡಿದ್ದಾರೆ.

ಇದನ್ನೂ ಓದಿ: ಅಕ್ಷತಾ ಪಾಂಡವಪುರ ನಟನೆಯ ಹೊಸ ಸಿನಿಮಾ ‘ಕೌಮುದಿ’; ಸರಳವಾಗಿ ನಡೆಯಿತು ಮುಹೂರ್ತ

ಈ ಹಾಡಿನಲ್ಲಿ ಆದಿತ್ಯ ಶಶಿಕುಮಾರ್​ ಜೊತೆ ಬಾಂಬೆ ಬೆಡಗಿ ಸೋನಿ ಚೇರಿಸ್ಟ ಬಿಂದಾಸ್​ ಆಗಿ ಡ್ಯಾನ್ಸ್​ ಮಾಡಿದ್ದಾರೆ. ಸಖತ್​ ಕಲರ್​ಫುಲ್​ ಆದಂತಹ ಸೆಟ್​ನಲ್ಲಿ ಶೂಟಿಂಗ್​ ಮಾಡಲಾಗಿದೆ. ‘ಕಾದಾಡಿ’ ಸಿನಿಮಾದ ಆರು ಹಾಡುಗಳಿಗೆ ಭೀಮ್ಸ್ ಸಿಸಿರೊಲಿಯೋ ಸಂಗೀತ ನೀಡಿದ್ದಾರೆ. ಈ ಸಿನಿಮಾದಲ್ಲಿ ಆದಿತ್ಯ ಶಶಿಕುಮಾರ್​ ಅವರೊಂದಿಗೆ ಲಾವಣ್ಯ ಸಾಹುಕಾರ, ಚಾಂದಿನಿ ತಮಿಳರಸನ್, ಪೋಸಾನಿ, ಮಾರಿಮುತ್ತು, ರವಿಕಾಳೆ, ಪ್ರೇಮ್‌ ಮನೋಹರ್, ಶ್ರವಣ್‌ ರಾಘವೇಂದ್ರ ಮುಂತಾದ ಕಲಾವಿದರು ಅಭಿನಯಿಸಿದ್ದಾರೆ.

ಡಿ. ಯೋಗಿ ಪ್ರಸಾದ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಅರ್ಜುನ್‌ ಸೂರಿಸೆಟ್ಟಿ ಅವರ ಕಲಾ ನಿರ್ದೇಶನ ಈ ಸಿನಿಮಾಗೆ ಇದೆ. ಪ್ರಕಾಶ್‌ ತೋಟ ಅವರು ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ರಾಜ್‌ ಪಿಡಿ, ರಾಜ್‌ಕೃಷ್ಣ ಅವರು ನೃತ್ಯ ನಿರ್ದೇಶನ ಮಾಡಿದ್ದಾರೆ. ಚಿಕ್ಕಮಗಳೂರು, ಗೋವಾ, ಹೈದರಾಬಾದ್, ಚೆನ್ನೈ ಮುಂತಾದ ಕಡೆ ಶೂಟಿಂಗ್​ ಮಾಡಲಾಗಿದೆ. ರಿಲೀಸ್​ ಡೇಟ್​ ಬಗ್ಗೆ ಸದ್ಯದಲ್ಲೇ ಮಾಹಿತಿ ಹೊರಬೀಳಲಿದೆ. ಥ್ರಿಲ್ಲರ್​ ಅಂಶಗಳನ್ನು ಒಳಗೊಂಡಿರುವ ‘ಕಾದಾಡಿ’ ಚಿತ್ರದಲ್ಲಿ ಶಶಿಕುಮಾರ್​ ಪುತ್ರ ಆದಿತ್ಯ ಮುಖ್ಯ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಹೊಸ ಹಾಡು ‘ಆದಿತ್ಯ ಮ್ಯೂಸಿಕ್​’ ಮೂಲಕ ಬಿಡುಗಡೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್
ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್
‘ದರ್ಶನ’ ಸಿನಿಮಾ ಮುಹೂರ್ತ: ತಬಲಾ ನಾಣಿ ಮಾತಿಗೆ ನಕ್ಕು ಸುಸ್ತಾದ ಜನ
‘ದರ್ಶನ’ ಸಿನಿಮಾ ಮುಹೂರ್ತ: ತಬಲಾ ನಾಣಿ ಮಾತಿಗೆ ನಕ್ಕು ಸುಸ್ತಾದ ಜನ