ಕನ್ನಡದಲ್ಲಿ ಬಣ್ಣ ಹಚ್ಚಿದ ನಟಿಗೆ ಕಿರುಕುಳ ನೀಡಿದ ಆಂಧ್ರದ ಮೂರು ಐಪಿಎಸ್ ಅಧಿಕಾರಿಗಳು ವಜಾ

ಕಾದಂಬರಿ ಅವರು ಕನ್ನಡದಲ್ಲಿ ‘ಊಜಾ’ ಹೆಸರಿನ ಸಿನಿಮಾ ಮಾಡಿದ್ದಾರೆ. ತೆಲುಗಿನಲ್ಲಿ ‘ಆಟ’, ಮಲಯಾಳಂನಲ್ಲಿ ‘ಐ ಲವ್​ ಯೂ’ ಹೆಸರಿನ ಸಿನಿಮಾ ಮಾಡಿದ್ದಾರೆ. ಇದರ ಜೊತೆಗೆ ತೆಲುಗು ಸಿನಿಮಾದಲ್ಲೂ ಅವರು ನಟಿಸಿದ್ದಾರೆ. ಅವರು ಈಗ ಮುಂದೆ ಬಂದು ಈ ಬಗ್ಗೆ ಮಾತನಾಡಿದ್ದಾರೆ.

ಕನ್ನಡದಲ್ಲಿ ಬಣ್ಣ ಹಚ್ಚಿದ ನಟಿಗೆ ಕಿರುಕುಳ ನೀಡಿದ ಆಂಧ್ರದ ಮೂರು ಐಪಿಎಸ್ ಅಧಿಕಾರಿಗಳು ವಜಾ
ಕಾದಂಬರಿ
Follow us
|

Updated on:Sep 16, 2024 | 5:01 PM

ಚಿತ್ರರಂಗದಲ್ಲಿ ಒಬ್ಬರಾದ ಬಳಿಕ ಒಬ್ಬರು ಲೈಂಗಿಕ ಕಿರಕುಳ, ದೌರ್ಜನ್ಯದ ಆರೋಪ ಮಾಡುತ್ತಿದ್ದಾರೆ. ನಿರ್ಮಾಪಕರು, ನಟರ ವಿರುದ್ಧ ಹಲವು ನಟಿಯರ ವಿರುದ್ಧ ಈ ರೀತಿಯ ಗಂಭೀರ ಆರೋಪಗಳು ಕೇಳಿ ಬರುತ್ತಿವೆ. ಈಗ ಮುಂಬೈ ಮೂಲದ ಕಾದಂಬರಿ ಜೆತ್ವಾನಿ ಅವರು ಆಂಧ್ರ ಪ್ರದೇಶದ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳ ವಿರುದ್ಧ ಕಿರುಕುಳದ ಆರೋಪ ಮಾಡಿದ್ದಾರೆ. ಈ ಸಂಬಂಧ ಆ ಮೂವರನ್ನು ಅಮಾನತು ಮಾಡಲಾಗಿದೆ.

ಕಾದಂಬರಿ ಅವರು ಕನ್ನಡದಲ್ಲಿ ‘ಊಜಾ’ ಹೆಸರಿನ ಸಿನಿಮಾ ಮಾಡಿದ್ದಾರೆ. ತೆಲುಗಿನಲ್ಲಿ ‘ಆಟ’, ಮಲಯಾಳಂನಲ್ಲಿ ‘ಐ ಲವ್​ ಯೂ’ ಹೆಸರಿನ ಸಿನಿಮಾ ಮಾಡಿದ್ದಾರೆ. ಇದರ ಜೊತೆಗೆ ತೆಲುಗು ಸಿನಿಮಾದಲ್ಲೂ ಅವರು ನಟಿಸಿದ್ದಾರೆ. ಅವರು ಈಗ ಮುಂದೆ ಬಂದು ಈ ಬಗ್ಗೆ ಮಾತನಾಡಿದ್ದಾರೆ. ಅವರನ್ನು ಕಾನೂನು ಬಾಹೀರವಾಗಿ ಬಂಧಿಸಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.

ಅಮಾನತುಗೊಂಡ ಐಪಿಎಸ್ ಅಧಿಕಾರಿಯೊಬ್ಬರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಅಪರಾಧವನ್ನು ದಾಖಲಿಸುವ ಮೊದಲೇ ನಟಿಯನ್ನು ಬಂಧಿಸಲು ಆದೇಶ ನೀಡಿದ್ದರು. ಸರಿಯಾದ ಕಾನೂನು ಕಾರ್ಯವಿಧಾನಗಳನ್ನು ಅನುಸರಿಸದೆ ಈ ಮೌಖಿಕ ಸೂಚನೆಗಳನ್ನು ಪಾಲಿಸಿದ್ದಕ್ಕಾಗಿ ಮತ್ತೋರ್ವ ಅಧಿಕಾರಿಯೊಬ್ಬರು ಅಮಾನತುಗೊಂಡಿದ್ದಾರೆ. ಮತ್ತೋರ್ವ ಅಧಿಕಾರಿಯಿಂದಲೂ ಅಧಿಕಾರದ ದುರುಪಯೋಗ ಆಗಿರೋದು ಕಂಡು ಬಂದಿದೆ. ಹೀಗಾಗಿ, ಅವರನ್ನು ಅಮಾನತು ಮಾಡಲಾಗಿದೆ.

ಇದನ್ನೂ ಓದಿ: ಸ್ಯಾಂಡಲ್​ವುಡ್​ನಲ್ಲಿ ನಟಿಯರ ರಕ್ಷಣೆಗೆ ಬರುತ್ತಿದೆ ಪಾಶ್ ಸಮಿತಿ; ಇಲ್ಲಿದೆ ವಿವರ

ಆಂಧ್ರಪ್ರದೇಶ ಪೊಲೀಸರಿಗೆ ಆನ್‌ಲೈನ್‌ ಮೂಲಕ ಕಾದಂಬರಿ ಅವರು ದೂರನ್ನು ದಾಖಲು ಮಾಡಿದ್ದರು. ಆ ಬಳಿಕ ಪೊಲೀಸ್ ಮಹಾನಿರ್ದೇಶಕ ದ್ವಾರಕಾ ತಿರುಮಲ ರಾವ್ ಅವರು ಈ ಕ್ರಮ ಕೈಗೊಂಡಿದ್ದಾರೆ. ಗೃಹ ಸಚಿವೆ ವಿ.ಅನಿತಾ ಅವರು ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿತ್ತು.

ಏನಿದು ಪ್ರಕರಣ?

ಕಾದಂಬರಿ ವಿರುದ್ಧ ನಿರ್ಮಾಪಕ-ರಾಜಕಾರಣಿ ಫೋರ್ಜರಿ ಆರೋಪ ಮಾಡಿದ್ದರು.  ಈ ಪ್ರಕರಣಕ್ಕೆ ಸಂಬಂಧಿಸಿ ಅವರ ವಿರುದ್ಧ ಕೇಸ್ ದಾಖಲಾಗಿತ್ತು.  ನಂತರ ಅವರನ್ನು ಬಂಧಿಸಿ ವಿಜಯವಾಡಕ್ಕೆ ತರಲಾಗಿತ್ತು. ನಂತರ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಈ ಆರೋಪವನ್ನು ಅವರು ಅಲ್ಲಗಳೆದಿದ್ದರು. ‘ಬಾಂದ್ರಾ ಕುರ್ಲಾ ಪೊಲೀಸ್ ಠಾಣೆಯಲ್ಲಿ ನಾನು ಫೈಲ್ ಮಾಡಿದ ಕೇಸ್​ಗೆ ವಿರುದ್ಧವಾಗಿ ಅವರು ಈ ರೀತಿ ಕೇಸ್ ಹಾಕಿದ್ದಾರೆ. ಈ ನಿರ್ಮಾಪಕನಿಗೆ ಪೊಲೀಸರು ಬೆಂಬಲವಾಗಿ ನಿಂತಿದ್ದಾರೆ’ ಎಂದು ಕಾದಂಬರಿ ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:00 pm, Mon, 16 September 24