AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾದಾಡಿ’ ಸಿನಿಮಾದ ಐಟಂ ಸಾಂಗ್​ನಲ್ಲಿ ಆದಿತ್ಯ ಶಶಿಕುಮಾರ್, ಸೋನಿ ಸಖತ್ ಡ್ಯಾನ್ಸ್

ಥ್ರಿಲ್ಲರ್​ ಅಂಶಗಳನ್ನು ಹೊಂದಿರುವ ‘ಕಾದಾಡಿ’ ಸಿನಿಮಾದಲ್ಲಿ ಶಶಿಕುಮಾರ್​ ಪುತ್ರ ಆದಿತ್ಯ ಮುಖ್ಯ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಹೊಸ ಹಾಡು ಬಿಡುಗಡೆ ಆಗಿದೆ. ಈ ಐಟಂ ಸಾಂಗ್​ನಲ್ಲಿ ಆದಿತ್ಯ ಶಶಿಕುಮಾರ್​ ಜೊತೆ ಬಾಂಬಿ ನಟಿ ಸೋನಿ ಸಖತ್​ ಆಗಿ ಹೆಜ್ಜೆ ಹಾಕಿದ್ದಾರೆ. ‘ಆದಿತ್ಯ ಮ್ಯೂಸಿಕ್​’ ಮೂಲಕ ಈ ಹಾಡು ಬಿಡುಗಡೆ ಆಗಿದ್ದು, ಅನನ್ಯಾ ಭಟ್​ ಧ್ವನಿ ನೀಡಿದ್ದಾರೆ.

‘ಕಾದಾಡಿ’ ಸಿನಿಮಾದ ಐಟಂ ಸಾಂಗ್​ನಲ್ಲಿ ಆದಿತ್ಯ ಶಶಿಕುಮಾರ್, ಸೋನಿ ಸಖತ್ ಡ್ಯಾನ್ಸ್
ಆದಿತ್ಯ ಶಶಿಕುಮಾರ್​, ಸೋನಿ
ಮದನ್​ ಕುಮಾರ್​
|

Updated on: Jun 12, 2024 | 9:09 PM

Share

ಕನ್ನಡ ಚಿತ್ರರಂಗದಲ್ಲಿ ‘ಸುಪ್ರೀಂ ಹೀರೋ’ ಎಂದು ಗುರುತಿಸಿಕೊಂಡವರು ಶಶಿಕುಮಾರ್. ಈಗ ಶಶಿಕುಮಾರ್ (Shashikumar)​ ಪುತ್ರ ಅಕ್ಷಿತ್ ಶಶಿಕುಮಾರ್ ಕೂಡ ಹೀರೋ ಆಗಿ ಸಕ್ರಿಯರಾಗಿದ್ದಾರೆ. ಅಲ್ಲದೇ ಆದಿತ್ಯ ಶಶಿಕುಮಾರ್ (Aditya Shashikumar) ಎಂಬ ಹೆಸರಿನಿಂದ ಅವರು ಸಿನಿಜರ್ನಿ ಮುಂದುವರಿಸಿದ್ದಾರೆ. ಅದಿತ್ಯ ಶಶಿಕುಮಾರ್​ ಅವರು ಈಗ ‘ಕಾದಾಡಿ’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ವಿಶೇಷ ಏನೆಂದರೆ ಬಹುಭಾಷೆಯಲ್ಲಿ ಈ ಸಿನಿಮಾ ಬರಲಿದೆ. ಕನ್ನಡ, ಹಿಂದಿ, ತೆಲುಗು, ತಮಿಳು ಭಾಷೆಗಳಲ್ಲಿ ಈ ಸಿನಿಮಾ ಸಿದ್ದವಾಗಿದೆ. ಈ ಸಿನಿಮಾಗೆ ಸಖತ್​ ಪ್ರಚಾರ ನೀಡಲಾಗುತ್ತಿದೆ. ಇತ್ತೀಚೆಗಷ್ಟೇ ‘ಕಾದಾಡಿ’ (Kaadaadi) ಸಿನಿಮಾದ ಐಟಂ ಸಾಂಗ್​ನ ಲಿರಿಕಲ್ ವಿಡಿಯೋ ರಿಲೀಸ್​​ ಮಾಡಲಾಗಿದೆ. ಈ ಸಿನಿಮಾಗೆ ಸತೀಶ್ ಮಾಲೆಂಪಾಟಿ ನಿರ್ದೇಶನ ಮಾಡಿದ್ದಾರೆ.

‘ಅರುಣಂ ಫಿಲ್ಮ್ಸ್​’ ಮೂಲಕ ‘ಕಾದಾಡಿ’ ಸಿನಿಮಾವನ್ನು ನಿರ್ಮಾಣ ಮಾಡಲಾಗಿದೆ. ಕೃಷ್ಣ ಸಾಹಿತ್ಯ ಬರೆದಿರುವ ‘ನೂರು ಪುಟದ ಜೀವನ.. ಒಂದು ಏಳೆಯ ಕಾಗದ.. ಬೇಕಾದ್ದು ಬರೆದುಕೋ, ನಿಂದೇ ಜೀವನ. ಸರಿ-ತಪ್ಪು ತಿಳಿದುಕೋ.. ತಿಳಿದ ಮೇಲೆ ಮರೆತು ತಪ್ಪು ಮಾಡಿದರೆ ಜನ್ಮ ಪಾವನ.. ಒಂದೇ ಒಂದೇ ಚಾನ್ಸ್​ ಗುರು ಮತ್ತೆ ಮತ್ತೆ ಬಾರದು..’ ಎಂದು ಶುರುವಾಗುವ ಈ ಹಾಡಿಗೆ ಅನನ್ಯಾ ಭಟ್ ಧ್ವನಿ ನೀಡಿದ್ದಾರೆ.

ಇದನ್ನೂ ಓದಿ: ಅಕ್ಷತಾ ಪಾಂಡವಪುರ ನಟನೆಯ ಹೊಸ ಸಿನಿಮಾ ‘ಕೌಮುದಿ’; ಸರಳವಾಗಿ ನಡೆಯಿತು ಮುಹೂರ್ತ

ಈ ಹಾಡಿನಲ್ಲಿ ಆದಿತ್ಯ ಶಶಿಕುಮಾರ್​ ಜೊತೆ ಬಾಂಬೆ ಬೆಡಗಿ ಸೋನಿ ಚೇರಿಸ್ಟ ಬಿಂದಾಸ್​ ಆಗಿ ಡ್ಯಾನ್ಸ್​ ಮಾಡಿದ್ದಾರೆ. ಸಖತ್​ ಕಲರ್​ಫುಲ್​ ಆದಂತಹ ಸೆಟ್​ನಲ್ಲಿ ಶೂಟಿಂಗ್​ ಮಾಡಲಾಗಿದೆ. ‘ಕಾದಾಡಿ’ ಸಿನಿಮಾದ ಆರು ಹಾಡುಗಳಿಗೆ ಭೀಮ್ಸ್ ಸಿಸಿರೊಲಿಯೋ ಸಂಗೀತ ನೀಡಿದ್ದಾರೆ. ಈ ಸಿನಿಮಾದಲ್ಲಿ ಆದಿತ್ಯ ಶಶಿಕುಮಾರ್​ ಅವರೊಂದಿಗೆ ಲಾವಣ್ಯ ಸಾಹುಕಾರ, ಚಾಂದಿನಿ ತಮಿಳರಸನ್, ಪೋಸಾನಿ, ಮಾರಿಮುತ್ತು, ರವಿಕಾಳೆ, ಪ್ರೇಮ್‌ ಮನೋಹರ್, ಶ್ರವಣ್‌ ರಾಘವೇಂದ್ರ ಮುಂತಾದ ಕಲಾವಿದರು ಅಭಿನಯಿಸಿದ್ದಾರೆ.

ಡಿ. ಯೋಗಿ ಪ್ರಸಾದ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಅರ್ಜುನ್‌ ಸೂರಿಸೆಟ್ಟಿ ಅವರ ಕಲಾ ನಿರ್ದೇಶನ ಈ ಸಿನಿಮಾಗೆ ಇದೆ. ಪ್ರಕಾಶ್‌ ತೋಟ ಅವರು ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ರಾಜ್‌ ಪಿಡಿ, ರಾಜ್‌ಕೃಷ್ಣ ಅವರು ನೃತ್ಯ ನಿರ್ದೇಶನ ಮಾಡಿದ್ದಾರೆ. ಚಿಕ್ಕಮಗಳೂರು, ಗೋವಾ, ಹೈದರಾಬಾದ್, ಚೆನ್ನೈ ಮುಂತಾದ ಕಡೆ ಶೂಟಿಂಗ್​ ಮಾಡಲಾಗಿದೆ. ರಿಲೀಸ್​ ಡೇಟ್​ ಬಗ್ಗೆ ಸದ್ಯದಲ್ಲೇ ಮಾಹಿತಿ ಹೊರಬೀಳಲಿದೆ. ಥ್ರಿಲ್ಲರ್​ ಅಂಶಗಳನ್ನು ಒಳಗೊಂಡಿರುವ ‘ಕಾದಾಡಿ’ ಚಿತ್ರದಲ್ಲಿ ಶಶಿಕುಮಾರ್​ ಪುತ್ರ ಆದಿತ್ಯ ಮುಖ್ಯ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಹೊಸ ಹಾಡು ‘ಆದಿತ್ಯ ಮ್ಯೂಸಿಕ್​’ ಮೂಲಕ ಬಿಡುಗಡೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ