AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ವಾಗ್ ಪಂಚ್ ಸ್ವಿಂಗ್’ ಎಂದು ಪೋಸ್ಟ್​ ಮಾಡಿದ ಹೊಂಬಾಳೆ ಫಿಲ್ಮ್ಸ್​; ಅರ್ಥಕ್ಕಾಗಿ ಹುಡುಕಾಡಿದ ಫ್ಯಾನ್ಸ್

‘ಕೆಜಿಎಫ್ 2’ ಸಿನಿಮಾದಿಂದ ನಿರ್ಮಾಣ ಸಂಸ್ಥೆಗೆ ದುಡ್ಡಿನ ಹೊಳೆಯೇ ಹರಿದಿದೆ. ಮತ್ತಷ್ಟು ಚಿತ್ರಗಳನ್ನು ನಿರ್ಮಾಣ ಮಾಡಲು ಬಲ ಸಿಕ್ಕಂತೆ ಆಗಿದೆ. ಹೀಗಾಗಿ, ಹೊಸಹೊಸ ಪ್ರಾಜೆಕ್ಟ್​ಗಳನ್ನು ಘೋಷಣೆ ಮಾಡಲಾಗುತ್ತಿದೆ.

‘ಸ್ವಾಗ್ ಪಂಚ್ ಸ್ವಿಂಗ್’ ಎಂದು ಪೋಸ್ಟ್​ ಮಾಡಿದ ಹೊಂಬಾಳೆ ಫಿಲ್ಮ್ಸ್​; ಅರ್ಥಕ್ಕಾಗಿ ಹುಡುಕಾಡಿದ ಫ್ಯಾನ್ಸ್
‘ಸ್ವಾಗ್ ಪಂಚ್ ಸ್ವಿಂಗ್’ ಎಂದು ಪೋಸ್ಟ್​ ಮಾಡಿದ ಹೊಂಬಾಳೆ ಫಿಲ್ಮ್ಸ್
TV9 Web
| Edited By: |

Updated on:Jun 09, 2022 | 6:40 PM

Share

ವಿಜಯ್ ಕಿರಗಂದೂರು (Vijay Kiragandur) ಒಡೆತನದ ‘ಹೊಂಬಾಳೆ ಫಿಲ್ಮ್ಸ್​’  (Hombale Films) ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದೆ. ಸಾಕಷ್ಟು ಸಿನಿಮಾಗಳನ್ನು ಘೋಷಣೆ ಮಾಡಿದೆ. ‘ಕೆಜಿಎಫ್’ ಸರಣಿಯಿಂದ ಈ ನಿರ್ಮಾಣ ಸಂಸ್ಥೆಯ ಖ್ಯಾತಿ ದೇಶಾದ್ಯಂತ ಪಸರಿಸಿದೆ. ಹೀಗಾಗಿ, ಕನ್ನಡ ಮಾತ್ರವಲ್ಲದೆ ಪರಭಾಷೆಗಳಲ್ಲೂ ಸಿನಿಮಾ ನಿರ್ಮಾಣ ಮಾಡುತ್ತಿದೆ. ಈಗ ಹೊಸ ಘೋಷಣೆ ಮಾಡಲು ವಿಜಯ್ ಕಿರಗಂದೂರು ರೆಡಿ ಆಗಿದ್ದಾರೆ. ಜೂನ್​ 10ರಂದು ಹೊಸ ಅಪ್​ಡೇಟ್ ನೀಡುವ ಬಗ್ಗೆ ತಿಳಿಸಲಾಗಿದೆ.

ಏಪ್ರಿಲ್ 14ರಂದು ‘ಕೆಜಿಎಫ್ 2’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರ ರಿಲೀಸ್ ಆಗಿ ಎರಡು ತಿಂಗಳು ಕಳೆಯುತ್ತಾ ಬಂದಿದೆ. ಈ ಸಿನಿಮಾ 1200 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಸಿನಿಮಾದಿಂದ ನಿರ್ಮಾಣ ಸಂಸ್ಥೆಗೆ ದುಡ್ಡಿನ ಹೊಳೆಯೇ ಹರಿದಿದೆ. ಮತ್ತಷ್ಟು ಚಿತ್ರಗಳನ್ನು ನಿರ್ಮಾಣ ಮಾಡಲು ಬಲ ಸಿಕ್ಕಂತೆ ಆಗಿದೆ. ಹೀಗಾಗಿ, ಹೊಸಹೊಸ ಪ್ರಾಜೆಕ್ಟ್​ಗಳನ್ನು ಘೋಷಣೆ ಮಾಡಲಾಗುತ್ತಿದೆ.

ಇದನ್ನೂ ಓದಿ
Image
50ನೇ ದಿನ ‘ಕೆಜಿಎಫ್ 2’ ಎಷ್ಟು ಕಡೆಗಳಲ್ಲಿ ಪ್ರದರ್ಶನ ಕಾಣುತ್ತಿದೆ; ಇಲ್ಲಿದೆ ಮಾಹಿತಿ
Image
Srinidhi Shetty: ಗ್ಲಾಮರಸ್ ಲುಕ್​ನಲ್ಲಿ ‘ಕೆಜಿಎಫ್’ ಬೆಡಗಿ ಶ್ರೀನಿಧಿ ಶೆಟ್ಟಿ; ಫೋಟೋಗಳು ಇಲ್ಲಿವೆ
Image
ಮಧ್ಯರಾತ್ರಿ ಸಿನಿಮಾ ವೀಕ್ಷಿಸಿದ ಶ್ರೀನಿಧಿ ಶೆಟ್ಟಿ, ಗರುಡ, ವಿನಯ್ ರಾಜ್​ಕುಮಾರ್..; ಚಿತ್ರ ನೋಡಿ ಆಶಾ ಭಟ್ ಹೇಳಿದ್ದೇನು?
Image
Srinidhi Shetty: ‘ಕೆಜಿಎಫ್’ ಬೆಡಗಿ ಶ್ರೀನಿಧಿ ಶೆಟ್ಟಿ ಕ್ಯೂಟ್ ಫೋಟೋ ಗ್ಯಾಲರಿ

ಇಂದು (ಜೂನ್ 9) ಹೊಂಬಾಳೆ ಫಿಲ್ಮ್ಸ್​ ಟ್ವೀಟ್ ಒಂದನ್ನು ಮಾಡಿದೆ. ಪೋಸ್ಟರ್ ಒಂದನ್ನು ಹಂಚಿಕೊಳ್ಳಲಾಗಿದ್ದು, ಇದರಲ್ಲಿ ‘ಸ್ವಾಗ್ ಪಂಚ್ ಸ್ವಿಂಗ್’ ಎಂದು ಬರೆಯಲಾಗಿದೆ. ಆ್ಯಕ್ಷನ್ ಆರಂಭವಾಗಲಿದೆ ಎನ್ನುವ ಶಬ್ದ ಕ್ಯಾಪ್ಶನ್​​ಲ್ಲಿದೆ. ಹೀಗಾಗಿ ಸಾಕಷ್ಟು ಕುತೂಹಲ ಮೂಡಿದೆ.

ಈ ಪೋಸ್ಟ್​ ನೋಡಿ ಅಭಿಮಾನಿಗಳು ನಾನಾ ರೀತಿಯ ಊಹೆಗಳನ್ನು ಮುಂದಿಡುತ್ತಿದ್ದಾರೆ. ‘ಇದು ಯಶ್ ಅವರ 19 ಚಿತ್ರ ಆಗಿರಲಿಕ್ಕಿಲ್ಲ. ಇದು ಸುಧಾ ಕೊಂಗಾರ ಸಿನಿಮಾ ಬಗೆಗಿನ ಅಪ್​ಡೇಟ್​’ ಎಂದು ಅಭಿಮಾನಿಯೊಬ್ಬರು ಬರೆದುಕೊಂಡಿದ್ದಾರೆ. ‘ಯುವರಾಜ್​ ಕುಮಾರ್-ಸಂತೋಷ್​ ಆನಂದ್​ರಾಮ್​ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ಆ ಬಗೆಗಿನ ಅಪ್​ಡೇಟ್​ ಇರಬಹುದು’ ಎಂದು ಕೆಲವರು ಹೇಳುತ್ತಿದ್ದಾರೆ.

ಇದನ್ನೂ ಓದಿ: 50ನೇ ದಿನ ‘ಕೆಜಿಎಫ್ 2’ ಎಷ್ಟು ಕಡೆಗಳಲ್ಲಿ ಪ್ರದರ್ಶನ ಕಾಣುತ್ತಿದೆ; ಇಲ್ಲಿದೆ ಮಾಹಿತಿ

‘ನಿನ್ನಿಂದಲೇ’, ‘ಮಾಸ್ಟರ್​​ಪೀಸ್​’, ‘ರಾಜಕುಮಾರ’, ‘ಕೆಜಿಎಫ್: ಚಾಪ್ಟರ್ 1’, ‘ಯುವರತ್ನ’, ‘ಕೆಜಿಎಫ್: ಚಾಪ್ಟರ್​ 2’ ಚಿತ್ರಗಳನ್ನು ‘ಹೊಂಬಾಳೆ ಫಿಲ್ಮ್ಸ್​’ ಇಲ್ಲಿಯವರೆಗೆ ನಿರ್ಮಾಣ ಮಾಡಿದೆ. ‘ಕಾಂತಾರ’, ‘ರಾಘವೇಂದ್ರ ಸ್ಟೋರ್ಸ್​’, ‘ಸಲಾರ್’, ‘ಬಘೀರ’, ‘ರಿಚರ್ಡ್​ ಆ್ಯಂಟನಿ’ ಸಿನಿಮಾಗಳು ನಿರ್ಮಾಣ ಹಂತದಲ್ಲಿವೆ. ಜೂನ್​ 10ರಂದು ಯಾವ ರೀತಿಯ ಅಪ್​ಡೇಟ್ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:36 pm, Thu, 9 June 22

Follow Us
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ