AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜಾತಿ ನಿಂದನೆ ಮಾಡಿಲ್ಲ, ಎಫ್ಐಆರ್​ ರದ್ದು ಮಾಡಿ’; ಹೈಕೋರ್ಟ್ ಮೊರೆಹೋದ ನಟ ಉಪೇಂದ್ರ

‘ಉಪೇಂದ್ರ ಅವರು ಜಾತಿ, ಸಮುದಾಯಗಳ ನಡುವೆ ಸಾಮರಸ್ಯಕ್ಕೆ ಯತ್ನಿಸುತ್ತಿದ್ದಾರೆ. ಪ್ರಚಾರ ಪಡೆಯಲೆಂದು ನನ್ನ ವಿರುದ್ಧ ದೂರು ದಾಖಲಿಸಲಾಗಿದೆ.  ವಾಟ್ಸಾಪ್​​​ ಮೂಲಕ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ’ ಎಂದು ಉಪೇಂದ್ರ ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

‘ಜಾತಿ ನಿಂದನೆ ಮಾಡಿಲ್ಲ, ಎಫ್ಐಆರ್​ ರದ್ದು ಮಾಡಿ’; ಹೈಕೋರ್ಟ್ ಮೊರೆಹೋದ ನಟ ಉಪೇಂದ್ರ
ಉಪೇಂದ್ರ
Ramesha M
| Edited By: |

Updated on: Aug 14, 2023 | 1:32 PM

Share

ನಟ ಉಪೇಂದ್ರ (Upendra) ಅವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ. ಅವರ ವಿರುದ್ಧ ತನಿಖೆ ನಡೆಯುತ್ತಿದೆ. ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಉಪೇಂದ್ರಗೆ ನೋಟಿಸ್ ಜಾರಿ ಮಾಡಲಾಗಿದೆ. ಈ ಮಧ್ಯೆ  ಎಫ್ಐಆರ್ ರದ್ದು ಕೋರಿ ಉಪೇಂದ್ರ ಹೈಕೋರ್ಟ್ ಮೊರೆ ಹೋಗಿದ್ದಾರೆ. ನಟ ಉಪೇಂದ್ರ ಅರ್ಜಿಯಲ್ಲಿನ ಸಂಪೂರ್ಣ ವಿವರ ಟಿವಿ9ಗೆ ಲಭ್ಯವಾಗಿದೆ. ಕೋರ್ಟ್ ಯಾವ ರೀತಿಯಲ್ಲಿ ತೀರ್ಪು ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

‘ಯಾವುದೇ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿಲ್ಲ. ಒಳ್ಳೆಯದನ್ನು ಮಾಡುವಾಗಲೂ ಟೀಕಿಸುವವರು ಇದ್ದೇ ಇರುತ್ತಾರೆ. ಈ ಮಾತಿಗೆ ಪೂರಕವಾಗಿ ಮಾತ್ರವೇ ಗಾದೆ ಬಳಸಲಾಗಿದೆ. ಆಕ್ಷೇಪ ವ್ಯಕ್ತವಾದ ಕೂಡಲೇ ಡಿಲೀಟ್ ಮಾಡಿ ಕ್ಷಮೆ ಕೋರಿದ್ದೇನೆ. ಹಳೆಯ ಗಾದೆ ಮಾತನ್ನು ಉಲ್ಲೇಖಿಸಿದ್ದು ಜಾತಿನಿಂದನೆಯಲ್ಲ. ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಅಪರಾಧ ಎಸಗಿಲ್ಲ. ಸಮಾಜದಲ್ಲಿನ ತಾರತಮ್ಯದ ವಿರುದ್ಧ ನಾನು ಹೋರಾಡುತ್ತಿದ್ದೇನೆ’ ಎಂದು ಉಪೇಂದ್ರ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

‘ಉಪೇಂದ್ರ ಅವರು ಜಾತಿ, ಸಮುದಾಯಗಳ ನಡುವೆ ಸಾಮರಸ್ಯಕ್ಕೆ ಯತ್ನಿಸುತ್ತಿದ್ದಾರೆ. ಪ್ರಚಾರ ಪಡೆಯಲೆಂದು ನನ್ನ ವಿರುದ್ಧ ದೂರು ದಾಖಲಿಸಲಾಗಿದೆ.  ವಾಟ್ಸಾಪ್​​​ ಮೂಲಕ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ. ಪೊಲೀಸರು ಉಪೇಂದ್ರಗೆ ಕಿರುಕುಳ ನೀಡಲು ಬಯಸಿದ್ದಾರೆ. ಹೀಗಾಗಿ ಎಫ್‌ಐಆರ್​​​​ಗಳಿಗೆ ತಡೆಯಾಜ್ಞೆ ನೀಡಬೇಕು’ ಎಂದು ಉಪೇಂದ್ರ ಹೈಕೋರ್ಟ್​ನಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಉಪೇಂದ್ರ ಲೈವ್​ನಲ್ಲಿ ಹೇಳಿದ ಮಾತಿನಿಂದ ಇಂದಿನವರೆಗೆ ಆದ ಬೆಳವಣಿಗೆಗಳ ಮಾಹಿತಿಯ ಟೈಮ್​ಲೈನ್​.. 

ಇತ್ತೀಚೆಗೆ ಲೈವ್​ನಲ್ಲಿ ಮಾತನಾಡಿದ್ದ ಉಪೇಂದ್ರ ಅವರು ಆಕ್ಷೇಪಾರ್ಹ ಪದದ ಬಳಕೆ ಮಾಡಿದ್ದರು. ಈ ಬಗ್ಗೆ ಸಾಕಷ್ಟು ವಿರೋಧ ವ್ಯಕ್ತವಾಯಿತು. ಅವರು ಕ್ಷಮೆ ಕೇಳಿದ ಹೊರತಾಗಿಯೂ ಅನೇಕರು ಸಿಟ್ಟಿಗೆದ್ದಿದ್ದಾರೆ. ನಟನ ವಿರುದ್ಧ ದೂರು ದಾಖಲಾಗಿದೆ. ಈ ದೂರನ್ನು ಆಧರಿಸಿ ಬೆಂಗಳೂರಿನ ಚೆನ್ನಮ್ಮನಕೆರೆ ಪೊಲೀಸರು ಎಫ್​ಐಆರ್ ದಾಖಲು ಮಾಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು