Yash: ಯಶ್​ ಮನೆ ಬಾಗಿಲು ತಟ್ಟಿದ ರಾಜಕೀಯ ಮುಖಂಡರು; ರಾಕಿಂಗ್ ಸ್ಟಾರ್ ನಿರ್ಧಾರ ಏನು?

ರಾಜಕೀಯ ವಿಚಾರದಲ್ಲಿ ಯಶ್ ಮುಂದಿನ ನಡೆ ಏನು ಎನ್ನುವ ಬಗ್ಗೆ ಅನೇಕರಿಗೆ ಕುತೂಹಲ ಇತ್ತು. ಇದಕ್ಕೆ ಅವರ ಆಪ್ತ ಬಳಗದಿಂದ ಉತ್ತರ ಸಿಕ್ಕಿದೆ.

Yash: ಯಶ್​ ಮನೆ ಬಾಗಿಲು ತಟ್ಟಿದ ರಾಜಕೀಯ ಮುಖಂಡರು; ರಾಕಿಂಗ್ ಸ್ಟಾರ್ ನಿರ್ಧಾರ ಏನು?
ಯಶ್
Follow us
|

Updated on: Apr 07, 2023 | 12:15 PM

ವಿಧಾನಸಭೆ ಚುನಾವಣೆಗೆ ತಿಂಗಳು ಬಾಕಿ ಇದೆ. ಮುಂದಿನ 30 ದಿನಗಳಲ್ಲಿ ಮತದಾರರನ್ನು ಸೆಳೆಯಲು ಎಲ್ಲ ರೀತಿಯ ತಯಾರಿಗಳನ್ನು ರಾಜಕೀಯ ಮುಖಂಡರು ಮಾಡಿಕೊಳ್ಳುತ್ತಿದ್ದಾರೆ. ಎಲ್ಲ ಪಕ್ಷಗಳು ಸ್ಟಾರ್ ಪ್ರಚಾರಕರನ್ನು ಕರೆತರಲು ಪ್ಲ್ಯಾನ್ ರೂಪಿಸಿವೆ. ಬಿಜೆಪಿ ಮುಖಂಡರು ಈಗಾಗಲೇ ಸುದೀಪ್ (Sudeep) ಅವರನ್ನು ಕರೆತಂದಿದ್ದಾರೆ. ಬಿಜೆಪಿಯ ಪ್ರಮುಖ ನಾಯಕರ ಪರ ಕಿಚ್ಚ ಪ್ರಚಾರ ಮಾಡಲಿದ್ದಾರೆ. ಯಶ್ ಮುಂದಿನ ನಡೆ ಏನು ಎನ್ನುವ ಬಗ್ಗೆ ಅನೇಕರಿಗೆ ಕುತೂಹಲ ಇತ್ತು. ಇದಕ್ಕೆ ಅವರ ಆಪ್ತ ಬಳಗದಿಂದ ಉತ್ತರ ಸಿಕ್ಕಿದೆ. ಈ ಬಾರಿ ಯಶ್ (Yash) ರಾಜಕೀಯಕ್ಕೆ ಬರುತ್ತಿಲ್ಲ ಎನ್ನಲಾಗಿದೆ.

ಚುನಾವಣಾ ಪ್ರಚಾರ ಮಾಡಿದ್ದ ಯಶ್

ಈ ಮೊದಲು ವಿಧಾನಸಭೆ ಚುನಾವಣೆಯಲ್ಲಿ ಯಶ್ ಅವರು ಪಕ್ಷ ನೋಡದೆ ಕೆಲ ರಾಜಕಾರಣಿಗಳ ಪರ ಪ್ರಚಾರ ಮಾಡಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಪರ ದೊಡ್ಡಮಟ್ಟದ ಕ್ಯಾಂಪೇನ್ ಮಾಡಿದ್ದರು. ಸುಮಲತಾ ಗೆಲ್ಲೋಕೆ ಯಶ್ ಅವರ ಹವಾ ಕೂಡ ಕಾರಣ ಆಗಿತ್ತು. ಈಗ ಯಶ್ ಖ್ಯಾತಿ ಹೆಚ್ಚಿದೆ. ‘ಕೆಜಿಎಫ್ 2’ ಮೂಲಕ ಮನೆಮನೆಗೂ ಅವರು ಗೊತ್ತಾಗಿದ್ದಾರೆ. ಅವರ ಜನಪ್ರಿಯತೆಯನ್ನು ಬಳಸಿಕೊಳ್ಳಲು ಪ್ರಮುಖ ಪಕ್ಷದವರು ಪ್ಲ್ಯಾನ್ ಮಾಡಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ, ಯಶ್ ಯಾರ ಪರವೂ ಪ್ರಚಾರ ಮಾಡುತ್ತಿಲ್ಲವಂತೆ.

ಯಶ್ ಭೇಟಿ ಮಾಡಿದ ರಾಜಕಾರಣಿಗಳು

ಯಶ್ ಅವರನ್ನು ಅನೇಕ ರಾಜಕಾರಣಿಗಳು ಭೇಟಿ ಮಾಡಿದ್ದಾರೆ. ಆದರೆ, ಯಾವ ಪಕ್ಷದ ಪರವೂ ಯಶ್ ಪ್ರಚಾರ ಮಾಡುತ್ತಿಲ್ಲ. ಸದ್ಯ ಅವರು ತಮ್ಮ 19ನೇ ಸಿನಿಮಾ ಬಗ್ಗೆ ಸಂಪೂರ್ಣ ಗಮನ ಕೊಟ್ಟಿದ್ದಾರೆ. ಈ ಕಾರಣಕ್ಕೆ ಯಶ್ ಚುನಾವಣೆಯ ಕಡೆ ಗಮನ ನೀಡುತ್ತಿಲ್ಲ ಎನ್ನಲಾಗಿದೆ.

ಈ ತಿಂಗಳೇ ಘೋಷಣೆ ಆಗಲಿದೆ ಯಶ್ ಹೊಸ ಸಿನಿಮಾ?

ಯಶ್ ನಟನೆಯ ‘ಕೆಜಿಎಫ್ 2’ ಸಿನಿಮಾ ತೆರೆಗೆ ಬಂದಿದ್ದು 2022ರ ಏಪ್ರಿಲ್ 14ರಂದು. ಈ ಸಿನಿಮಾ ತೆರೆಗೆ ಬಂದು ಒಂದು ವರ್ಷ ಕಳೆಯುತ್ತಾ ಬಂದಿದೆ. ಆದರೆ, ಹೊಸ ಸಿನಿಮಾ ಘೋಷಣೆ ಆಗಿಲ್ಲ. ಮೂಲಗಳ ಪ್ರಕಾರ, ಈ ತಿಂಗಳಾಂತ್ಯಕ್ಕೆ ಯಶ್ ಹೊಸ ಸಿನಿಮಾ ಘೋಷಣೆ ಆಗಲಿದೆಯಂತೆ.

ಇದನ್ನೂ ಓದಿ: ಬಿಜೆಪಿಗೆ ಬೆಂಬಲ ಘೋಷಿಸಿದ ಬೆನ್ನಲ್ಲೇ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆದ ಕಿಚ್ಚ ಸುದೀಪ್; ಸೆಟ್​ನ ಫೋಟೋ ಲೀಕ್

ರಿಷಬ್ ಶೆಟ್ಟಿಯೂ ಪ್ರಚಾರ ಮಾಡಲ್ಲ

‘ಕಾಂತಾರ’ ಚಿತ್ರದಿಂದ ರಿಷಬ್ ಶೆಟ್ಟಿ ಖ್ಯಾತಿ ಹೆಚ್ಚಿದೆ. ಆದರೆ, ಅವರು ಕೂಡ ಪ್ರಚಾರ ಮಾಡದಿರಲು ನಿರ್ಧರಿಸಿದ್ದಾರೆ. ‘ಕಾಂತಾರ 2’ ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ