AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾದಾಡಿ’ ಸಿನಿಮಾದ ಐಟಂ ಸಾಂಗ್​ನಲ್ಲಿ ಆದಿತ್ಯ ಶಶಿಕುಮಾರ್, ಸೋನಿ ಸಖತ್ ಡ್ಯಾನ್ಸ್

ಥ್ರಿಲ್ಲರ್​ ಅಂಶಗಳನ್ನು ಹೊಂದಿರುವ ‘ಕಾದಾಡಿ’ ಸಿನಿಮಾದಲ್ಲಿ ಶಶಿಕುಮಾರ್​ ಪುತ್ರ ಆದಿತ್ಯ ಮುಖ್ಯ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಹೊಸ ಹಾಡು ಬಿಡುಗಡೆ ಆಗಿದೆ. ಈ ಐಟಂ ಸಾಂಗ್​ನಲ್ಲಿ ಆದಿತ್ಯ ಶಶಿಕುಮಾರ್​ ಜೊತೆ ಬಾಂಬಿ ನಟಿ ಸೋನಿ ಸಖತ್​ ಆಗಿ ಹೆಜ್ಜೆ ಹಾಕಿದ್ದಾರೆ. ‘ಆದಿತ್ಯ ಮ್ಯೂಸಿಕ್​’ ಮೂಲಕ ಈ ಹಾಡು ಬಿಡುಗಡೆ ಆಗಿದ್ದು, ಅನನ್ಯಾ ಭಟ್​ ಧ್ವನಿ ನೀಡಿದ್ದಾರೆ.

‘ಕಾದಾಡಿ’ ಸಿನಿಮಾದ ಐಟಂ ಸಾಂಗ್​ನಲ್ಲಿ ಆದಿತ್ಯ ಶಶಿಕುಮಾರ್, ಸೋನಿ ಸಖತ್ ಡ್ಯಾನ್ಸ್
ಆದಿತ್ಯ ಶಶಿಕುಮಾರ್​, ಸೋನಿ
ಮದನ್​ ಕುಮಾರ್​
|

Updated on: Jun 12, 2024 | 9:09 PM

Share

ಕನ್ನಡ ಚಿತ್ರರಂಗದಲ್ಲಿ ‘ಸುಪ್ರೀಂ ಹೀರೋ’ ಎಂದು ಗುರುತಿಸಿಕೊಂಡವರು ಶಶಿಕುಮಾರ್. ಈಗ ಶಶಿಕುಮಾರ್ (Shashikumar)​ ಪುತ್ರ ಅಕ್ಷಿತ್ ಶಶಿಕುಮಾರ್ ಕೂಡ ಹೀರೋ ಆಗಿ ಸಕ್ರಿಯರಾಗಿದ್ದಾರೆ. ಅಲ್ಲದೇ ಆದಿತ್ಯ ಶಶಿಕುಮಾರ್ (Aditya Shashikumar) ಎಂಬ ಹೆಸರಿನಿಂದ ಅವರು ಸಿನಿಜರ್ನಿ ಮುಂದುವರಿಸಿದ್ದಾರೆ. ಅದಿತ್ಯ ಶಶಿಕುಮಾರ್​ ಅವರು ಈಗ ‘ಕಾದಾಡಿ’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ವಿಶೇಷ ಏನೆಂದರೆ ಬಹುಭಾಷೆಯಲ್ಲಿ ಈ ಸಿನಿಮಾ ಬರಲಿದೆ. ಕನ್ನಡ, ಹಿಂದಿ, ತೆಲುಗು, ತಮಿಳು ಭಾಷೆಗಳಲ್ಲಿ ಈ ಸಿನಿಮಾ ಸಿದ್ದವಾಗಿದೆ. ಈ ಸಿನಿಮಾಗೆ ಸಖತ್​ ಪ್ರಚಾರ ನೀಡಲಾಗುತ್ತಿದೆ. ಇತ್ತೀಚೆಗಷ್ಟೇ ‘ಕಾದಾಡಿ’ (Kaadaadi) ಸಿನಿಮಾದ ಐಟಂ ಸಾಂಗ್​ನ ಲಿರಿಕಲ್ ವಿಡಿಯೋ ರಿಲೀಸ್​​ ಮಾಡಲಾಗಿದೆ. ಈ ಸಿನಿಮಾಗೆ ಸತೀಶ್ ಮಾಲೆಂಪಾಟಿ ನಿರ್ದೇಶನ ಮಾಡಿದ್ದಾರೆ.

‘ಅರುಣಂ ಫಿಲ್ಮ್ಸ್​’ ಮೂಲಕ ‘ಕಾದಾಡಿ’ ಸಿನಿಮಾವನ್ನು ನಿರ್ಮಾಣ ಮಾಡಲಾಗಿದೆ. ಕೃಷ್ಣ ಸಾಹಿತ್ಯ ಬರೆದಿರುವ ‘ನೂರು ಪುಟದ ಜೀವನ.. ಒಂದು ಏಳೆಯ ಕಾಗದ.. ಬೇಕಾದ್ದು ಬರೆದುಕೋ, ನಿಂದೇ ಜೀವನ. ಸರಿ-ತಪ್ಪು ತಿಳಿದುಕೋ.. ತಿಳಿದ ಮೇಲೆ ಮರೆತು ತಪ್ಪು ಮಾಡಿದರೆ ಜನ್ಮ ಪಾವನ.. ಒಂದೇ ಒಂದೇ ಚಾನ್ಸ್​ ಗುರು ಮತ್ತೆ ಮತ್ತೆ ಬಾರದು..’ ಎಂದು ಶುರುವಾಗುವ ಈ ಹಾಡಿಗೆ ಅನನ್ಯಾ ಭಟ್ ಧ್ವನಿ ನೀಡಿದ್ದಾರೆ.

ಇದನ್ನೂ ಓದಿ: ಅಕ್ಷತಾ ಪಾಂಡವಪುರ ನಟನೆಯ ಹೊಸ ಸಿನಿಮಾ ‘ಕೌಮುದಿ’; ಸರಳವಾಗಿ ನಡೆಯಿತು ಮುಹೂರ್ತ

ಈ ಹಾಡಿನಲ್ಲಿ ಆದಿತ್ಯ ಶಶಿಕುಮಾರ್​ ಜೊತೆ ಬಾಂಬೆ ಬೆಡಗಿ ಸೋನಿ ಚೇರಿಸ್ಟ ಬಿಂದಾಸ್​ ಆಗಿ ಡ್ಯಾನ್ಸ್​ ಮಾಡಿದ್ದಾರೆ. ಸಖತ್​ ಕಲರ್​ಫುಲ್​ ಆದಂತಹ ಸೆಟ್​ನಲ್ಲಿ ಶೂಟಿಂಗ್​ ಮಾಡಲಾಗಿದೆ. ‘ಕಾದಾಡಿ’ ಸಿನಿಮಾದ ಆರು ಹಾಡುಗಳಿಗೆ ಭೀಮ್ಸ್ ಸಿಸಿರೊಲಿಯೋ ಸಂಗೀತ ನೀಡಿದ್ದಾರೆ. ಈ ಸಿನಿಮಾದಲ್ಲಿ ಆದಿತ್ಯ ಶಶಿಕುಮಾರ್​ ಅವರೊಂದಿಗೆ ಲಾವಣ್ಯ ಸಾಹುಕಾರ, ಚಾಂದಿನಿ ತಮಿಳರಸನ್, ಪೋಸಾನಿ, ಮಾರಿಮುತ್ತು, ರವಿಕಾಳೆ, ಪ್ರೇಮ್‌ ಮನೋಹರ್, ಶ್ರವಣ್‌ ರಾಘವೇಂದ್ರ ಮುಂತಾದ ಕಲಾವಿದರು ಅಭಿನಯಿಸಿದ್ದಾರೆ.

ಡಿ. ಯೋಗಿ ಪ್ರಸಾದ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಅರ್ಜುನ್‌ ಸೂರಿಸೆಟ್ಟಿ ಅವರ ಕಲಾ ನಿರ್ದೇಶನ ಈ ಸಿನಿಮಾಗೆ ಇದೆ. ಪ್ರಕಾಶ್‌ ತೋಟ ಅವರು ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ರಾಜ್‌ ಪಿಡಿ, ರಾಜ್‌ಕೃಷ್ಣ ಅವರು ನೃತ್ಯ ನಿರ್ದೇಶನ ಮಾಡಿದ್ದಾರೆ. ಚಿಕ್ಕಮಗಳೂರು, ಗೋವಾ, ಹೈದರಾಬಾದ್, ಚೆನ್ನೈ ಮುಂತಾದ ಕಡೆ ಶೂಟಿಂಗ್​ ಮಾಡಲಾಗಿದೆ. ರಿಲೀಸ್​ ಡೇಟ್​ ಬಗ್ಗೆ ಸದ್ಯದಲ್ಲೇ ಮಾಹಿತಿ ಹೊರಬೀಳಲಿದೆ. ಥ್ರಿಲ್ಲರ್​ ಅಂಶಗಳನ್ನು ಒಳಗೊಂಡಿರುವ ‘ಕಾದಾಡಿ’ ಚಿತ್ರದಲ್ಲಿ ಶಶಿಕುಮಾರ್​ ಪುತ್ರ ಆದಿತ್ಯ ಮುಖ್ಯ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಹೊಸ ಹಾಡು ‘ಆದಿತ್ಯ ಮ್ಯೂಸಿಕ್​’ ಮೂಲಕ ಬಿಡುಗಡೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ