AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ಯಶ್​ ಮನೆ ಬಾಗಿಲು ತಟ್ಟಿದ ರಾಜಕೀಯ ಮುಖಂಡರು; ರಾಕಿಂಗ್ ಸ್ಟಾರ್ ನಿರ್ಧಾರ ಏನು?

ರಾಜಕೀಯ ವಿಚಾರದಲ್ಲಿ ಯಶ್ ಮುಂದಿನ ನಡೆ ಏನು ಎನ್ನುವ ಬಗ್ಗೆ ಅನೇಕರಿಗೆ ಕುತೂಹಲ ಇತ್ತು. ಇದಕ್ಕೆ ಅವರ ಆಪ್ತ ಬಳಗದಿಂದ ಉತ್ತರ ಸಿಕ್ಕಿದೆ.

Yash: ಯಶ್​ ಮನೆ ಬಾಗಿಲು ತಟ್ಟಿದ ರಾಜಕೀಯ ಮುಖಂಡರು; ರಾಕಿಂಗ್ ಸ್ಟಾರ್ ನಿರ್ಧಾರ ಏನು?
ಯಶ್
ರಾಜೇಶ್ ದುಗ್ಗುಮನೆ
|

Updated on: Apr 07, 2023 | 12:15 PM

Share

ಮುಖ್ಯಾಂಶಗಳು

  • ಬಿಜೆಪಿ ಪರ ಪ್ರಚಾರ ಮಾಡಲಿದ್ದಾರೆ ಸುದೀಪ್
  • ಯಶ್ ಮುಂದಿನ ನಡೆ ಏನು ಎಂಬ ಬಗ್ಗೆ ಮೂಡಿತ್ತು ಅನುಮಾನ
  • ಈ ಬಾರಿ ಯಾರ ಪರವಾಗಿಯೂ ಯಶ್ ಪ್ರಚಾರ ಮಾಡಲ್ಲ

ವಿಧಾನಸಭೆ ಚುನಾವಣೆಗೆ ತಿಂಗಳು ಬಾಕಿ ಇದೆ. ಮುಂದಿನ 30 ದಿನಗಳಲ್ಲಿ ಮತದಾರರನ್ನು ಸೆಳೆಯಲು ಎಲ್ಲ ರೀತಿಯ ತಯಾರಿಗಳನ್ನು ರಾಜಕೀಯ ಮುಖಂಡರು ಮಾಡಿಕೊಳ್ಳುತ್ತಿದ್ದಾರೆ. ಎಲ್ಲ ಪಕ್ಷಗಳು ಸ್ಟಾರ್ ಪ್ರಚಾರಕರನ್ನು ಕರೆತರಲು ಪ್ಲ್ಯಾನ್ ರೂಪಿಸಿವೆ. ಬಿಜೆಪಿ ಮುಖಂಡರು ಈಗಾಗಲೇ ಸುದೀಪ್ (Sudeep) ಅವರನ್ನು ಕರೆತಂದಿದ್ದಾರೆ. ಬಿಜೆಪಿಯ ಪ್ರಮುಖ ನಾಯಕರ ಪರ ಕಿಚ್ಚ ಪ್ರಚಾರ ಮಾಡಲಿದ್ದಾರೆ. ಯಶ್ ಮುಂದಿನ ನಡೆ ಏನು ಎನ್ನುವ ಬಗ್ಗೆ ಅನೇಕರಿಗೆ ಕುತೂಹಲ ಇತ್ತು. ಇದಕ್ಕೆ ಅವರ ಆಪ್ತ ಬಳಗದಿಂದ ಉತ್ತರ ಸಿಕ್ಕಿದೆ. ಈ ಬಾರಿ ಯಶ್ (Yash) ರಾಜಕೀಯಕ್ಕೆ ಬರುತ್ತಿಲ್ಲ ಎನ್ನಲಾಗಿದೆ.

ಚುನಾವಣಾ ಪ್ರಚಾರ ಮಾಡಿದ್ದ ಯಶ್

ಈ ಮೊದಲು ವಿಧಾನಸಭೆ ಚುನಾವಣೆಯಲ್ಲಿ ಯಶ್ ಅವರು ಪಕ್ಷ ನೋಡದೆ ಕೆಲ ರಾಜಕಾರಣಿಗಳ ಪರ ಪ್ರಚಾರ ಮಾಡಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಪರ ದೊಡ್ಡಮಟ್ಟದ ಕ್ಯಾಂಪೇನ್ ಮಾಡಿದ್ದರು. ಸುಮಲತಾ ಗೆಲ್ಲೋಕೆ ಯಶ್ ಅವರ ಹವಾ ಕೂಡ ಕಾರಣ ಆಗಿತ್ತು. ಈಗ ಯಶ್ ಖ್ಯಾತಿ ಹೆಚ್ಚಿದೆ. ‘ಕೆಜಿಎಫ್ 2’ ಮೂಲಕ ಮನೆಮನೆಗೂ ಅವರು ಗೊತ್ತಾಗಿದ್ದಾರೆ. ಅವರ ಜನಪ್ರಿಯತೆಯನ್ನು ಬಳಸಿಕೊಳ್ಳಲು ಪ್ರಮುಖ ಪಕ್ಷದವರು ಪ್ಲ್ಯಾನ್ ಮಾಡಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ, ಯಶ್ ಯಾರ ಪರವೂ ಪ್ರಚಾರ ಮಾಡುತ್ತಿಲ್ಲವಂತೆ.

ಯಶ್ ಭೇಟಿ ಮಾಡಿದ ರಾಜಕಾರಣಿಗಳು

ಯಶ್ ಅವರನ್ನು ಅನೇಕ ರಾಜಕಾರಣಿಗಳು ಭೇಟಿ ಮಾಡಿದ್ದಾರೆ. ಆದರೆ, ಯಾವ ಪಕ್ಷದ ಪರವೂ ಯಶ್ ಪ್ರಚಾರ ಮಾಡುತ್ತಿಲ್ಲ. ಸದ್ಯ ಅವರು ತಮ್ಮ 19ನೇ ಸಿನಿಮಾ ಬಗ್ಗೆ ಸಂಪೂರ್ಣ ಗಮನ ಕೊಟ್ಟಿದ್ದಾರೆ. ಈ ಕಾರಣಕ್ಕೆ ಯಶ್ ಚುನಾವಣೆಯ ಕಡೆ ಗಮನ ನೀಡುತ್ತಿಲ್ಲ ಎನ್ನಲಾಗಿದೆ.

ಈ ತಿಂಗಳೇ ಘೋಷಣೆ ಆಗಲಿದೆ ಯಶ್ ಹೊಸ ಸಿನಿಮಾ?

ಯಶ್ ನಟನೆಯ ‘ಕೆಜಿಎಫ್ 2’ ಸಿನಿಮಾ ತೆರೆಗೆ ಬಂದಿದ್ದು 2022ರ ಏಪ್ರಿಲ್ 14ರಂದು. ಈ ಸಿನಿಮಾ ತೆರೆಗೆ ಬಂದು ಒಂದು ವರ್ಷ ಕಳೆಯುತ್ತಾ ಬಂದಿದೆ. ಆದರೆ, ಹೊಸ ಸಿನಿಮಾ ಘೋಷಣೆ ಆಗಿಲ್ಲ. ಮೂಲಗಳ ಪ್ರಕಾರ, ಈ ತಿಂಗಳಾಂತ್ಯಕ್ಕೆ ಯಶ್ ಹೊಸ ಸಿನಿಮಾ ಘೋಷಣೆ ಆಗಲಿದೆಯಂತೆ.

ಇದನ್ನೂ ಓದಿ: ಬಿಜೆಪಿಗೆ ಬೆಂಬಲ ಘೋಷಿಸಿದ ಬೆನ್ನಲ್ಲೇ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆದ ಕಿಚ್ಚ ಸುದೀಪ್; ಸೆಟ್​ನ ಫೋಟೋ ಲೀಕ್

ರಿಷಬ್ ಶೆಟ್ಟಿಯೂ ಪ್ರಚಾರ ಮಾಡಲ್ಲ

‘ಕಾಂತಾರ’ ಚಿತ್ರದಿಂದ ರಿಷಬ್ ಶೆಟ್ಟಿ ಖ್ಯಾತಿ ಹೆಚ್ಚಿದೆ. ಆದರೆ, ಅವರು ಕೂಡ ಪ್ರಚಾರ ಮಾಡದಿರಲು ನಿರ್ಧರಿಸಿದ್ದಾರೆ. ‘ಕಾಂತಾರ 2’ ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು