AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಶ್ರೀ ಬಳಿಕ ಮದುವೆ ಬಗ್ಗೆ ಬಿಗ್ ಅಪ್​ಡೇಟ್ ಕೊಟ್ಟ ರಚಿತಾ ರಾಮ್

ನಟಿ ರಚಿತಾ ರಾಮ್ ಅವರು ಮದುವೆ ಬಗ್ಗೆ ದೊಡ್ಡ ಅಪ್​ಡೇಟ್ ಒಂದನ್ನು ಕೊಟ್ಟಿದ್ದಾರೆ. ಬರ್ತ್​ಡೇ ದಿನವೇ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಅಭಿಮಾನಿಗಳ ಜೊತೆ ಬರ್ತ್​ಡೇ ಆಚರಿಸಿಕೊಂಡ ಅವರು ಮದುವೆ ಬಗೆಗಿನ ಪ್ಲ್ಯಾನ್ ಕುರಿತು ಅಪ್​ಡೇಟ್ ಕೊಟ್ಟಿದ್ದಾರೆ.  ಇದು ಫ್ಯಾನ್ಸ್​ಗೆ ಖುಷಿ ಕೊಟ್ಟಿದೆ.

ಅನುಶ್ರೀ ಬಳಿಕ ಮದುವೆ ಬಗ್ಗೆ ಬಿಗ್ ಅಪ್​ಡೇಟ್ ಕೊಟ್ಟ ರಚಿತಾ ರಾಮ್
ರಚಿತಾ ರಾಮ್
ರಾಜೇಶ್ ದುಗ್ಗುಮನೆ
|

Updated on: Oct 03, 2025 | 1:02 PM

Share

ಆ್ಯಂಕರ್ ಅನುಶ್ರೀ ಅವರ ಮದುವೆ ಯಾವಾಗ ಎನ್ನುವ ಪ್ರಶ್ನೆಯನ್ನು ಮೊದಲಿನಿಂದಲೂ ಕೇಳುತ್ತಾ ಬರಲಾಗುತ್ತಾ ಇತ್ತು. ಕೊನೆಗೂ ಈ ಪ್ರಶ್ನೆಗೆ ಉತ್ತರ ಸಿಕ್ಕಿತ್ತು. ಆಗಸ್ಟ್ 28ರಂದು ಅವರು ವಿವಾಹ ಆದರು. ಈಗ ರಚಿತಾ ರಾಮ್ (Rachita Ram) ಅವರು ವಿವಾಹದ ಬಗ್ಗೆ ಮಾಹಿತಿ ನೀಡಿದ್ದಾರೆ. ಬರ್ತ್​ಡೇ ಸಮಯದಲ್ಲೇ ಮಾಹಿತಿ ರಿವೀಲ್ ಮಾಡಿದ್ದಾರೆ. ಇದನ್ನು ಕೇಳಿ ಫ್ಯಾನ್ಸ್ ತಲೆಯಲ್ಲಿ ಹುಳು ಬಿಟ್ಟುಕೊಂಡಿದ್ದಾರೆ.

ರಚಿತಾ ರಾಮ್​ಗೆ ಈಗ 33 ವರ್ಷ. ಅವರು ಇನ್ನೂ ಮದುವೆ ಬಗ್ಗೆ ಚಿಂತಿಸಿಲ್ಲ. ಅವರು ತಮ್ಮ ಪಾಲಿಗೆ ಬಂದ  ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಈಗ ಅವರು ವಿವಾಹದ ಬಗ್ಗೆ ಗಂಭೀರವಾಗಿ ಯೋಚಿಸಿದಂತೆ ಇದೆ. ಬರ್ತ್​ಡೇದಿನ ಮದುವೆ ಬಗ್ಗೆ ಪ್ರಶ್ನೆ ಎದುರಾಗಿದೆ. ಇದಕ್ಕೆ ಉತ್ತರಿಸಿದ ಅವರು, ‘ವಿವಾಹ ಆಗಬೇಕು ಅಂತ ನಿರ್ಧರಿಸಿದ್ದೇನೆ.  ಆದಷ್ಟು ಬೇಗ ಮದುವೆ ಆಗುತ್ತೇನೆ. ಮನೆಯಲ್ಲಿ ಹುಡುಗನ ಹುಡುಕುತ್ತಾ ಇದ್ದಾರೆ. ನಾನು ಅರೇಂಜ್ ಮ್ಯಾರೇಜ್ ಆಗ್ತೀನಿ’ ಎಂದು ಹೇಳಿದ್ದಾರೆ.

ಈ ಮೊದಲು ಅನುಶ್ರೀ ಕೂಡ ಅರೇಂಜ್ ಮ್ಯಾರೇಜ್ ಆಗ್ತೀನಿ ಎಂದೇ ಹೇಳಿದ್ದರು. ಆ ಬಳಿಕ ಅವರು ಲವ್ ಮ್ಯಾರೇಜ್ ಆಗಿದ್ದರು. ಈಗ ರಚಿತಾ ಮದುವೆ ಬಗ್ಗೆ ಕುತೂಹಲ ಮೂಡಿದೆ. ಅವರು ಮದುವೆ ಆಗುವ ಹುಡುಗನನ್ನು ಮನೆಯವರೇ ನಿರ್ಧರಿಸುತ್ತಾರೋ ಅಥವಾ ಇವರೇ ಆಯ್ಕೆ ಮಾಡಿಕೊಳ್ಳುತ್ತಾರೋ ಎನ್ನುವ ಪ್ರಶ್ನೆ ಮೂಡಿದೆ.

ಇದನ್ನೂ ಓದಿ
Image
ರಚಿತಾ ರಾಮ್​ಗೆ ಡಿ ಬಾಸ್ ದರ್ಶನ್ ಮೇಲೆ ಯಾಕೆ ಅಷ್ಟು ವಿಶೇಷ ಗೌರವ ಗೊತ್ತಾ?
Image
ಕಾಕ್ರೋಚ್ ಸುಧಿ ಕಾರಣಕ್ಕೆ ಹೊತ್ತಿ ಉರಿಯಿತು ಬಿಗ್ ಬಾಸ್ ಮನೆ
Image
‘ಕಾಂತಾರ: ಚಾಪ್ಟರ್ 1’ ಕಲೆಕ್ಷನ್ ಅಬ್ಬರಕ್ಕೆ ಬಾಕ್ಸ್ ಆಫೀಸ್ ಶೇಕ್
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ

ಮದುವೆ ಬಗ್ಗೆ ರಚಿತಾ ಮಾಹಿತಿ

ಹರಿಪ್ರಿಯಾ ಅವರು ಕನ್ನಡದ ಬೇಡಿಕೆಯ ನಟಿ ಆಗಿದ್ದರು. ವಿವಾಹದ ಬಳಿಕ ಅವರು ಸಿನಿಮಾ ರಂಗದಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ. ಈಗ ಮಗು ಜನಿಸಿದ್ದು, ಅದರ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ರಚಿತಾ ವಿವಾಹ ಆದರೆ ಅವರು ಇಂಡಸ್ಟ್ರಿ ತೊರೆಯಬಾರದು ಎಂಬುದು ಅಭಿಮಾನಿಗಳ ಕೋರಿಕೆ.

ಇದನ್ನೂ ಓದಿ: ರಚಿತಾ ರಾಮ್​ಗೆ ಡಿ ಬಾಸ್ ದರ್ಶನ್ ಮೇಲೆ ಯಾಕೆ ಅಷ್ಟು ವಿಶೇಷ ಗೌರವ ಗೊತ್ತಾ?

ರಚಿತಾ ರಾಮ್ ಅವರಿಗೆ ಈಗ ಪರಭಾಷೆಯಿಂದ ಬೇಡಿಕೆ ಸೃಷ್ಟಿ ಆಗುತ್ತಿದೆ. ತಮಿಳಿನಿ ರಜಿನಕಾಂತ್ ನಟನೆಯ ‘ಕೂಲಿ’ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿದ್ದರು. ಈಗ ಲೋಕೇಶ್ ಕನಗರಾಜ್ ಹೀರೋ ಆಗಿ ನಟಿಸುತ್ತಿರುವ ತಮಿಳು ಸಿನಿಮಾಗೆ ಇವರು ನಾಯುಕಿ ಎಂಬ ಮಾತುಗಳು ಕೂಡ ಕೇಳಿ ಬಂದಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!