AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಕ್ಟೋಬರ್​ಗೆ ಬಂದೇ ಬರ್ತೀನಿ’; ದರ್ಶನ್​ ಹಳೆಯ ವಿಡಿಯೋ ವೈರಲ್

ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ. ಆರೋಗ್ಯ ಸಮಸ್ಯೆಗಳಿಂದಾಗಿ ಅವರಿಗೆ ಆರು ವಾರಗಳ ವೈದ್ಯಕೀಯ ರಜೆ ನೀಡಲಾಗಿದೆ. ಈ ಸಂದರ್ಭದಲ್ಲಿ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ. ಅದರಲ್ಲಿ ಅವರು ಅಕ್ಟೋಬರ್​ಗೆ ಬರೋದಾಗಿ ಹೇಳಿದ್ದರು.

‘ಅಕ್ಟೋಬರ್​ಗೆ ಬಂದೇ ಬರ್ತೀನಿ’; ದರ್ಶನ್​ ಹಳೆಯ ವಿಡಿಯೋ ವೈರಲ್
ದರ್ಶನ್
ರಾಜೇಶ್ ದುಗ್ಗುಮನೆ
|

Updated on:Oct 31, 2024 | 7:43 AM

Share

ನಟ ದರ್ಶನ್ ಅವರು ಸದ್ಯ ಜಾಮೀನು ಪಡೆದು ಹೊರ ಬಂದಿದ್ದಾರೆ. ಅನಾರೋಗ್ಯದ ಕಾರಣ ನೀಡಿ ಅವರಿಗೆ ಆರು ವಾರ ಕೋರ್ಟ್ ರಿಲೀಫ್ ನೀಡಿದೆ. ಅವರಿಗೆ ಬೆನ್ನು ನೋವು ಉಲ್ಬಣಿಸಿರುವುದರಿಂದ ಚಿಕಿತ್ಸೆ ಪಡೆಯೋದು ಅನಿವಾರ್ಯ ಆಗಿದೆ. ದರ್ಶನ್ ಯಾವಾಗ ಬರುತ್ತಾರೆ ಎಂಬ ವಿಚಾರದಲ್ಲಿ ಅನೇಕರು ಭವಿಷ್ಯ ನುಡಿದಿದ್ದರು. ಈ ಪೈಕಿ ಕೆಲವು ಸತ್ಯ ಆದರೆ, ಇನ್ನೂ ಕೆಲವು ಸುಳ್ಳಾಗಿದೆ. ಹೀಗಿರುವಾಗಲೇ ದರ್ಶನ್ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ. ಆ ವಿಡಿಯೋದಲ್ಲಿ ‘ಅಕ್ಟೋಬರ್​ಗೆ ಬಂದೇ ಬರ್ತೀನಿ’ ಎಂದು ಹೇಳಿದ್ದರು. ಈ ವಿಡಿಯೋನ ಫ್ಯಾನ್ಸ್​ ವೈರಲ್ ಮಾಡುತ್ತಿದ್ದಾರೆ.

ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೂನ್ 11ರಂದು ಬಂಧನಕ್ಕೆ ಒಳಗಾದರು. ಆರಂಭದಲ್ಲಿ ಎರಡು ವಾರ ಪೊಲೀಸ್ ಕಸ್ಟಡಿಯಲ್ಲಿ ಇದ್ದ ಅವರು ನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆಒಪ್ಪಿಸಲಾಯಿತು. ಬೆಂಗಳೂರು ಜೈಲಿನಲ್ಲಿ ಐಷಾರಾಮಿ ಸವಲತ್ತು ಪಡೆಯುತ್ತಿದ್ದ ಆರೋಪದ ಮೇಲೆ ಎರಡೇ ತಿಂಗಳಲ್ಲಿ ಅವರನ್ನು ಬಳ್ಳಾರಿಗೆ ಜೈಲಿಗೆ ಶಿಫ್ಟ್ ಮಾಡಲಾಯಿತು. ಆಗ ಅಭಿಮಾನಿಗಳು ‘ನಮ್ಮ ಬಾಸ್ 70 ದಿನಗಳ ಮೇಲೆ ಯಾರಿಗೂ ಕಾಲ್​ಶೀಟ್ ಕೊಡಲ್ಲ’ ಎಂದರು.

ಈಗ ದರ್ಶನ್ ಬಳ್ಳಾರಿ ಜೈಲಿನಿಂದ ಬಿಡುಗಡೆ ಹೊಂದಿದ್ದಾರೆ. ಈ ವೇಳೆ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ. ದರ್ಶನ್ ಅವರು ಚಿತ್ರರಂಗಕ್ಕೆ ಬಂದು 25 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಅದನ್ನು ಆಚರಿಸಲಾಗಿತ್ತು. ಈ ವೇಳೆ ದರ್ಶನ್ ಮಾತನಾಡಿದ್ದರು.

‘ಅಕ್ಟೋಬರ್​​ಗೆ ಬಂದೇ ಬರ್ತೀನಿ ಚಿನ್ನಾ. ಬಂದೇ ಬರ್ತೀವಿ. ದಮ್ ಕಟ್ಟಾದ್ರೂ ದುಡಿದು ಬಿಡೋಣ’ ಎಂದು ದರ್ಶನ್ ಹೇಳಿದ್ದರು. ಈ ವಿಡಿಯೋನ ಅವರ ಫ್ಯಾನ್ಸ್ ಈಗ ವೈರಲ್ ಮಾಡುತ್ತಿದ್ದಾರೆ. ‘ಅವತ್ತೇ ಹೇಳಿದ್ವಿ ಅಕ್ಟೋಬರ್​ಗೆ ಬಂದೇ ಬರ್ತೀವಿ ಅಂತ’ ಎಂದು ಫ್ಯಾನ್ಸ್ ಬರೆದುಕೊಳ್ಳುತ್ತಾ ಇದ್ದಾರೆ.

ಇದನ್ನೂ ಓದಿ: ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ರಿಲ್ಯಾಕ್ಸ್ ಆದ ದರ್ಶನ್; ಮಗನ ಬರ್ತ್​ಡೇ ಆಚರಣೆ

ದರ್ಶನ್ ಅವರು ವೈದ್ಯಕೀಯ ವರದಿಗಳನ್ನು ನೀಡಿ ಜಾಮೀನು ಪಡೆದಿದ್ದಾರೆ. ಅವರು ಆರು ವಾರವನ್ನು ಸಂಪೂರ್ಣವಾಗಿ ಚಿಕಿತ್ಸೆಗೆ ಬಳಕೆ ಮಾಡಿಕೊಳ್ಳಬೇಕಿದೆ. ಸದ್ಯ ಅವರು ಪತ್ನಿ ನಿವಾಸದಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:32 am, Thu, 31 October 24

Follow Us
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ